ಕೆರೆಯಂಗಳದ ಕೊಳವೆ ಬಾವಿಗಳಲ್ಲಿನ ಅಂತರ್ಜಲದ ಜತೆ ಕೆ.ಸಿ ವ್ಯಾಲಿ ಯೋಜನೆ ನೀರು ಸೇರುವ ಆತಂಕ ಎದುರಾಗಿದೆ. ಹೀಗಾಗಿ ಕೊಳವೆ ಬಾವಿಗಳ ಸುತ್ತ ತಡೆಗೋಡೆ ನಿರ್ಮಿಸಲಾಗುತ್ತಿದೆ. ಕಾಮಗಾರಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘ಕೆ.ಸಿ ವ್ಯಾಲಿ ನೀರು ಮಡೇರಹಳ್ಳಿ ಕೆರೆಗೂ ಬರುತ್ತದೆ’ ಎಂದು ತಿಳಿಸಿದರು.