ಮಾಲೂರು: ಪಟ್ಟಣದ ಸಾಹಿತಿ ನ.ಗುರುಮೂರ್ತಿ ಜಯಮಂಗಲ ಅವರ ‘ಉರಿವ ನೆಲದ ನೆರಳು’ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ರತ್ನಾಕರವರ್ಣಿ ಮುದ್ದಣ ದತ್ತಿ ಪ್ರಶಸ್ತಿ ದೊರೆತಿದೆ.
ಮಾರ್ಚ್ 3ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜೇಂದ್ರ ಪರಿಷತ್ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಸಾವಿರ ಕೃತಿಗಳು ಬಂದಿದ್ದವು. 25 ಮಂದಿ ಪರಿಣಿತರ ಸಮಿತಿ ಪ್ರಶಸ್ತಿಗೆ ಕೃತಿಗಳನ್ನು ಆಯ್ಕೆ ಮಾಡಿದೆ.