<p><strong>ಕೋಲಾರ</strong>: ಇ–ಖಾತಾ ಮಾಡಿಕೊಡಲು ಲಂಚ ಪಡೆಯುವ ವೇಳೆ ತಾಲ್ಲೂಕಿನ ಅರೆಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಿವಾನಂದ ಕುಮಾರ್ (55), ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಕೋಡಿಕಣ್ಣೂರು ಗ್ರಾಮದ ಎಂ.ನಾಗರಾಜು ಎಂಬುವರಿಂದ ಆರೋಪಿಯು ₹ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಕೆ.ಉಮೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.</p>.<p>‘ಕಾರ್ಯಾಚರಣೆಯಲ್ಲಿ ಹಣ ವಶಕ್ಕೆ ಪಡೆದು ಪಿಡಿಒ ಶಿವಾನಂದ ಕುಮಾರ್ ಎಂಬುವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಉಮೇಶ್ ತಿಳಿಸಿದರು.</p>.<p>‘ಇ–ಖಾತಾ ವಿಚಾರವಾಗಿ ನಾಗರಾಜು ಎಂಬುವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ಪಿಡಿಒ ₹ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾರ್ಚ್ 13ರಂದು ₹ 5 ಸಾವಿರ ನಗದು ಹಾಗೂ ಇನ್ನು ₹ 5 ಸಾವಿರವನ್ನು ಫೋನ್ ಪೇ ಮೂಲಕ ಪಡೆದುಕೊಂಡಿದ್ದರು. ಇನ್ನುಳಿದ ₹ 5 ಸಾವಿರ ನೀಡುವಂತೆ ಪದೇಪದೇ ಒತ್ತಾಯಿಸುತ್ತಿದ್ದರು. ಈ ಸಂಬಂಧ ನಾಗರಾಜು ದೂರು ನೀಡಿದ್ದರು. ಆ ದೂರಿನ ಮೇಲೆ ಬುಧವಾರ ದಾಳಿ ನಡೆಸಿದ್ದು, ಕಚೇರಿಯಲ್ಲಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ’ ಎಂದು ಹೇಳಿದರು.</p>.<p>ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ಗಳಾದ ಯಶವಂತಕುಮಾರ್, ಆಂಜನಪ್ಪ, ಸಿಬ್ಬಂದಿ ವಾಸು, ಸುಬ್ರಮಣಿ, ನಾಗವೇಣಿ, ಪವಿತ್ರಾ, ದ್ಯಾವಪ್ಪ ಹಾಗೂ ನಾಗಭೂಷಣ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಇ–ಖಾತಾ ಮಾಡಿಕೊಡಲು ಲಂಚ ಪಡೆಯುವ ವೇಳೆ ತಾಲ್ಲೂಕಿನ ಅರೆಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಿವಾನಂದ ಕುಮಾರ್ (55), ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಕೋಡಿಕಣ್ಣೂರು ಗ್ರಾಮದ ಎಂ.ನಾಗರಾಜು ಎಂಬುವರಿಂದ ಆರೋಪಿಯು ₹ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಕೆ.ಉಮೇಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.</p>.<p>‘ಕಾರ್ಯಾಚರಣೆಯಲ್ಲಿ ಹಣ ವಶಕ್ಕೆ ಪಡೆದು ಪಿಡಿಒ ಶಿವಾನಂದ ಕುಮಾರ್ ಎಂಬುವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಉಮೇಶ್ ತಿಳಿಸಿದರು.</p>.<p>‘ಇ–ಖಾತಾ ವಿಚಾರವಾಗಿ ನಾಗರಾಜು ಎಂಬುವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು ಪಿಡಿಒ ₹ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾರ್ಚ್ 13ರಂದು ₹ 5 ಸಾವಿರ ನಗದು ಹಾಗೂ ಇನ್ನು ₹ 5 ಸಾವಿರವನ್ನು ಫೋನ್ ಪೇ ಮೂಲಕ ಪಡೆದುಕೊಂಡಿದ್ದರು. ಇನ್ನುಳಿದ ₹ 5 ಸಾವಿರ ನೀಡುವಂತೆ ಪದೇಪದೇ ಒತ್ತಾಯಿಸುತ್ತಿದ್ದರು. ಈ ಸಂಬಂಧ ನಾಗರಾಜು ದೂರು ನೀಡಿದ್ದರು. ಆ ದೂರಿನ ಮೇಲೆ ಬುಧವಾರ ದಾಳಿ ನಡೆಸಿದ್ದು, ಕಚೇರಿಯಲ್ಲಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ’ ಎಂದು ಹೇಳಿದರು.</p>.<p>ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ಗಳಾದ ಯಶವಂತಕುಮಾರ್, ಆಂಜನಪ್ಪ, ಸಿಬ್ಬಂದಿ ವಾಸು, ಸುಬ್ರಮಣಿ, ನಾಗವೇಣಿ, ಪವಿತ್ರಾ, ದ್ಯಾವಪ್ಪ ಹಾಗೂ ನಾಗಭೂಷಣ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>