<p><strong>ಕೆಜಿಎಫ್:</strong> ರಾಬರ್ಟಸನ್ಪೇಟೆಯ ಕಿಂಗ್ ಜಾರ್ಜ್ ಸಭಾಂಗಣದಲ್ಲಿ ಭಾನುವಾರ ನಡೆದ ಸಿಪಿಐ ತಾಲ್ಲೂಕು ಸಮ್ಮೇಳನದಲ್ಲಿ ‘ಸೂರಿಗಾಗಿ ಸಮರ’ ಎಂಬ ಹೋರಾಟ ನಡೆಸಲು ತೀರ್ಮಾನಿಸಲಾಯಿತು.</p>.<p>ತಾಲ್ಲೂಕಿನಲ್ಲಿ ನಿವೇಶನ ಹಾಗೂ ಮನೆ ಇಲ್ಲದವರಿಗೆ ಸೂರು ಒದಗಿಸಬೇಕಾಗಿದೆ. ಬಿಜಿಎಂಎಲ್ ಪ್ರದೇಶದಲ್ಲಿ ಕಾರ್ಮಿಕರು ವಾಸ ಮಾಡುತ್ತಿರುವ ಮನೆಗಳನ್ನು ಅವರಿಗೆ ನೀಡಬೇಕು. ಈ ವಿಷಯವಾಗಿ ನ್ಯಾಯಾಲಯದ ತೀರ್ಪನ್ನು ಕೂಡ ಸರ್ಕಾರ ಪಾಲಿಸುತ್ತಿಲ್ಲ. ಆದ್ದರಿಂದ ಸೂರಿಗಾಗಿ ಸಮರ ಎಂಬ ಧ್ಯೇಯ ವಾಕ್ಯದೊಡನೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಘಟಕದ ಕಾರ್ಯದರ್ಶಿ ಜ್ಯೋತಿ ಬಸು ತಿಳಿಸಿದರು</p>.<p>ಬೆಮಲ್ ಗುತ್ತಿಗೆ ಕಾರ್ಮಿಕರು ಬೇಡಿಕೆ ಈಡೇರಿಕೆಗಾಗಿ 26 ದಿನ ಹೋರಾಟ ನಡೆಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಬೆಮಲ್ ಆಡಳಿತ ವರ್ಗ ತನ್ನ ವಾಗ್ದಾನವನ್ನು ಈಡೇರಿಸಿಲ್ಲ. ಹಾಗಾಗಿ ಸಿಪಿಐ ಕಾರ್ಮಿಕರ ಪರವಾಗಿ ಹೋರಾಟವನ್ನು ಮುಂದುವರಿಸುವುದು ಎಂದರು.</p>.<p>ರಾಬರ್ಟ್ಸನ್ ಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕಾಯಕಲ್ಪ ಬೇಕಾಗಿದೆ. ರೋಗಿಗಳಿಗೆ ಕನಿಷ್ಠ ಸೌಲಭ್ಯ ಸಿಗುತ್ತಿಲ್ಲ. ತಜ್ಞ ವೈದ್ಯರ ಚಿಕಿತ್ಸೆ ದೊರೆಯುತ್ತಿಲ್ಲ. ಈ ವಿಚಾರವಾಗಿ ಸಿಪಿಐ ಮುಂದಿನ ದಿನಗಳಲ್ಲಿ ಸರ್ಕಾರದ ಗಮನ ಸೆಳೆಯಲು ಹೋರಾಟ ನಡೆಸುತ್ತದೆ ಎಂದು ತಿಳಿಸಿದರು.</p>.<p>ನಗರಸಭೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಕಳೆದ ಐದು ವರ್ಷದಿಂದ ನಗರದ 35 ವಾರ್ಡ್ಗಳಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ನಗರದಾದ್ಯಂತ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಒಂದೂವರೆ ಕೋಟಿ ಖರ್ಚು ಮಾಡಲಾಗಿದೆ. ಎಲ್ಲಿ ಕೂಡ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.</p>.<p>ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಆಗಸ್ಟ್ 17ರಂದು ಬೆಂಬಲ ನಗರದಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಈ ವೇಳೆ ತಾಲ್ಲೂಕು ಕಾರ್ಯದರ್ಶಿಯಾಗಿ ಶ್ರೀಕುಮಾರ್, ಸಹಾಯಕ ಕಾರ್ಯದರ್ಶಿಯಾಗಿ ರಣದೀವ್ ಹಾಗೂ ಖಜಾಂಚಿಯಾಗಿ ಮಾದೇಶ್ ಆಯ್ಕೆಯಾದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ರಾಬರ್ಟಸನ್ಪೇಟೆಯ ಕಿಂಗ್ ಜಾರ್ಜ್ ಸಭಾಂಗಣದಲ್ಲಿ ಭಾನುವಾರ ನಡೆದ ಸಿಪಿಐ ತಾಲ್ಲೂಕು ಸಮ್ಮೇಳನದಲ್ಲಿ ‘ಸೂರಿಗಾಗಿ ಸಮರ’ ಎಂಬ ಹೋರಾಟ ನಡೆಸಲು ತೀರ್ಮಾನಿಸಲಾಯಿತು.</p>.<p>ತಾಲ್ಲೂಕಿನಲ್ಲಿ ನಿವೇಶನ ಹಾಗೂ ಮನೆ ಇಲ್ಲದವರಿಗೆ ಸೂರು ಒದಗಿಸಬೇಕಾಗಿದೆ. ಬಿಜಿಎಂಎಲ್ ಪ್ರದೇಶದಲ್ಲಿ ಕಾರ್ಮಿಕರು ವಾಸ ಮಾಡುತ್ತಿರುವ ಮನೆಗಳನ್ನು ಅವರಿಗೆ ನೀಡಬೇಕು. ಈ ವಿಷಯವಾಗಿ ನ್ಯಾಯಾಲಯದ ತೀರ್ಪನ್ನು ಕೂಡ ಸರ್ಕಾರ ಪಾಲಿಸುತ್ತಿಲ್ಲ. ಆದ್ದರಿಂದ ಸೂರಿಗಾಗಿ ಸಮರ ಎಂಬ ಧ್ಯೇಯ ವಾಕ್ಯದೊಡನೆ ಹೋರಾಟ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಘಟಕದ ಕಾರ್ಯದರ್ಶಿ ಜ್ಯೋತಿ ಬಸು ತಿಳಿಸಿದರು</p>.<p>ಬೆಮಲ್ ಗುತ್ತಿಗೆ ಕಾರ್ಮಿಕರು ಬೇಡಿಕೆ ಈಡೇರಿಕೆಗಾಗಿ 26 ದಿನ ಹೋರಾಟ ನಡೆಸಿದರು ಯಾವುದೇ ಪ್ರಯೋಜನವಾಗಲಿಲ್ಲ. ಬೆಮಲ್ ಆಡಳಿತ ವರ್ಗ ತನ್ನ ವಾಗ್ದಾನವನ್ನು ಈಡೇರಿಸಿಲ್ಲ. ಹಾಗಾಗಿ ಸಿಪಿಐ ಕಾರ್ಮಿಕರ ಪರವಾಗಿ ಹೋರಾಟವನ್ನು ಮುಂದುವರಿಸುವುದು ಎಂದರು.</p>.<p>ರಾಬರ್ಟ್ಸನ್ ಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕಾಯಕಲ್ಪ ಬೇಕಾಗಿದೆ. ರೋಗಿಗಳಿಗೆ ಕನಿಷ್ಠ ಸೌಲಭ್ಯ ಸಿಗುತ್ತಿಲ್ಲ. ತಜ್ಞ ವೈದ್ಯರ ಚಿಕಿತ್ಸೆ ದೊರೆಯುತ್ತಿಲ್ಲ. ಈ ವಿಚಾರವಾಗಿ ಸಿಪಿಐ ಮುಂದಿನ ದಿನಗಳಲ್ಲಿ ಸರ್ಕಾರದ ಗಮನ ಸೆಳೆಯಲು ಹೋರಾಟ ನಡೆಸುತ್ತದೆ ಎಂದು ತಿಳಿಸಿದರು.</p>.<p>ನಗರಸಭೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ. ಕಳೆದ ಐದು ವರ್ಷದಿಂದ ನಗರದ 35 ವಾರ್ಡ್ಗಳಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ನಗರದಾದ್ಯಂತ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಒಂದೂವರೆ ಕೋಟಿ ಖರ್ಚು ಮಾಡಲಾಗಿದೆ. ಎಲ್ಲಿ ಕೂಡ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದು ದೂರಿದರು.</p>.<p>ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಆಗಸ್ಟ್ 17ರಂದು ಬೆಂಬಲ ನಗರದಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಈ ವೇಳೆ ತಾಲ್ಲೂಕು ಕಾರ್ಯದರ್ಶಿಯಾಗಿ ಶ್ರೀಕುಮಾರ್, ಸಹಾಯಕ ಕಾರ್ಯದರ್ಶಿಯಾಗಿ ರಣದೀವ್ ಹಾಗೂ ಖಜಾಂಚಿಯಾಗಿ ಮಾದೇಶ್ ಆಯ್ಕೆಯಾದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>