ಶಿಕ್ಷಣ ಸಚಿವ ಸುರೇಶ್ಕುಮಾರ್ ನೇತೃತ್ವದಲ್ಲಿ ಹೋಗಿದ್ದ ವಿಧಾನ ಪರಿಷತ್ ಸದಸ್ಯರ ನಿಯೋಗಕ್ಕೆ ನೀಡಿದ್ದ ಭರವಸೆಯಂತೆ ಮುಖ್ಯಮಂತ್ರಿ ಯಡಿಯೂರಪ್ಪ ಖಾಸಗಿ ಶಿಕ್ಷಕರಿಗೆ ತಲಾ ₹ 5 ಸಾವಿರದ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ, ಈ ಹಣ ಯಾವುದಕ್ಕೂ ಸಾಲದು. ಮತ್ತೊಂದು ಕಂತಿನಲ್ಲಿ ಇನ್ನೂ ₹ 5 ಸಾವಿರ ಘೋಷಿಸುವ ಮೂಲಕ ಶಿಕ್ಷಕರ ನೆರವಿಗೆ ಬರಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.