<p><strong>ಬಂಗಾರಪೇಟೆ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೆ ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿರುವುದು ಹಾಸ್ಯಾಸ್ಪದ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕಲಾವಿದ ಯಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಅಂಬೇಡ್ಕರವರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಾರದರ್ಶಕ ಆಡಳಿತಗಾರ, ಕಳಂಕ ರಹಿತ ವ್ಯಕ್ತಿ ಸಿದ್ದರಾಮಯ್ಯ. ಅವರ ಏಳಿಗೆ ಸಹಿಸದ ಬಿಜೆಪಿ ಅನಗತ್ಯವಾಗಿ ಭ್ರಷ್ಟಾಚಾರದ ಅರೋಪ ಮಾಡುತ್ತಿದೆ ಎಂದರು.</p>.<p>ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಳೆದ 10 ವರ್ಷಗಳಲ್ಲಿ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿಯೇತರ ಸರ್ಕಾರಗಳನ್ನು ಬೇರೆ ಬೇರೆ ರೀತಿಯಲ್ಲಿ ದುರುದ್ದೇಶ ಪೂರಕವಾಗಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂದರು.</p>.<p><strong>ರಾಜ್ಯಪಾಲರ ಅಧಿಕಾರ ದುರುಪಯೋಗ: </strong></p><p>ಸರ್ಕಾರ ಉರುಳಿಸುವ ಕೆಲಸಕ್ಕೆ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇಂತಹ ಷಡ್ಯಂತ್ರ ಕುತಂತ್ರ ಮತ್ತು ಜನ ವಿರೋಧಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಳಿಗೆ ಸಹಿಸಲಾಗದೆ ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿರುವುದು ಹಾಸ್ಯಾಸ್ಪದ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕಲಾವಿದ ಯಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಅಂಬೇಡ್ಕರವರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಾರದರ್ಶಕ ಆಡಳಿತಗಾರ, ಕಳಂಕ ರಹಿತ ವ್ಯಕ್ತಿ ಸಿದ್ದರಾಮಯ್ಯ. ಅವರ ಏಳಿಗೆ ಸಹಿಸದ ಬಿಜೆಪಿ ಅನಗತ್ಯವಾಗಿ ಭ್ರಷ್ಟಾಚಾರದ ಅರೋಪ ಮಾಡುತ್ತಿದೆ ಎಂದರು.</p>.<p>ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಳೆದ 10 ವರ್ಷಗಳಲ್ಲಿ ವಿವಿಧ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದ್ದ ಬಿಜೆಪಿಯೇತರ ಸರ್ಕಾರಗಳನ್ನು ಬೇರೆ ಬೇರೆ ರೀತಿಯಲ್ಲಿ ದುರುದ್ದೇಶ ಪೂರಕವಾಗಿ ಉರುಳಿಸಲು ಪ್ರಯತ್ನಿಸುತ್ತಿದೆ ಎಂದರು.</p>.<p><strong>ರಾಜ್ಯಪಾಲರ ಅಧಿಕಾರ ದುರುಪಯೋಗ: </strong></p><p>ಸರ್ಕಾರ ಉರುಳಿಸುವ ಕೆಲಸಕ್ಕೆ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇಂತಹ ಷಡ್ಯಂತ್ರ ಕುತಂತ್ರ ಮತ್ತು ಜನ ವಿರೋಧಿ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>