ಚುನಾವಣಾ ಆಯೋಗವು ಸಮರ್ಪಕ ರೀತಿಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳದ ಕಾರಣ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗೆ ಕೊರೊನಾ ಸೋಂಕು ಹರಡಿದೆ. ಬಳಿಕ ಸಕಾಲಕ್ಕೆ ಚಿಕಿತ್ಸೆ ಸಿಗದೆ ಹಲವರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಕೋವಿಡ್ ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಯ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಇದರಿಂದ ಹಲವು ಸಿಬ್ಬಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.