‘ಮುಂಗಾರು ಹಂಗಾಮಿನಲ್ಲಿ 6 ತಾಲ್ಲೂಕುಗಳ 1,723 ಗ್ರಾಮಗಳಲ್ಲಿ ರಾಗಿ, ನೆಲಗಡಲೆ, ತೊಗರಿ ಬೆಳೆ ನಷ್ಟವಾಗಿತ್ತು. ಮೊಬೈಲ್ ಆ್ಯಪ್ ಮೂಲಕ ಬೆಳೆ ನಷ್ಟದ ಮಾಹಿತಿ ಸಂಗ್ರಹಿಸಲಾಗಿತ್ತು. ಆ ಮಾಹಿತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಲಾಗಿದೆ. ಎರಡನೇ ಹಂತದಲ್ಲಿ 719 ಗ್ರಾಮಗಳ 63,145 ಫಲಾನುಭವಿಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಮುಂದುವರಿದಿದ್ದು, ಸದ್ಯದಲ್ಲೇ ಹಣ ವಿತರಿಸಲಾಗುವುದು’ ಎಂದು ಮಾಹಿತಿ ನೀಡಿದರು.