ಕೋಲಾರ: ‘ಸಿದ್ದರಾಮಯ್ಯ ತಾವೂ ಹಿಂದೂ ಎಂಬುದಾಗಿ ಹೇಳಿ ಹಿಂದೂ ಬೇರೆ, ಹಿಂದುತ್ವ ಬೇರೆ ಎಂದಿದ್ದಾರೆ. ಆಗಾಗ್ಗೆ ವೇಷ ಬದಲಾಯಿಸುವ ಅವರಿಗೆ ಇದರ ಅರ್ಥ ಗೊತ್ತಿಲ್ಲ. ಹಿಂದೂ ಎಂದರೆ ದೇಹ, ಹಿಂದುತ್ವ ಎಂದರೆ ಜೀವ. ದೇಹವಿದ್ದು, ಜೀವ ಇಲ್ಲದಿದ್ದರೆ ಏನಾಗುತ್ತೀರಿ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.