ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಿರುವ ಸರ್ಕಾರ ಮುಂದಿನ ಆದೇಶದವರೆಗೂ ದಾಖಲಾತಿ ಪ್ರಕ್ರಿಯೆ ನಡೆಸಬಾರದೆಂದು ಸೂಚನೆ ನೀಡಿದೆ. ಆದರೆ, ಕೆಲ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸದಸ್ಯರು ಪ್ರವೇಶ ಶುಲ್ಕ ಪಾವತಿಸುವಂತೆ ಪೋಷಕರಿಗೆ ಪತ್ರ ಬರೆಯುತ್ತಿದ್ದಾರೆ ಮತ್ತು ಮೊಬೈಲ್ಗೆ ಎಸ್ಎಂಎಸ್ ಸಂದೇಶ ಕಳುಹಿಸುತ್ತಿದ್ದಾರೆ. ಈ ಸಂಗತಿ ಇಲಾಖೆ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.