<p><strong>ಚಿಂತಾಮಣಿ:</strong> ಹೈನುಗಾರಿಕೆಯಲ್ಲಿ ಪುರುಷರಿಗಿಂತ ಮಹಿಳೆಯರ ಪಾತ್ರ ಪ್ರಮುಖ. ಶಿಸ್ತುಬದ್ಧ ಹಾಗೂ ಪ್ರಾಮಾಣಿಕವಾಗಿ ವ್ಯವಹಾರ ನಡೆಸುತ್ತಾರೆ ಎಂದು ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕರಿಯಪ್ಪಲ್ಲಿಯಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಜಿಲ್ಲೆಯಲ್ಲಿ 130 ಮಹಿಳಾ ಡೇರಿಗಳು ಕಾರ್ಯ ನಿರ್ವಹಿಸುತ್ತಿದ್ದು,ಸರ್ಕಾರಿ ನೌಕರರಿಗೆ ವೇತನ ಸಿಗುವ ರೀತಿಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಹಾಲಿನ ಹಣವನ್ನು ಉತ್ಪಾದಕರ ಬ್ಯಾಂಕಿನ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>‘20 ಸಹಕಾರ ಸಂಘಗಳಿಗೆ ರೋಟರಿ ಮೂಲಕ ತರಬೇತಿ ನೀಡಿ, ಪ್ರತಿ ಸಂಘದ 5 ಮಂದಿಗೆ ತಲಾ ₹50ಸಾವಿರ ಬಡ್ಡಿರಹಿತ ಸಾಲ ನೀಡಲಾಗುವುದು’ ಎಂದುಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಚ್.ವಿ. ತಿಪ್ಪಾರೆಡ್ಡಿ ತಿಳಿಸಿದರು.</p>.<p>ಉಪವ್ಯಸ್ಥಾಪಕ ಎ.ವಿ. ಶಂಕರರೆಡ್ಡಿ, ಮಹಿಳಾ ನಿರ್ದೇಶಕಿ ಸುನಂದಮ್ಮ, ಉಪ ವ್ಯವಸ್ಥಾಪಕಿ ಆರ್. ವಿಜಯಲಕ್ಷ್ಮಿ ಮಾತನಾಡಿದರು.</p>.<p>ಸಂಘದ ಅಧ್ಯಕ್ಷೆ ಡಿ.ಎಸ್.ಸುನಿತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರಮೀಳಮ್ಮ, ವಿಸ್ತರಣಾಧಿಕಾರಿಗಳಾದ ಎಂ.ಎಸ್.ನಾರಾಯಣಸ್ವಾಮಿ, ವಸಂತಲಕ್ಷ್ಮಿ, ವೆಂಕಟೇಶಮೂರ್ತಿ, ಪ್ರೇಮಕಿರಣ್, ಎನ್. ಶಂಕರ್, ವೆಂಕಟರವಣಪ್ಪ, ಎನ್.ನಾರಾಯಣಸ್ವಾಮಿ, ನಿರ್ದೇಶಕರು ಹಾಗೂ ಉತ್ಪಾದಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಹೈನುಗಾರಿಕೆಯಲ್ಲಿ ಪುರುಷರಿಗಿಂತ ಮಹಿಳೆಯರ ಪಾತ್ರ ಪ್ರಮುಖ. ಶಿಸ್ತುಬದ್ಧ ಹಾಗೂ ಪ್ರಾಮಾಣಿಕವಾಗಿ ವ್ಯವಹಾರ ನಡೆಸುತ್ತಾರೆ ಎಂದು ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕರಿಯಪ್ಪಲ್ಲಿಯಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಜಿಲ್ಲೆಯಲ್ಲಿ 130 ಮಹಿಳಾ ಡೇರಿಗಳು ಕಾರ್ಯ ನಿರ್ವಹಿಸುತ್ತಿದ್ದು,ಸರ್ಕಾರಿ ನೌಕರರಿಗೆ ವೇತನ ಸಿಗುವ ರೀತಿಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಹಾಲಿನ ಹಣವನ್ನು ಉತ್ಪಾದಕರ ಬ್ಯಾಂಕಿನ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.</p>.<p>‘20 ಸಹಕಾರ ಸಂಘಗಳಿಗೆ ರೋಟರಿ ಮೂಲಕ ತರಬೇತಿ ನೀಡಿ, ಪ್ರತಿ ಸಂಘದ 5 ಮಂದಿಗೆ ತಲಾ ₹50ಸಾವಿರ ಬಡ್ಡಿರಹಿತ ಸಾಲ ನೀಡಲಾಗುವುದು’ ಎಂದುಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಚ್.ವಿ. ತಿಪ್ಪಾರೆಡ್ಡಿ ತಿಳಿಸಿದರು.</p>.<p>ಉಪವ್ಯಸ್ಥಾಪಕ ಎ.ವಿ. ಶಂಕರರೆಡ್ಡಿ, ಮಹಿಳಾ ನಿರ್ದೇಶಕಿ ಸುನಂದಮ್ಮ, ಉಪ ವ್ಯವಸ್ಥಾಪಕಿ ಆರ್. ವಿಜಯಲಕ್ಷ್ಮಿ ಮಾತನಾಡಿದರು.</p>.<p>ಸಂಘದ ಅಧ್ಯಕ್ಷೆ ಡಿ.ಎಸ್.ಸುನಿತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಪ್ರಮೀಳಮ್ಮ, ವಿಸ್ತರಣಾಧಿಕಾರಿಗಳಾದ ಎಂ.ಎಸ್.ನಾರಾಯಣಸ್ವಾಮಿ, ವಸಂತಲಕ್ಷ್ಮಿ, ವೆಂಕಟೇಶಮೂರ್ತಿ, ಪ್ರೇಮಕಿರಣ್, ಎನ್. ಶಂಕರ್, ವೆಂಕಟರವಣಪ್ಪ, ಎನ್.ನಾರಾಯಣಸ್ವಾಮಿ, ನಿರ್ದೇಶಕರು ಹಾಗೂ ಉತ್ಪಾದಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>