<p><strong>ಕೋಲಾರ:</strong> ‘ಸಹಕಾರಿ ಸಂಸ್ಥೆಗಳಲ್ಲೇ ಮಾದರಿ ಬ್ಯಾಂಕ್ ಆಗಿರುವ ಕೋಲಾರ ಡಿಸಿಸಿ ಬ್ಯಾಂಕ್ ಕುರಿತು ನಬಾರ್ಡ್ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮಾರ್ಚ್ 18ರಂದು ನಡೆಯುವ ರಾಜ್ಯ ಸಾಲ ಸಮ್ಮೇಳನದಲ್ಲಿ ಬಿಡುಗಡೆ ಮಾಡುತ್ತಾರೆ’ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ಪ್ರಸಕ್ತ ಹಣಕಾಸು ಆರ್ಥಿಕ ವರ್ಷದ ಕಡೆಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಹಾಗೂ ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಸಾಕ್ಷ್ಯಚಿತ್ರದಲ್ಲಿ ಬ್ಯಾಂಕ್ನ ಸಾಧನೆಯನ್ನು ದಾಖಲಿಸಲಾಗಿದೆ’ ಎಂದು ವಿವರಿಸಿದರು.</p>.<p>‘ನಾಲ್ಕೈದು ವರ್ಷಗಳ ಹಿಂದೆ ಬ್ಯಾಂಕ್ನ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದಿತ್ತು. ಅತಿ ಹೆಚ್ಚು ಖಾತೆಗಳು ವಸೂಲಾಗದ ಸಾಲಕ್ಕೆ (ಎನ್ಪಿಎ) ಒಳಗಾಗಿ ರಾಜ್ಯದಲ್ಲಿ ಅತ್ಯಂತ ಹೀನಾಯ ಬ್ಯಾಂಕ್ ಎಂಬ ಅಪಖ್ಯಾತಿಗೆ ಒಳಗಾಗಿತ್ತು. ಇದೀಗೆ ರಾಜ್ಯದಲ್ಲೇ ಮಾದರಿ ಡಿಸಿಸಿ ಬ್ಯಾಂಕ್ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಈ ಸಾಧನೆಯ ಕೀರ್ತಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಲ್ಲುತ್ತದೆ’ ಎಂದರು.</p>.<p>‘ಬ್ಯಾಂಕ್ನ ಆರ್ಥಿಕ ಪರಿಸ್ಥಿತಿ ಕುಸಿದಾಗ ನಬಾರ್ಡ್ ಮತ್ತು ಅಪೆಕ್ಸ್ ಬ್ಯಾಂಕ್ಗಳು ವಿಶ್ವಾಸವಿಟ್ಟು ನೆರವು ನೀಡಿದ್ದರಿಂದ ಪ್ರಗತಿ ಸಾಧಿಸಲು ಸಾಧ್ಯವಾಯಿತು. ಬ್ಯಾಂಕ್ ಸುಮಾರು 4 ಲಕ್ಷ ಕುಟುಂಬಗಳ ಮಹಿಳೆಯರಿಗೆ ಸಾಲ ನೀಡಿ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಪಾರದರ್ಶಕ ಆಡಳಿತಕ್ಕಾಗಿ ಎಲ್ಲಾ ಸೊಸೈಟಿಗಳ ಗಣಕೀಕರಣಕ್ಕೆ ಒತ್ತು ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಸೊಸೈಟಿಗಳ ಲೆಕ್ಕದ ವಿವರಗಳ ದಾಖಲಾತಿ ಪುಸ್ತಕಗಳು ಕ್ರಮಬದ್ಧವಾಗಿರಬೇಕು. ಎಲ್ಲಾ ಸೂಸೈಟಿಗಳ ಲೆಕ್ಕ ಪರಿಶೋಧನಾ ವರದಿಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಇದರಿಂದ ಸಾರ್ವಜನಿಕರ ವಿಶ್ವಾಸ ಗಳಿಸಬಹುದು’ ಎಂದು ಸಲಹೆ ನೀಡಿದರು.</p>.<p>ರಾಜ್ಯಕ್ಕೆ ಮಾದರಿ: ‘ದಿವಾಳಿಯಾಗಿದ್ದ ಡಿಸಿಸಿ ಬ್ಯಾಂಕನ್ನು ಪುನಶ್ಚೇತನಗೊಳಿಸಿ, ಮಹಿಳೆಯರ ಸಬಲೀಕರಣಕ್ಕಾಗಿ ಸಹಕಾರ ಕ್ಷೇತ್ರದಲ್ಲಿ ಅತಿ ಹೆಚ್ಚು ಸಾಲ ವಿತರಿಸಲಾಗಿದೆ. ಬ್ಯಾಂಕ್ ಸಾಲ ವಸೂಲಾತಿಯಲ್ಲೂ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ’ ಎಂದು ನಬಾರ್ಡ್ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ (ಎಜಿಎಂ) ನಟರಾಜನ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಡಿಸಿಸಿ ಬ್ಯಾಂಕ್ ಬಿಆರ್ ಕಾಯ್ದೆ ಕಲಂ 11(1) ಪಾಲನೆ ಮಾಡುವಲ್ಲಿ ಯಶಸ್ವಿಯಾಗಿದೆ. ಶೇ 63ರಷ್ಟಿದ್ದ ಬ್ಯಾಂಕ್ನ ವಸೂಲಾಗದ ಸಾಲವನ್ನು (ಎನ್ಪಿಎ) ಶೇ 3.20ಕ್ಕೆ ಇಳಿಸಿ ಶೇ 96ರಷ್ಟು ನಷ್ಟ ತುಂಬಿರುವುದು ದೊಡ್ಡ ಸಾಧನೆ. ಬ್ಯಾಂಕ್ ಕೃಷಿ ಕ್ಷೇತ್ರಕ್ಕೆ ₹ 345 ಕೋಟಿ, ಕೃಷಿಯೇತರ ಕ್ಷೇತ್ರಗಳಿಗೆ ₹ 370 ಕೋಟಿ ಸಾಲ ವಿತರಿಸಿದೆ. ಸಾಲ ವಸೂಲಾತಿಯಲ್ಲಿ ಶೇ 94ರಷ್ಟು ಸಾಧನೆ ಮಾಡಿದೆ’ ಎಂದು ಶ್ಲಾಘಿಸಿದರು.</p>.<p>ಕ್ರಮಬದ್ಧ ವರದಿ: ‘ಮಹಿಳಾ ಸ್ವಸಹಾಯ ಗುಂಪುಗಳು ಪ್ರತಿ ವಾರ ನಡೆಸುವ ಸಭೆಯ ನಡಾವಳಿಯನ್ನು ದಾಖಲೆಪುಸ್ತಕದಲ್ಲಿ ಮತ್ತು ಬಿಲ್ನಲ್ಲಿ ದಾಖಲಿಸಬೇಕು. ಸಭೆಯ ನಿರ್ಣಯ, ಪಡೆದ ಸಾಲ ಮತ್ತು ಮರುಪಾವತಿ ವಿವರ ಹಾಗೂ ಪ್ರಗತಿಯ ಸಾಧನೆಗಳನ್ನು ದಾಖಲೆಪುಸ್ತಕ ಒಳಗೊಂಡಿರಬೇಕು. ಸೊಸೈಟಿಗಳ ಲೆಕ್ಕಪರಿಶೋಧನಾ ವರದಿಗಳು ಕ್ರಮಬದ್ಧವಾಗಿರಬೇಕು’ ಎಂದು ಸೂಚಿಸಿದರು.</p>.<p>ಬ್ಯಾಂಕ್ನ ಉಪಾಧ್ಯಕ್ಷ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ರವಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಿವಕುಮಾರ್, ನಾಗೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಸಹಕಾರಿ ಸಂಸ್ಥೆಗಳಲ್ಲೇ ಮಾದರಿ ಬ್ಯಾಂಕ್ ಆಗಿರುವ ಕೋಲಾರ ಡಿಸಿಸಿ ಬ್ಯಾಂಕ್ ಕುರಿತು ನಬಾರ್ಡ್ ತಯಾರಿಸಿರುವ ಸಾಕ್ಷ್ಯಚಿತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಮಾರ್ಚ್ 18ರಂದು ನಡೆಯುವ ರಾಜ್ಯ ಸಾಲ ಸಮ್ಮೇಳನದಲ್ಲಿ ಬಿಡುಗಡೆ ಮಾಡುತ್ತಾರೆ’ ಎಂದು ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ ತಿಳಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ಪ್ರಸಕ್ತ ಹಣಕಾಸು ಆರ್ಥಿಕ ವರ್ಷದ ಕಡೆಯ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಹಾಗೂ ಪರಿಶೀಲನಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಸಾಕ್ಷ್ಯಚಿತ್ರದಲ್ಲಿ ಬ್ಯಾಂಕ್ನ ಸಾಧನೆಯನ್ನು ದಾಖಲಿಸಲಾಗಿದೆ’ ಎಂದು ವಿವರಿಸಿದರು.</p>.<p>‘ನಾಲ್ಕೈದು ವರ್ಷಗಳ ಹಿಂದೆ ಬ್ಯಾಂಕ್ನ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದಿತ್ತು. ಅತಿ ಹೆಚ್ಚು ಖಾತೆಗಳು ವಸೂಲಾಗದ ಸಾಲಕ್ಕೆ (ಎನ್ಪಿಎ) ಒಳಗಾಗಿ ರಾಜ್ಯದಲ್ಲಿ ಅತ್ಯಂತ ಹೀನಾಯ ಬ್ಯಾಂಕ್ ಎಂಬ ಅಪಖ್ಯಾತಿಗೆ ಒಳಗಾಗಿತ್ತು. ಇದೀಗೆ ರಾಜ್ಯದಲ್ಲೇ ಮಾದರಿ ಡಿಸಿಸಿ ಬ್ಯಾಂಕ್ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಈ ಸಾಧನೆಯ ಕೀರ್ತಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಲ್ಲುತ್ತದೆ’ ಎಂದರು.</p>.<p>‘ಬ್ಯಾಂಕ್ನ ಆರ್ಥಿಕ ಪರಿಸ್ಥಿತಿ ಕುಸಿದಾಗ ನಬಾರ್ಡ್ ಮತ್ತು ಅಪೆಕ್ಸ್ ಬ್ಯಾಂಕ್ಗಳು ವಿಶ್ವಾಸವಿಟ್ಟು ನೆರವು ನೀಡಿದ್ದರಿಂದ ಪ್ರಗತಿ ಸಾಧಿಸಲು ಸಾಧ್ಯವಾಯಿತು. ಬ್ಯಾಂಕ್ ಸುಮಾರು 4 ಲಕ್ಷ ಕುಟುಂಬಗಳ ಮಹಿಳೆಯರಿಗೆ ಸಾಲ ನೀಡಿ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಪಾರದರ್ಶಕ ಆಡಳಿತಕ್ಕಾಗಿ ಎಲ್ಲಾ ಸೊಸೈಟಿಗಳ ಗಣಕೀಕರಣಕ್ಕೆ ಒತ್ತು ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಸೊಸೈಟಿಗಳ ಲೆಕ್ಕದ ವಿವರಗಳ ದಾಖಲಾತಿ ಪುಸ್ತಕಗಳು ಕ್ರಮಬದ್ಧವಾಗಿರಬೇಕು. ಎಲ್ಲಾ ಸೂಸೈಟಿಗಳ ಲೆಕ್ಕ ಪರಿಶೋಧನಾ ವರದಿಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು. ಇದರಿಂದ ಸಾರ್ವಜನಿಕರ ವಿಶ್ವಾಸ ಗಳಿಸಬಹುದು’ ಎಂದು ಸಲಹೆ ನೀಡಿದರು.</p>.<p>ರಾಜ್ಯಕ್ಕೆ ಮಾದರಿ: ‘ದಿವಾಳಿಯಾಗಿದ್ದ ಡಿಸಿಸಿ ಬ್ಯಾಂಕನ್ನು ಪುನಶ್ಚೇತನಗೊಳಿಸಿ, ಮಹಿಳೆಯರ ಸಬಲೀಕರಣಕ್ಕಾಗಿ ಸಹಕಾರ ಕ್ಷೇತ್ರದಲ್ಲಿ ಅತಿ ಹೆಚ್ಚು ಸಾಲ ವಿತರಿಸಲಾಗಿದೆ. ಬ್ಯಾಂಕ್ ಸಾಲ ವಸೂಲಾತಿಯಲ್ಲೂ ಹೆಚ್ಚಿನ ಸಾಧನೆ ಮಾಡಿ ರಾಜ್ಯಕ್ಕೆ ಮಾದರಿಯಾಗಿದೆ’ ಎಂದು ನಬಾರ್ಡ್ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ (ಎಜಿಎಂ) ನಟರಾಜನ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಡಿಸಿಸಿ ಬ್ಯಾಂಕ್ ಬಿಆರ್ ಕಾಯ್ದೆ ಕಲಂ 11(1) ಪಾಲನೆ ಮಾಡುವಲ್ಲಿ ಯಶಸ್ವಿಯಾಗಿದೆ. ಶೇ 63ರಷ್ಟಿದ್ದ ಬ್ಯಾಂಕ್ನ ವಸೂಲಾಗದ ಸಾಲವನ್ನು (ಎನ್ಪಿಎ) ಶೇ 3.20ಕ್ಕೆ ಇಳಿಸಿ ಶೇ 96ರಷ್ಟು ನಷ್ಟ ತುಂಬಿರುವುದು ದೊಡ್ಡ ಸಾಧನೆ. ಬ್ಯಾಂಕ್ ಕೃಷಿ ಕ್ಷೇತ್ರಕ್ಕೆ ₹ 345 ಕೋಟಿ, ಕೃಷಿಯೇತರ ಕ್ಷೇತ್ರಗಳಿಗೆ ₹ 370 ಕೋಟಿ ಸಾಲ ವಿತರಿಸಿದೆ. ಸಾಲ ವಸೂಲಾತಿಯಲ್ಲಿ ಶೇ 94ರಷ್ಟು ಸಾಧನೆ ಮಾಡಿದೆ’ ಎಂದು ಶ್ಲಾಘಿಸಿದರು.</p>.<p>ಕ್ರಮಬದ್ಧ ವರದಿ: ‘ಮಹಿಳಾ ಸ್ವಸಹಾಯ ಗುಂಪುಗಳು ಪ್ರತಿ ವಾರ ನಡೆಸುವ ಸಭೆಯ ನಡಾವಳಿಯನ್ನು ದಾಖಲೆಪುಸ್ತಕದಲ್ಲಿ ಮತ್ತು ಬಿಲ್ನಲ್ಲಿ ದಾಖಲಿಸಬೇಕು. ಸಭೆಯ ನಿರ್ಣಯ, ಪಡೆದ ಸಾಲ ಮತ್ತು ಮರುಪಾವತಿ ವಿವರ ಹಾಗೂ ಪ್ರಗತಿಯ ಸಾಧನೆಗಳನ್ನು ದಾಖಲೆಪುಸ್ತಕ ಒಳಗೊಂಡಿರಬೇಕು. ಸೊಸೈಟಿಗಳ ಲೆಕ್ಕಪರಿಶೋಧನಾ ವರದಿಗಳು ಕ್ರಮಬದ್ಧವಾಗಿರಬೇಕು’ ಎಂದು ಸೂಚಿಸಿದರು.</p>.<p>ಬ್ಯಾಂಕ್ನ ಉಪಾಧ್ಯಕ್ಷ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ರವಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶಿವಕುಮಾರ್, ನಾಗೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>