<p>ಪ್ರಜಾವಾಣಿ ವಾರ್ತೆ</p>.<p>ಕೋಲಾರ: ಡ್ರಗ್ಸ್ ಮುಕ್ತ ಕೋಲಾರ ಜಿಲ್ಲೆಯನ್ನಾಗಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ‘ನಾರ್ಕೊ ಸಮನ್ವಯ ಕೇಂದ್ರದ ಸಮಿತಿ’ಯ ಜಿಲ್ಲಾ ಮಟ್ಟದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಣೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಕಾರ್ಯಕ್ರಮ ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಬೇಕು. ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿವೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು ಎಂದರು.</p>.<p>ಮಾದಕ ವಸ್ತು ವ್ಯಸನಕ್ಕೆ ಗುರಿಯಾಗಿರುವ ಕಾರ್ಮಿಕರ ಮನಪರಿವರ್ತಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿ ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಮಾತನಾಡಿ, ‘ನಿರ್ಬಂಧಿತ ಮತ್ತುಭರಿಸುವ ಔಷಧಿಗಳು ಜನ ಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣಾಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರ ವಹಿಸಬೇಕು. ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.</p>.<p>ಕಾಲೇಜು ಹಾಸ್ಟೆಲ್ಗಳಲ್ಲಿ ರಜೆಯ ದಿನಗಳಲ್ಲಿ ಮನೆಗಳಿಗೆ ಹೋಗಿ ಮರಳಿ ಬರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದಾದರೂ ಮಾದಕ ವಸ್ತುಗಳನ್ನು ತೆಗೆದುಕೊಂಡು ಬಂದಿದ್ದಾರೆಯೇ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಅಬಕಾರಿ ಉಪ ಆಯುಕ್ತೆ ಸೈಯದಾ ಅಜ್ಮತ್ ಆಫ್ರಿನ್, ಆರ್ಟಿಓ ಅಧಿಕಾರಿ ಪಾಲ್ಗೊಂಡಿದ್ದರು.</p>.<div><blockquote> ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ನಿಯಂತ್ರಣ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು </blockquote><span class="attribution">ಕನ್ನಿಕಾ ಸಿಕ್ರಿವಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ </span></div>.<div><blockquote>ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಕೆಲಸ ಸ್ಥಳಗಳಲ್ಲಿ ಅರಿವು ಮೂಡಿಸಬೇಕು. </blockquote><span class="attribution">ಎಂ.ಆರ್.ರವಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಕೋಲಾರ: ಡ್ರಗ್ಸ್ ಮುಕ್ತ ಕೋಲಾರ ಜಿಲ್ಲೆಯನ್ನಾಗಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ನಗರ ಹೊರವಲಯದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ‘ನಾರ್ಕೊ ಸಮನ್ವಯ ಕೇಂದ್ರದ ಸಮಿತಿ’ಯ ಜಿಲ್ಲಾ ಮಟ್ಟದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಣೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ನಿರ್ದೇಶನ ನೀಡಿದರು.</p>.<p>ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಕಾರ್ಯಕ್ರಮ ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ವಿದ್ಯಾಸಂಸ್ಥೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ನಡೆಸಬೇಕು. ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತಿವೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು ಎಂದರು.</p>.<p>ಮಾದಕ ವಸ್ತು ವ್ಯಸನಕ್ಕೆ ಗುರಿಯಾಗಿರುವ ಕಾರ್ಮಿಕರ ಮನಪರಿವರ್ತಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿ ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಮಾತನಾಡಿ, ‘ನಿರ್ಬಂಧಿತ ಮತ್ತುಭರಿಸುವ ಔಷಧಿಗಳು ಜನ ಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣಾಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರ ವಹಿಸಬೇಕು. ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು’ ಎಂದರು.</p>.<p>ಕಾಲೇಜು ಹಾಸ್ಟೆಲ್ಗಳಲ್ಲಿ ರಜೆಯ ದಿನಗಳಲ್ಲಿ ಮನೆಗಳಿಗೆ ಹೋಗಿ ಮರಳಿ ಬರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯಾವುದಾದರೂ ಮಾದಕ ವಸ್ತುಗಳನ್ನು ತೆಗೆದುಕೊಂಡು ಬಂದಿದ್ದಾರೆಯೇ ಎಂಬುದನ್ನು ಪರಿಶೀಲನೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.</p>.<p>ಸಭೆಯಲ್ಲಿ ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಅಬಕಾರಿ ಉಪ ಆಯುಕ್ತೆ ಸೈಯದಾ ಅಜ್ಮತ್ ಆಫ್ರಿನ್, ಆರ್ಟಿಓ ಅಧಿಕಾರಿ ಪಾಲ್ಗೊಂಡಿದ್ದರು.</p>.<div><blockquote> ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ನಿಯಂತ್ರಣ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು </blockquote><span class="attribution">ಕನ್ನಿಕಾ ಸಿಕ್ರಿವಾಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ </span></div>.<div><blockquote>ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಕೆಲಸ ಸ್ಥಳಗಳಲ್ಲಿ ಅರಿವು ಮೂಡಿಸಬೇಕು. </blockquote><span class="attribution">ಎಂ.ಆರ್.ರವಿ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>