<p><strong>ಕೋಲಾರ:</strong> ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯ ವರದಿ ವಿಳಂಬವಾಗಿರುವುದರಿಂದ ಪದವಿ ಕಾಲೇಜುಗಳಲ್ಲಿ ತರಗತಿ ಆರಂಭಕ್ಕೆ ವಿಘ್ನ ಎದುರಾಗಿದೆ.</p>.<p>ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಿ 3 ದಿನ ಕಳೆದರೂ ಬಹುತೇಕ ಕಡೆ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಿದೆ. ಕೋವಿಡ್ ಆತಂಕದ ಕಾರಣಕ್ಕೆ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಹಿಂದೇಟು ಹಾಕುತ್ತಿದ್ದು, ಪಾಠ ಪ್ರವಚನ ಹಳಿ ತಪ್ಪಿವೆ.</p>.<p>ಜಿಲ್ಲೆಯಲ್ಲಿ 14 ಪದವಿ ಕಾಲೇಜುಗಳಿವೆ. ಈ ಪೈಕಿ 8 ಸರ್ಕಾರಿ ಹಾಗೂ 6 ಖಾಸಗಿ ಕಾಲೇಜುಗಳಾಗಿವೆ. ರಾಜ್ಯ ಸರ್ಕಾರದ ಆದೇಶದಂತೆ ನ.17ರಂದು ಕಾಲೇಜುಗಳನ್ನು ಪುನರಾರಂಭಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಹಲವು ವಿದ್ಯಾರ್ಥಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕಾಲೇಜಿಗೆ ಬರುತ್ತಿದ್ದಾರೆ. ಮತ್ತೆ ಕೆಲ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಾಗಿ ಮೂರು ರ್ಯಾಪಿಡ್ ಪಾಲಿಮರೈಸ್ಡ್ ಚೈನ್ ರಿಯಾಕ್ಷನ್ (ಆರ್ಟಿಪಿಸಿಆರ್) ಪ್ರಯೋಗಾಲಯ ತೆರೆಯಲಾಗಿದೆ. ಶುಕ್ರವಾರದವರೆಗೆ 3,031 ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಆರ್ಟಿಪಿಸಿಆರ್ ಪ್ರಯೋಗಾಲಯಗಳಿಗೆ ರವಾನಿಸಲಾಗಿದೆ. ಜತೆಗೆ ಕಾಲೇಜುಗಳ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.</p>.<p>ಪ್ರಯೋಗಾಲಯಗಳಲ್ಲಿ ಏಕಾಏಕಿ ಕಾರ್ಯ ಒತ್ತಡ ಹೆಚ್ಚಾದ ಕಾರಣ ಕೋವಿಡ್ ಪರೀಕ್ಷೆ ತಡವಾಗುತ್ತಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಯ ಮೊಬೈಲ್ ಸಂಖ್ಯೆಗೆ ಕೋವಿಡ್ ಪರೀಕ್ಷೆಯ ವರದಿ ರವಾನೆ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.</p>.<p><strong>ಪ್ರವೇಶ ನಿರಾಕರಣೆ: </strong>ಗಂಟಲು ಮಾದರಿ ಸಂಗ್ರಹಿಸಿದ ನಂತರ 2 ದಿನದೊಳಗೆ ಕೋವಿಡ್ ಪರೀಕ್ಷೆಯ ವರದಿ ನೀಡುವುದಾಗಿ ಆರೋಗ್ಯ ಇಲಾಖೆ ಹೇಳಿತ್ತು. ಆದರೆ, 3 ದಿನ ಕಳೆದರೂ ಬಹುಪಾಲು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವರದಿ ರವಾನೆಯಾಗಿಲ್ಲ. ಹೀಗಾಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿ, ವೈದ್ಯಕೀಯ ವರದಿ ಬಂದ ನಂತರ ಕಾಲೇಜಿಗೆ ಬರುವಂತೆ ಸೂಚಿಸಿ ವಾಪಸ್ ಕಳುಹಿಸಲಾಗುತ್ತಿದೆ.</p>.<p>ವೈದ್ಯಕೀಯ ವರದಿಯ ನಿರೀಕ್ಷೆಯಲ್ಲಿರುವ ಸಿಬ್ಬಂದಿ ಸಹ ಕಾಲೇಜಿಗೆ ಬರುತ್ತಿಲ್ಲ. ಬೆರಳೆಣಿಕೆ ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ತರಗತಿಗಳು ನಡೆಯುತ್ತಿಲ್ಲ. ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಯೂ ಕೋವಿಡ್ ಪರೀಕ್ಷೆ ವರದಿಯ ನಿರೀಕ್ಷೆಯಲ್ಲೇ ದಿನ ದೂಡುತ್ತಿದ್ದಾರೆ.</p>.<p><strong>ಮಾರ್ಗಸೂಚಿ ಪಾಲನೆ: </strong>ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸರ್ಕಾರದ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಕಾಲೇಜಿನ ಕೊಠಡಿಗಳನ್ನು ಪ್ರತಿನಿತ್ಯ ಸ್ಯಾನಿಟೈಸ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಕಾಲೇಜುಗಳ ಪ್ರವೇಶ ದ್ವಾರದಲ್ಲೇ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.</p>.<p>ತರಗತಿಗಳಲ್ಲಿ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಮೇಜುಗಳ ಜೋಡಿಸಲಾಗಿದೆ. ಆದರೆ, ಕೋವಿಡ್ ಬಗೆಗಿನ ಅವ್ಯಕ್ತ ಭಯದ ಕಾರಣಕ್ಕೆ ವಿದ್ಯಾರ್ಥಿಗಳು ಕಾಲೇಜಿನತ್ತ ಮುಖ ಮಾಡುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯ ವರದಿ ವಿಳಂಬವಾಗಿರುವುದರಿಂದ ಪದವಿ ಕಾಲೇಜುಗಳಲ್ಲಿ ತರಗತಿ ಆರಂಭಕ್ಕೆ ವಿಘ್ನ ಎದುರಾಗಿದೆ.</p>.<p>ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಿ 3 ದಿನ ಕಳೆದರೂ ಬಹುತೇಕ ಕಡೆ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಿದೆ. ಕೋವಿಡ್ ಆತಂಕದ ಕಾರಣಕ್ಕೆ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಹಿಂದೇಟು ಹಾಕುತ್ತಿದ್ದು, ಪಾಠ ಪ್ರವಚನ ಹಳಿ ತಪ್ಪಿವೆ.</p>.<p>ಜಿಲ್ಲೆಯಲ್ಲಿ 14 ಪದವಿ ಕಾಲೇಜುಗಳಿವೆ. ಈ ಪೈಕಿ 8 ಸರ್ಕಾರಿ ಹಾಗೂ 6 ಖಾಸಗಿ ಕಾಲೇಜುಗಳಾಗಿವೆ. ರಾಜ್ಯ ಸರ್ಕಾರದ ಆದೇಶದಂತೆ ನ.17ರಂದು ಕಾಲೇಜುಗಳನ್ನು ಪುನರಾರಂಭಿಸಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಹಲವು ವಿದ್ಯಾರ್ಥಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕಾಲೇಜಿಗೆ ಬರುತ್ತಿದ್ದಾರೆ. ಮತ್ತೆ ಕೆಲ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದೆ.</p>.<p>ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗಾಗಿ ಮೂರು ರ್ಯಾಪಿಡ್ ಪಾಲಿಮರೈಸ್ಡ್ ಚೈನ್ ರಿಯಾಕ್ಷನ್ (ಆರ್ಟಿಪಿಸಿಆರ್) ಪ್ರಯೋಗಾಲಯ ತೆರೆಯಲಾಗಿದೆ. ಶುಕ್ರವಾರದವರೆಗೆ 3,031 ವಿದ್ಯಾರ್ಥಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಆರ್ಟಿಪಿಸಿಆರ್ ಪ್ರಯೋಗಾಲಯಗಳಿಗೆ ರವಾನಿಸಲಾಗಿದೆ. ಜತೆಗೆ ಕಾಲೇಜುಗಳ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ.</p>.<p>ಪ್ರಯೋಗಾಲಯಗಳಲ್ಲಿ ಏಕಾಏಕಿ ಕಾರ್ಯ ಒತ್ತಡ ಹೆಚ್ಚಾದ ಕಾರಣ ಕೋವಿಡ್ ಪರೀಕ್ಷೆ ತಡವಾಗುತ್ತಿದೆ. ಮತ್ತೊಂದೆಡೆ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಯ ಮೊಬೈಲ್ ಸಂಖ್ಯೆಗೆ ಕೋವಿಡ್ ಪರೀಕ್ಷೆಯ ವರದಿ ರವಾನೆ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.</p>.<p><strong>ಪ್ರವೇಶ ನಿರಾಕರಣೆ: </strong>ಗಂಟಲು ಮಾದರಿ ಸಂಗ್ರಹಿಸಿದ ನಂತರ 2 ದಿನದೊಳಗೆ ಕೋವಿಡ್ ಪರೀಕ್ಷೆಯ ವರದಿ ನೀಡುವುದಾಗಿ ಆರೋಗ್ಯ ಇಲಾಖೆ ಹೇಳಿತ್ತು. ಆದರೆ, 3 ದಿನ ಕಳೆದರೂ ಬಹುಪಾಲು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವರದಿ ರವಾನೆಯಾಗಿಲ್ಲ. ಹೀಗಾಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿ, ವೈದ್ಯಕೀಯ ವರದಿ ಬಂದ ನಂತರ ಕಾಲೇಜಿಗೆ ಬರುವಂತೆ ಸೂಚಿಸಿ ವಾಪಸ್ ಕಳುಹಿಸಲಾಗುತ್ತಿದೆ.</p>.<p>ವೈದ್ಯಕೀಯ ವರದಿಯ ನಿರೀಕ್ಷೆಯಲ್ಲಿರುವ ಸಿಬ್ಬಂದಿ ಸಹ ಕಾಲೇಜಿಗೆ ಬರುತ್ತಿಲ್ಲ. ಬೆರಳೆಣಿಕೆ ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ತರಗತಿಗಳು ನಡೆಯುತ್ತಿಲ್ಲ. ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿಯೂ ಕೋವಿಡ್ ಪರೀಕ್ಷೆ ವರದಿಯ ನಿರೀಕ್ಷೆಯಲ್ಲೇ ದಿನ ದೂಡುತ್ತಿದ್ದಾರೆ.</p>.<p><strong>ಮಾರ್ಗಸೂಚಿ ಪಾಲನೆ: </strong>ಕೋವಿಡ್ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸರ್ಕಾರದ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಕಾಲೇಜಿನ ಕೊಠಡಿಗಳನ್ನು ಪ್ರತಿನಿತ್ಯ ಸ್ಯಾನಿಟೈಸ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಕಾಲೇಜುಗಳ ಪ್ರವೇಶ ದ್ವಾರದಲ್ಲೇ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ.</p>.<p>ತರಗತಿಗಳಲ್ಲಿ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಮೇಜುಗಳ ಜೋಡಿಸಲಾಗಿದೆ. ಆದರೆ, ಕೋವಿಡ್ ಬಗೆಗಿನ ಅವ್ಯಕ್ತ ಭಯದ ಕಾರಣಕ್ಕೆ ವಿದ್ಯಾರ್ಥಿಗಳು ಕಾಲೇಜಿನತ್ತ ಮುಖ ಮಾಡುತ್ತಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>