ನಗರದ ಬ್ರಾಹ್ಮಣರ ಬೀದಿ, ಕೀಲಾರಿಪೇಟೆ, ಶಾಂತಿನಗರ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ರೇಷ್ಮೆಗೂಡು ಮಾರುಕಟ್ಟೆ ಹಾಗೂ ಕಾರಂಜಿಕಟ್ಟೆ ಬಡಾವಣೆಗೆ ಬೆಳಿಗ್ಗೆ ಭೇಟಿ ನೀಡಿ ಜಿಲ್ಲಾಧಿಕಾರಿಯು ಸ್ಥಳೀಯರ ಅಹವಾಲು ಆಲಿಸಿದರು. ಕುಡಿಯುವ ನೀರು, ಚರಂಡಿ, ರಸ್ತೆ, ಬೀದಿ ದೀಪ ಸೇರಿದಂತೆ ಮೂಲಸೌಕರ್ಯ ಸಮಸ್ಯೆಯನ್ನು ಸಾರ್ವಜನಿಕರು ಎಳೆ ಎಳೆಯಾಗಿ ಬಿಚ್ಚಿಟ್ಟರು.