<p><strong>ಶ್ರೀನಿವಾಸಪುರ</strong>: ತಾಲ್ಲೂಕಿನ ರಾಯಲ್ಪಾಡು ಬಳಿಯ ಉಪ್ಪಾರಪಲ್ಲಿ ಹೊರವಲಯದ ಕೋಳಿಫಾರಂನಲ್ಲಿ ಏಳು ದಿನಗಳ ಹೆಣ್ಣು ಕೂಸು ಪಕ್ಕದಲ್ಲಿ ಮಲಗಿರುವಾಗಲೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.</p>.<p>ಅಸ್ಸಾಂ ಮೂಲದ ಮಹಬೂಬ್ ರೆಹಮಾನ್ (30) ಹಾಗೂ ಫರೀದಾ ಖುರಮ್ (20) ದಂಪತಿ ಆತ್ಮಹತ್ಯೆ ಮಾಡಿಕೊಂಡವರು. ಇವರು 15 ದಿನಗಳ ಹಿಂದೆಯಷ್ಟೇ ಕೋಳಿಫಾರಂಗೆ ಕೂಲಿಗೆಂದು ಬಂದಿದ್ದರು. ಕೋಳಿಫಾರಂ ಆವರಣದಲ್ಲಿ ಇರುವ ಮನೆಯ ಬಾಗಿಲಿನ ಚಿಲುಕವನ್ನು ಒಳಗಡೆಯಿಂದ ಹಾಕಿಕೊಂಡು ಈ ಕೃತ್ಯ ಎಸಗಿಕೊಂಡಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 11.30ರ ಸುಮಾರಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಗಿಲು ಮುರಿದು ಪರಿಶೀಲಿಸಿದ ವೇಳೆ ಈ ಪ್ರಕರಣ ಗೊತ್ತಾಗಿದೆ.</p>.<p>ಮೃತಪಟ್ಟ ತಂದೆ ತಾಯಿಯ ಮಧ್ಯೆ ಮಲಗಿದ್ದ ಮಗು ಪಿಳಿಪಿಳಿ ಕಣ್ಣು ಬಿಡುತ್ತಾ ಅಳುತ್ತಿತ್ತು. ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸಿತು. ಪೋಷಕರ ಆತ್ಮಹತ್ಯೆಯಿಂದ ಮಗು ಈಗ ಅನಾಥವಾಗಿದೆ.</p>.<p>ಮೃತ ದಂಪತಿಯನ್ನು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಏಳು ದಿನಗಳ ಮಗುವನ್ನೂ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಹಸುಗೂಸು ಆರೋಗ್ಯವಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಮೃತರ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.</p>.<p>ಮುಳಬಾಗಿಲು ವಲಯದ ಡಿವೈಎಸ್ಪಿ ಮನಿಷಾ, ಗೌನಿಪಲ್ಲಿ ವೃತ್ತದ ಪೊಲೀಸ್ ನಿರೀಕ್ಷಕ ಶಿವಕುಮಾರ್, ರಾಯಲ್ಪಾಡು ಪಿಎಸ್ಐ ರಾಮು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ</strong>: ತಾಲ್ಲೂಕಿನ ರಾಯಲ್ಪಾಡು ಬಳಿಯ ಉಪ್ಪಾರಪಲ್ಲಿ ಹೊರವಲಯದ ಕೋಳಿಫಾರಂನಲ್ಲಿ ಏಳು ದಿನಗಳ ಹೆಣ್ಣು ಕೂಸು ಪಕ್ಕದಲ್ಲಿ ಮಲಗಿರುವಾಗಲೇ ದಂಪತಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.</p>.<p>ಅಸ್ಸಾಂ ಮೂಲದ ಮಹಬೂಬ್ ರೆಹಮಾನ್ (30) ಹಾಗೂ ಫರೀದಾ ಖುರಮ್ (20) ದಂಪತಿ ಆತ್ಮಹತ್ಯೆ ಮಾಡಿಕೊಂಡವರು. ಇವರು 15 ದಿನಗಳ ಹಿಂದೆಯಷ್ಟೇ ಕೋಳಿಫಾರಂಗೆ ಕೂಲಿಗೆಂದು ಬಂದಿದ್ದರು. ಕೋಳಿಫಾರಂ ಆವರಣದಲ್ಲಿ ಇರುವ ಮನೆಯ ಬಾಗಿಲಿನ ಚಿಲುಕವನ್ನು ಒಳಗಡೆಯಿಂದ ಹಾಕಿಕೊಂಡು ಈ ಕೃತ್ಯ ಎಸಗಿಕೊಂಡಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 11.30ರ ಸುಮಾರಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಗಿಲು ಮುರಿದು ಪರಿಶೀಲಿಸಿದ ವೇಳೆ ಈ ಪ್ರಕರಣ ಗೊತ್ತಾಗಿದೆ.</p>.<p>ಮೃತಪಟ್ಟ ತಂದೆ ತಾಯಿಯ ಮಧ್ಯೆ ಮಲಗಿದ್ದ ಮಗು ಪಿಳಿಪಿಳಿ ಕಣ್ಣು ಬಿಡುತ್ತಾ ಅಳುತ್ತಿತ್ತು. ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸಿತು. ಪೋಷಕರ ಆತ್ಮಹತ್ಯೆಯಿಂದ ಮಗು ಈಗ ಅನಾಥವಾಗಿದೆ.</p>.<p>ಮೃತ ದಂಪತಿಯನ್ನು ಶ್ರೀನಿವಾಸಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಏಳು ದಿನಗಳ ಮಗುವನ್ನೂ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಹಸುಗೂಸು ಆರೋಗ್ಯವಾಗಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಮೃತರ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.</p>.<p>ಮುಳಬಾಗಿಲು ವಲಯದ ಡಿವೈಎಸ್ಪಿ ಮನಿಷಾ, ಗೌನಿಪಲ್ಲಿ ವೃತ್ತದ ಪೊಲೀಸ್ ನಿರೀಕ್ಷಕ ಶಿವಕುಮಾರ್, ರಾಯಲ್ಪಾಡು ಪಿಎಸ್ಐ ರಾಮು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>