<p><strong>ಕೆಜಿಎಫ್: </strong>ಬಿಜಿಎಂಎಲ್ನ ನ್ಯೂ ಟೇಲರ್ ಶಾಫ್ಟ್ನಲ್ಲಿ ಬೆಳೆದಿದ್ದ ಬೃಹತ್ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಭದ್ರತಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ರಕ್ಷಣಾ ವೇದಿಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದೆ.</p>.<p>ಬಿಜಿಎಂಎಲ್ ಪ್ರದೇಶದಲ್ಲಿ ಹಲವಾರು ಶ್ರೀಗಂಧದ ಮರಗಳು ಬೆಳೆದಿವೆ. ಅವುಗಳನ್ನು ವ್ಯವಸ್ಥಿತ ರೀತಿಯಲ್ಲಿ ಕಳ್ಳತನ ಮಾಡಲಾಗುತ್ತಿದೆ. ಬಿಜಿಎಂಎಲ್ ಭದ್ರತಾ ಪ್ರದೇಶವಾಗಿದ್ದು, ಸದಾ ಸಿಬ್ಬಂದಿಯ ಕಾವಲು ಇರುತ್ತದೆ. ಇಂತಹ ಪ್ರದೇಶದಲ್ಲಿಯೇ ಮರಗಳ ಕಳ್ಳತನವಾಗಿದ್ದು ಭದ್ರತಾ ಸಿಬ್ಬಂದಿಯ ಕೈವಾಡ ಇರುವ ಶಂಕೆ ಇದೆ.</p>.<p>ಕಳ್ಳತನದ ಬಗ್ಗೆ ಪೊಲೀಸರಿಗೆ ದೂರು ಕೊಡದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯ ಭದ್ರತಾ ಅಧಿಕಾರಿ, ಸೂಪರ್ ವೈಸರ್ ಮತ್ತು ಗುತ್ತಿಗೆ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಬೇಕು. ಕೇಂದ್ರ ಸರ್ಕಾರದ ಆಸ್ತಿಯನ್ನು ಕಾಪಾಡಬೇಕು ಎಂದು ವೇದಿಕೆಯ ಅಧ್ಯಕ್ಷ ಅನ್ಬರಸನ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್: </strong>ಬಿಜಿಎಂಎಲ್ನ ನ್ಯೂ ಟೇಲರ್ ಶಾಫ್ಟ್ನಲ್ಲಿ ಬೆಳೆದಿದ್ದ ಬೃಹತ್ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲಾಗಿದ್ದು, ಈ ಸಂಬಂಧ ಭದ್ರತಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ರಕ್ಷಣಾ ವೇದಿಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದೆ.</p>.<p>ಬಿಜಿಎಂಎಲ್ ಪ್ರದೇಶದಲ್ಲಿ ಹಲವಾರು ಶ್ರೀಗಂಧದ ಮರಗಳು ಬೆಳೆದಿವೆ. ಅವುಗಳನ್ನು ವ್ಯವಸ್ಥಿತ ರೀತಿಯಲ್ಲಿ ಕಳ್ಳತನ ಮಾಡಲಾಗುತ್ತಿದೆ. ಬಿಜಿಎಂಎಲ್ ಭದ್ರತಾ ಪ್ರದೇಶವಾಗಿದ್ದು, ಸದಾ ಸಿಬ್ಬಂದಿಯ ಕಾವಲು ಇರುತ್ತದೆ. ಇಂತಹ ಪ್ರದೇಶದಲ್ಲಿಯೇ ಮರಗಳ ಕಳ್ಳತನವಾಗಿದ್ದು ಭದ್ರತಾ ಸಿಬ್ಬಂದಿಯ ಕೈವಾಡ ಇರುವ ಶಂಕೆ ಇದೆ.</p>.<p>ಕಳ್ಳತನದ ಬಗ್ಗೆ ಪೊಲೀಸರಿಗೆ ದೂರು ಕೊಡದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಮುಖ್ಯ ಭದ್ರತಾ ಅಧಿಕಾರಿ, ಸೂಪರ್ ವೈಸರ್ ಮತ್ತು ಗುತ್ತಿಗೆ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಬೇಕು. ಕೇಂದ್ರ ಸರ್ಕಾರದ ಆಸ್ತಿಯನ್ನು ಕಾಪಾಡಬೇಕು ಎಂದು ವೇದಿಕೆಯ ಅಧ್ಯಕ್ಷ ಅನ್ಬರಸನ್ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>