<p><strong>ಕೋಲಾರ:</strong> ದುರಾಸೆಯೇ ಭ್ರಷ್ಟಾಚಾರ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೂ ಕಾರಣ. ಇದರ ನಿವಾರಣೆಗಾಗಿ ಆಡಳಿತಾತ್ಮಕ ವಿಚಾರಗಳಲ್ಲಿ ಸೇವಾ ಮನೋಭಾವನೆಯ ತೃಪ್ತಿ ಅವಶ್ಯಕ. ಈ ತೃಪ್ತಿಯು ಮಾನವೀಯ ಮೌಲ್ಯಗಳ ಅನುಸರಣೆ ಹಾಗೂ ಪಾಲನೆಯ ಮೂಲಕ ಸಾಧ್ಯವಾಗುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.</p>.<p>ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸುರ್ವಣಗಂಗೆ ಕ್ಯಾಂಪಸ್ನಲ್ಲಿ ಪಿಎಂ ಉಷಾ ಕೋಶ ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಸಂವಿಧಾನ ದಿನ ಮತ್ತು ಜೀವನದ ಸರ್ವಾಂಗೀಣ ಅಭಿವೃದ್ಧಿ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವ ಎಂಬ ವಿಷಯದ ಕುರಿತು ತಮ್ಮದೇ ಆದ ಮೂರು ಪರಿಕಲ್ಪನೆಗಳ ಮೂಲಕ ವಿಚಾರಧಾರೆಗಳನ್ನು ಅವರು ಮಂಡಿಸಿದರು.</p>.<p>ದುರಾಸೆ, ತೃಪ್ತಿ, ಮಾನವೀಯತೆ ವಿಚಾರಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ, ಸಮಾಜದಲ್ಲಿನ ಅವ್ಯವಸ್ಧೆ ಹಾಗೂ ರಾಷ್ಟ್ರವನ್ನು ಆಳ್ವಿಕೆ ಮಾಡುತ್ತಿರುವ ನಾಯಕರ ಪ್ರವೃತ್ತಿಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಾತ್ಮಾಕವಾಗಿ ಎಲ್ಲಾ ಕ್ಷೇತ್ರಗಳಿಲ್ಲೂ ಸಮಾನರು. ಆದರೆ, ದುರಾಸೆಯೆಂಬ ಪಿಡುಗಿನ ಮೂಲಕ ಸಮಾಜದಲ್ಲಿ ಅನೇಕ ಜನರು ಅವಕಾಶಗಳಿಂದ ವಂಚಿತರಾಗಿದ್ದಾರೆ. ಸರ್ಕಾರದಿಂದ ಜನರಿಗೆ ತಲುಪಬೇಕಾಗಿದ್ದ ಸವಲತ್ತುಗಳು ಸರಿಯಾಗಿ ತಲುಪುತ್ತಿಲ್ಲ. ತೃಪ್ತಿ ಹಾಗೂ ಮಾನವೀಯ ಮೌಲ್ಯಗಳನ್ನು ತಿಳಿಸುವ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕೆ ನ್ಯಾಯ ಸಲ್ಲಿಸಬಹುದು ಎಂದರು.</p>.<p>ಭ್ರಷ್ಟಾಚಾರಕ್ಕೂ ದುರಾಸೆಯೇ ಕಾರಣವಾಗಿದೆ. ಮಾನವೀಯ ಮೌಲ್ಯಗಳು ಉಳಿಯಲು ಜನರ ಹಾಗೂ ಆಡಳಿತಾಂಗದಲ್ಲಿ ಕೆಲಸ ಮಾಡುವವರ ಮನಸ್ಥಿತಿ ಬದಲಾವಣೆಯಾಗಬೇಕು. ಸಮಾಜದಲ್ಲಿ ಸಿಗುವ ಸೌಲಭ್ಯಗಳು ಪಾರದರ್ಶಕವಾಗಿ ಅರ್ಹರಿಗೆ ತಲುಪಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ನಿರಂಜನ ವಾನಳ್ಳಿ, ದೇಶದ ಅಭಿವೃದ್ಧಿಗೆ ಯುವಜನತೆಯು ವರದಕ್ಷಿಣೆ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಈ ಸಂಬಂಧ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಮಾಡಬೇಕು ಎಂದರು.</p>.<p>ವರದಕ್ಷಿಣೆ ಪಿಡುಗು, ಸಮಾಜದಲ್ಲಿನ ಅಸಮಾನತೆ, ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಸಮಾಜ, ದೇಶ ಸರಿಹೋಗಲು ಯುವಕರ ಪಾತ್ರ ಅತಿ ಮುಖ್ಯವಾದುದು ಎಂದು ಹೇಳಿದರು.</p>.<p>ಸಮಾರಂಭದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಪ್ರೊ.ಡಿ.ಕುಮುದಾ, ರಾಜ್ಯಶಾಸ್ತ್ರದ ಸಹ ಪ್ರಾಧ್ಯಾಪಕ ರಮೇಶ್, ಹರ್ಷ ಹಾಗೂ ಸುಮತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ದುರಾಸೆಯೇ ಭ್ರಷ್ಟಾಚಾರ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೂ ಕಾರಣ. ಇದರ ನಿವಾರಣೆಗಾಗಿ ಆಡಳಿತಾತ್ಮಕ ವಿಚಾರಗಳಲ್ಲಿ ಸೇವಾ ಮನೋಭಾವನೆಯ ತೃಪ್ತಿ ಅವಶ್ಯಕ. ಈ ತೃಪ್ತಿಯು ಮಾನವೀಯ ಮೌಲ್ಯಗಳ ಅನುಸರಣೆ ಹಾಗೂ ಪಾಲನೆಯ ಮೂಲಕ ಸಾಧ್ಯವಾಗುತ್ತದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.</p>.<p>ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸುರ್ವಣಗಂಗೆ ಕ್ಯಾಂಪಸ್ನಲ್ಲಿ ಪಿಎಂ ಉಷಾ ಕೋಶ ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಿಂದ ಸಂವಿಧಾನ ದಿನ ಮತ್ತು ಜೀವನದ ಸರ್ವಾಂಗೀಣ ಅಭಿವೃದ್ಧಿ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನಾತ್ಮಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವ ಎಂಬ ವಿಷಯದ ಕುರಿತು ತಮ್ಮದೇ ಆದ ಮೂರು ಪರಿಕಲ್ಪನೆಗಳ ಮೂಲಕ ವಿಚಾರಧಾರೆಗಳನ್ನು ಅವರು ಮಂಡಿಸಿದರು.</p>.<p>ದುರಾಸೆ, ತೃಪ್ತಿ, ಮಾನವೀಯತೆ ವಿಚಾರಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ, ಸಮಾಜದಲ್ಲಿನ ಅವ್ಯವಸ್ಧೆ ಹಾಗೂ ರಾಷ್ಟ್ರವನ್ನು ಆಳ್ವಿಕೆ ಮಾಡುತ್ತಿರುವ ನಾಯಕರ ಪ್ರವೃತ್ತಿಗಳ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನಾತ್ಮಾಕವಾಗಿ ಎಲ್ಲಾ ಕ್ಷೇತ್ರಗಳಿಲ್ಲೂ ಸಮಾನರು. ಆದರೆ, ದುರಾಸೆಯೆಂಬ ಪಿಡುಗಿನ ಮೂಲಕ ಸಮಾಜದಲ್ಲಿ ಅನೇಕ ಜನರು ಅವಕಾಶಗಳಿಂದ ವಂಚಿತರಾಗಿದ್ದಾರೆ. ಸರ್ಕಾರದಿಂದ ಜನರಿಗೆ ತಲುಪಬೇಕಾಗಿದ್ದ ಸವಲತ್ತುಗಳು ಸರಿಯಾಗಿ ತಲುಪುತ್ತಿಲ್ಲ. ತೃಪ್ತಿ ಹಾಗೂ ಮಾನವೀಯ ಮೌಲ್ಯಗಳನ್ನು ತಿಳಿಸುವ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕೆ ನ್ಯಾಯ ಸಲ್ಲಿಸಬಹುದು ಎಂದರು.</p>.<p>ಭ್ರಷ್ಟಾಚಾರಕ್ಕೂ ದುರಾಸೆಯೇ ಕಾರಣವಾಗಿದೆ. ಮಾನವೀಯ ಮೌಲ್ಯಗಳು ಉಳಿಯಲು ಜನರ ಹಾಗೂ ಆಡಳಿತಾಂಗದಲ್ಲಿ ಕೆಲಸ ಮಾಡುವವರ ಮನಸ್ಥಿತಿ ಬದಲಾವಣೆಯಾಗಬೇಕು. ಸಮಾಜದಲ್ಲಿ ಸಿಗುವ ಸೌಲಭ್ಯಗಳು ಪಾರದರ್ಶಕವಾಗಿ ಅರ್ಹರಿಗೆ ತಲುಪಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ನಿರಂಜನ ವಾನಳ್ಳಿ, ದೇಶದ ಅಭಿವೃದ್ಧಿಗೆ ಯುವಜನತೆಯು ವರದಕ್ಷಿಣೆ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಈ ಸಂಬಂಧ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಮಾಡಬೇಕು ಎಂದರು.</p>.<p>ವರದಕ್ಷಿಣೆ ಪಿಡುಗು, ಸಮಾಜದಲ್ಲಿನ ಅಸಮಾನತೆ, ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಸಮಾಜ, ದೇಶ ಸರಿಹೋಗಲು ಯುವಕರ ಪಾತ್ರ ಅತಿ ಮುಖ್ಯವಾದುದು ಎಂದು ಹೇಳಿದರು.</p>.<p>ಸಮಾರಂಭದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕಿ ಪ್ರೊ.ಡಿ.ಕುಮುದಾ, ರಾಜ್ಯಶಾಸ್ತ್ರದ ಸಹ ಪ್ರಾಧ್ಯಾಪಕ ರಮೇಶ್, ಹರ್ಷ ಹಾಗೂ ಸುಮತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>