<p><strong>ಕೋಲಾರ: </strong>‘ಕೋವಿಡ್ ಮಹಾಮಾರಿಯು ರಾಜ್ಯದಲ್ಲಿ ಮಕ್ಕಳ ಶೈಕ್ಷಣಿಕ ಹಿನ್ನಡೆಗೆ ಕಾರಣವಾಗಿದ್ದು, ಇದು ದೈಹಿಕ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ. ಮಕ್ಕಳ ಆಟೋಟಕ್ಕೆ ಅಡ್ಡಿಯಾಗಿದೆ’ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಭಿಪ್ರಾಯಪಟ್ಟರು.</p>.<p>ಬೆಂಗಳೂರಿನಲ್ಲಿ ಶನಿವಾರ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮತನಾಡಿ, ‘ಕೋವಿಡ್ ಆತಂಕ ಶೀಘ್ರ ದೂರವಾಗಿ ಮತ್ತೆ ಶಾಲೆಗಳಲ್ಲಿ ಮಕ್ಕಳ ಕ್ರೀಡಾ ಚಟುವಟಿಕೆ ಹೆಚ್ಚಲಿ’ ಎಂದು ಆಶಿಸಿದರು.</p>.<p>‘ಶಾಲೆಗಳಲ್ಲಿ ನಡೆಸುವ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾಗಿವೆ. ಆದರೆ, ಈಗ ಕೋವಿಡ್ ಇದಕ್ಕೆ ಅಡ್ಡಿಯುಂಟು ಮಾಡಿದೆ. ಅಂತರ ಕಾಪಾಡಿಕೊಂಡು ನಡೆಸಬಹುದಾದ ಕ್ರೀಡೆಗಳನ್ನು ಮಾತ್ರ ನಡೆಸಿ. ಮಕ್ಕಳಲ್ಲಿ ಚೈತನ್ಯ ತುಂಬಿ’ ಎಂದು ಸಲಹೆ ನೀಡಿದರು.</p>.<p>‘ದೈಹಿಕ ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಸಚಿವರು, ಸಭಾಪತಿಗಳು, ವಿಧಾನ ಪರಿಷತ್ ಸದಸ್ಯರು ಸ್ಪಂದಿಸಬೇಕು. ಶೀಘ್ರವಾಗಿ ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ ಸಚಿವರಿಗೆ ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸದಸ್ಯ ಪುಟ್ಟಣ್ಣ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವ ಸಲಹೆಗಾರ ಹಾಗೂ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಚಂದ್ರಶೇಖರ್, ಖಜಾಂಚಿ ಡಿ.ವಿ.ಬಾಲರಾಜ್, ಕಾರ್ಯಾಧ್ಯಕ್ಷ ಪಿ.ಡಿ.ಕಾಲವಾಡ, ಉಪಾಧ್ಯಕ್ಷ ಪ್ರಮೋದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಕೋವಿಡ್ ಮಹಾಮಾರಿಯು ರಾಜ್ಯದಲ್ಲಿ ಮಕ್ಕಳ ಶೈಕ್ಷಣಿಕ ಹಿನ್ನಡೆಗೆ ಕಾರಣವಾಗಿದ್ದು, ಇದು ದೈಹಿಕ ಶಿಕ್ಷಣದ ಮೇಲೂ ಪರಿಣಾಮ ಬೀರಿದೆ. ಮಕ್ಕಳ ಆಟೋಟಕ್ಕೆ ಅಡ್ಡಿಯಾಗಿದೆ’ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಭಿಪ್ರಾಯಪಟ್ಟರು.</p>.<p>ಬೆಂಗಳೂರಿನಲ್ಲಿ ಶನಿವಾರ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮತನಾಡಿ, ‘ಕೋವಿಡ್ ಆತಂಕ ಶೀಘ್ರ ದೂರವಾಗಿ ಮತ್ತೆ ಶಾಲೆಗಳಲ್ಲಿ ಮಕ್ಕಳ ಕ್ರೀಡಾ ಚಟುವಟಿಕೆ ಹೆಚ್ಚಲಿ’ ಎಂದು ಆಶಿಸಿದರು.</p>.<p>‘ಶಾಲೆಗಳಲ್ಲಿ ನಡೆಸುವ ವ್ಯಾಯಾಮ, ಕ್ರೀಡಾ ಚಟುವಟಿಕೆಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಪೂರಕವಾಗಿವೆ. ಆದರೆ, ಈಗ ಕೋವಿಡ್ ಇದಕ್ಕೆ ಅಡ್ಡಿಯುಂಟು ಮಾಡಿದೆ. ಅಂತರ ಕಾಪಾಡಿಕೊಂಡು ನಡೆಸಬಹುದಾದ ಕ್ರೀಡೆಗಳನ್ನು ಮಾತ್ರ ನಡೆಸಿ. ಮಕ್ಕಳಲ್ಲಿ ಚೈತನ್ಯ ತುಂಬಿ’ ಎಂದು ಸಲಹೆ ನೀಡಿದರು.</p>.<p>‘ದೈಹಿಕ ಶಿಕ್ಷಕರ ಸಮಸ್ಯೆಗಳ ನಿವಾರಣೆಗೆ ಸಚಿವರು, ಸಭಾಪತಿಗಳು, ವಿಧಾನ ಪರಿಷತ್ ಸದಸ್ಯರು ಸ್ಪಂದಿಸಬೇಕು. ಶೀಘ್ರವಾಗಿ ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ ಸಚಿವರಿಗೆ ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸದಸ್ಯ ಪುಟ್ಟಣ್ಣ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗೌರವ ಸಲಹೆಗಾರ ಹಾಗೂ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಜೆ.ಚಂದ್ರಶೇಖರ್, ಖಜಾಂಚಿ ಡಿ.ವಿ.ಬಾಲರಾಜ್, ಕಾರ್ಯಾಧ್ಯಕ್ಷ ಪಿ.ಡಿ.ಕಾಲವಾಡ, ಉಪಾಧ್ಯಕ್ಷ ಪ್ರಮೋದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>