<p><strong>ಬೇತಮಂಗಲ</strong>: ತಾಲ್ಲೂಕಿನ ಐವಾರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ತಮ್ಮ ಕುಟುಂಬಕ್ಕೆ ಮಂಜೂರಾಗಿರುವ ಎರಡು ಎಕರೆ ಜಮೀನನ್ನು ಪ್ರಭಾವಿಗಳು ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬವೊಂದು, ಜಮೀನಿನಲ್ಲಿ ಗುಡಿಸಲು ನಿರ್ಮಿಸಿ, ಅಂಬೇಡ್ಕರ್ ಭಾವಚಿತ್ರದೊಂದಿಗೆ ಹೋರಾಟಕ್ಕೆ ಮುಂದಾಗಿದೆ. </p>.<p>‘20 ವರ್ಷದ ಹಿಂದೆ ನಮ್ಮ ತಾತ ಮುನಿಯಪ್ಪ ಅವರಿಗೆ ಕೃಷ್ಣಪ್ಪ ನಾಯ್ಡು ಎಂಬುವರು ಈ ಜಾಗ ಮಂಜೂರು ಮಾಡಿಸಿಕೊಟ್ಟಿದ್ದರು. ಈ ನಡುವೆ ನಾವು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಹೋಗಿದ್ದೆವು. ಆಗ ಕೃಷ್ಣಪ್ಪ ನಾಯ್ಡು ಅವರ ಕುಟುಂಬಸ್ಥರು ಈ ಜಮೀನು ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ’ ಎಂದು ಕುಟುಂಬದ ರವಿ ಆರೋಪ ಮಾಡಿದರು.</p>.<p>ದಲಿತ ಸಮುದಾಯದ ಶ್ರೀನಾಥ್ ನಾಸ್ತಿಕ, ರಂಗನಾಥ್, ಮಂಜುನಾಥ್, ಚಂದ್ರಶೇಖರ್, ಸುಬ್ರಮಣಿ, ವೆಂಕಟರಾಮ್ ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ತಾಲ್ಲೂಕಿನ ಐವಾರಹಳ್ಳಿ ಗ್ರಾಮದ ಸರ್ಕಾರಿ ಗೋಮಾಳದಲ್ಲಿ ತಮ್ಮ ಕುಟುಂಬಕ್ಕೆ ಮಂಜೂರಾಗಿರುವ ಎರಡು ಎಕರೆ ಜಮೀನನ್ನು ಪ್ರಭಾವಿಗಳು ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬವೊಂದು, ಜಮೀನಿನಲ್ಲಿ ಗುಡಿಸಲು ನಿರ್ಮಿಸಿ, ಅಂಬೇಡ್ಕರ್ ಭಾವಚಿತ್ರದೊಂದಿಗೆ ಹೋರಾಟಕ್ಕೆ ಮುಂದಾಗಿದೆ. </p>.<p>‘20 ವರ್ಷದ ಹಿಂದೆ ನಮ್ಮ ತಾತ ಮುನಿಯಪ್ಪ ಅವರಿಗೆ ಕೃಷ್ಣಪ್ಪ ನಾಯ್ಡು ಎಂಬುವರು ಈ ಜಾಗ ಮಂಜೂರು ಮಾಡಿಸಿಕೊಟ್ಟಿದ್ದರು. ಈ ನಡುವೆ ನಾವು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಹೋಗಿದ್ದೆವು. ಆಗ ಕೃಷ್ಣಪ್ಪ ನಾಯ್ಡು ಅವರ ಕುಟುಂಬಸ್ಥರು ಈ ಜಮೀನು ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ’ ಎಂದು ಕುಟುಂಬದ ರವಿ ಆರೋಪ ಮಾಡಿದರು.</p>.<p>ದಲಿತ ಸಮುದಾಯದ ಶ್ರೀನಾಥ್ ನಾಸ್ತಿಕ, ರಂಗನಾಥ್, ಮಂಜುನಾಥ್, ಚಂದ್ರಶೇಖರ್, ಸುಬ್ರಮಣಿ, ವೆಂಕಟರಾಮ್ ಈ ವೇಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>