<p><strong>ಬಂಗಾರಪೇಟೆ: </strong>ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಮರಾಠ ಹೊಸಹಳ್ಳಿ ಕ್ರಾಸ್ ಸಮೀಪದ ಗುಟ್ಟಹಳ್ಳಿ ಬಳಿ ಸಿಡಿಲು ಬಡಿದು ಬುಧವಾರ ರಾತ್ರಿ ₹ 40 ಸಾವಿರ ಮೌಲ್ಯದ ಹಸುವೊಂದು ಮೃತಪಟ್ಟಿದೆ.</p>.<p>ಗ್ರಾಮದ ಕೃಷ್ಣಪ್ಪ ಎಂಬುವರಿಗೆ ಈ ಹಸು ಸೇರಿದೆ. ಗ್ರಾಮ ಹೊವಲಯದಲ್ಲಿ ಮೂರು ಹಸುಗಳನ್ನು ಕಟ್ಟಿದ್ದು, ಸಿಡಿಲು ಬಡಿದ ಸಂದರ್ಭದಲ್ಲಿ ಒಂದು ಹಸು ಹಗ್ಗ ಕಿತ್ತುಕೊಂಡು ಹೊರಬಂದಿದೆ.</p>.<p>ಪಕ್ಕದಲ್ಲೇ ಇದ್ದ ಮತ್ತೊಂದು ಹಸುವಿಗೆ ಯಾವುದೇ ತೊಂದರೆ ಯಾಗಿಲ್ಲ ಎಂದು ಕೃಷ್ಣಪ್ಪ ಅವರ ಪುತ್ರ ಹರೀಶ್ ತಿಳಿಸಿದರು.</p>.<p>ಸಮೀಪದ ಚಿಕ್ಕಪುರ ಗ್ರಾಮದ ವ್ಯಾಪ್ತಿಯಲ್ಲಿ ಮಳೆ, ಗಾಳಿಗೆ ಭತ್ತದ ಫಸಲು ನಾಶವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ: </strong>ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಮರಾಠ ಹೊಸಹಳ್ಳಿ ಕ್ರಾಸ್ ಸಮೀಪದ ಗುಟ್ಟಹಳ್ಳಿ ಬಳಿ ಸಿಡಿಲು ಬಡಿದು ಬುಧವಾರ ರಾತ್ರಿ ₹ 40 ಸಾವಿರ ಮೌಲ್ಯದ ಹಸುವೊಂದು ಮೃತಪಟ್ಟಿದೆ.</p>.<p>ಗ್ರಾಮದ ಕೃಷ್ಣಪ್ಪ ಎಂಬುವರಿಗೆ ಈ ಹಸು ಸೇರಿದೆ. ಗ್ರಾಮ ಹೊವಲಯದಲ್ಲಿ ಮೂರು ಹಸುಗಳನ್ನು ಕಟ್ಟಿದ್ದು, ಸಿಡಿಲು ಬಡಿದ ಸಂದರ್ಭದಲ್ಲಿ ಒಂದು ಹಸು ಹಗ್ಗ ಕಿತ್ತುಕೊಂಡು ಹೊರಬಂದಿದೆ.</p>.<p>ಪಕ್ಕದಲ್ಲೇ ಇದ್ದ ಮತ್ತೊಂದು ಹಸುವಿಗೆ ಯಾವುದೇ ತೊಂದರೆ ಯಾಗಿಲ್ಲ ಎಂದು ಕೃಷ್ಣಪ್ಪ ಅವರ ಪುತ್ರ ಹರೀಶ್ ತಿಳಿಸಿದರು.</p>.<p>ಸಮೀಪದ ಚಿಕ್ಕಪುರ ಗ್ರಾಮದ ವ್ಯಾಪ್ತಿಯಲ್ಲಿ ಮಳೆ, ಗಾಳಿಗೆ ಭತ್ತದ ಫಸಲು ನಾಶವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>