ಉಪವಾಸ ಸತ್ಯಾಗ್ರಹದ ವೇದಿಕೆಯಲ್ಲಿ 250ಕ್ಕೂ ಹೆಚ್ಚು ಜನರಿಗೆ ಸ್ಥಳಾವಕಾಶ ಕಲ್ಪಿಸಲಾಗಿತ್ತು. ಜತೆಗೆ ವೇದಿಕೆ ಮುಂಭಾಗ 10 ಸಾವಿರ ಜನರಿಗೆ ಕುಳಿತುಕೊಳ್ಳಲು ಬೃಹತ್ ಪೆಂಡಾಲ್ ಹಾಕಲಾಗಿತ್ತು. ರಾಜ್ಯಕ್ಕೆ ಕೇಂದ್ರ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಚಂದ್ರಬಾಬು ನಾಯ್ಡು ಒತ್ತಾಯಿಸಿದರು. ಆಂಧ್ರಪ್ರದೇಶದ ಎಲ್ಲ ಜಿಲ್ಲೆಗಳಲ್ಲೂ ಸಚಿವರ ನೇತೃತ್ವದಲ್ಲಿ ಹಾಗೂ ವಿಧಾನಸಭೆ ಕ್ಷೇತ್ರಗಳಲ್ಲಿ ಶಾಸಕರ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.