<p><strong>ಶ್ರೀನಿವಾಸಪುರ:</strong> ಕೆರೆಗಳು ಸಾರ್ವಜನಿಕರ ಸ್ವತ್ತಾಗಿದ್ದು, ಎಲ್ಲರೂ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ಭೇಟಿ ನೀಡಿ ದಾಖಲೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.</p>.<p>‘ಈಗಾಗಲೇ ಕೆರೆಗಳ ಸರ್ವೆ ಕಾರ್ಯನಡೆಯುತ್ತಿದ್ದು, ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು. ಒಂದು ವೇಳೆ ಕೆರೆ ಜಿಲ್ಲಾ ಪಂಚಾಯಿತಿ ಅಧೀನದಲ್ಲಿ ಇದ್ದರೆ ಗ್ರಾಮ ಪಂಚಾಯಿತಿ, ಪಿಡಿಒ ಹಾಗೂ ಇಲಾಖಾಧಿಕಾರಿ ಸಮ್ಮುಖದಲ್ಲಿ ಸರ್ವೇ ಮಾಡಬೇಕು. ಒತ್ತವರಿಯಾಗಿದ್ದರೆ ಅದಕ್ಕೆ ಟ್ರೆಂಚ್ ಹೊಡೆಸಬೇಕು’ ಎಂದರು.</p>.<p>‘ಕೆರೆಯಂಗಳದಲ್ಲಿ ಬೆಳೆ ಬೆಳೆದು ಫಸಲು ಪೂರ್ಣ ಬಂದಿದ್ದರೆ ಯಾವುದೇ ಕಾರಣಕ್ಕೂ ನಾಶ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.</p>.<p>ಪಟ್ಟಣದ ಅಮಾನಿಕೆರೆಯಂಗಳದಲ್ಲಿ ಸುಮಾರು 200 ಮನೆಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ, ‘ಕೆರೆಯು ಅಳತೆ ಆಗಿದೆಯೋ ಇಲ್ಲವೋ ನನಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ತಾಲ್ಲೂಕಿನ 50 ರಷ್ಟು ಕೆರೆಗಳು ಅಳತೆ ಆಗಬೇಕಾಗಿದೆ’ ಎಂದರು.</p>.<p>ತಾಲ್ಲೂಕಿನ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ, ಕೆಲವೊಂದು ಸಮಸ್ಯೆಗಳಿಗೆ ತಹಶೀಲ್ದಾರ್ ಜೊತೆ ಚರ್ಚೆ ಮಾಡಿದರು. ವಿವಿಧ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹಾರ ಮಾಡಿಕೊಡುವಂತೆ ನಿರ್ದೇಶನ ನೀಡಿದರು.</p>.<p>ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಕೆರೆಗಳು ಸಾರ್ವಜನಿಕರ ಸ್ವತ್ತಾಗಿದ್ದು, ಎಲ್ಲರೂ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ಭೇಟಿ ನೀಡಿ ದಾಖಲೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.</p>.<p>‘ಈಗಾಗಲೇ ಕೆರೆಗಳ ಸರ್ವೆ ಕಾರ್ಯನಡೆಯುತ್ತಿದ್ದು, ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು. ಒಂದು ವೇಳೆ ಕೆರೆ ಜಿಲ್ಲಾ ಪಂಚಾಯಿತಿ ಅಧೀನದಲ್ಲಿ ಇದ್ದರೆ ಗ್ರಾಮ ಪಂಚಾಯಿತಿ, ಪಿಡಿಒ ಹಾಗೂ ಇಲಾಖಾಧಿಕಾರಿ ಸಮ್ಮುಖದಲ್ಲಿ ಸರ್ವೇ ಮಾಡಬೇಕು. ಒತ್ತವರಿಯಾಗಿದ್ದರೆ ಅದಕ್ಕೆ ಟ್ರೆಂಚ್ ಹೊಡೆಸಬೇಕು’ ಎಂದರು.</p>.<p>‘ಕೆರೆಯಂಗಳದಲ್ಲಿ ಬೆಳೆ ಬೆಳೆದು ಫಸಲು ಪೂರ್ಣ ಬಂದಿದ್ದರೆ ಯಾವುದೇ ಕಾರಣಕ್ಕೂ ನಾಶ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.</p>.<p>ಪಟ್ಟಣದ ಅಮಾನಿಕೆರೆಯಂಗಳದಲ್ಲಿ ಸುಮಾರು 200 ಮನೆಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ, ‘ಕೆರೆಯು ಅಳತೆ ಆಗಿದೆಯೋ ಇಲ್ಲವೋ ನನಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ತಾಲ್ಲೂಕಿನ 50 ರಷ್ಟು ಕೆರೆಗಳು ಅಳತೆ ಆಗಬೇಕಾಗಿದೆ’ ಎಂದರು.</p>.<p>ತಾಲ್ಲೂಕಿನ ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ, ಕೆಲವೊಂದು ಸಮಸ್ಯೆಗಳಿಗೆ ತಹಶೀಲ್ದಾರ್ ಜೊತೆ ಚರ್ಚೆ ಮಾಡಿದರು. ವಿವಿಧ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹಾರ ಮಾಡಿಕೊಡುವಂತೆ ನಿರ್ದೇಶನ ನೀಡಿದರು.</p>.<p>ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>