<p><strong>ಕೋಲಾರ:</strong> ಜಿಲ್ಲಾ ಸಹಕಾರ ಒಕ್ಕೂಟದಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ –2025 ಕಾರ್ಯಕ್ರಮವನ್ನು ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಕಡೆ ಆಚರಿಸುತ್ತಿರುವುದಾಗಿ ಒಕ್ಕೂಟದ ನೂತನ ನಿರ್ದೇಶಕರಾದ ಕಲ್ವಮಂಜಲಿ ಟಿ.ಕೆ.ಬೈರೇಗೌಡ ಹಾಗೂ ರಘುಪತಿರೆಡ್ಡಿ ತಿಳಿಸಿದರು.</p>.<p>ಗುರುವಾರ ನಗರದ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜಕೀಯ ಹಸ್ತಕ್ಷೇಪದಿಂದಾಗಿ ಡಿಸಿಸಿ ಬ್ಯಾಂಕ್ ಆರ್ಥಿಕವಾಗಿ ಕುಂಠಿತವಾಗಿದ್ದು, ರೈತರು, ಮಹಿಳೆಯರು ಸೇರಿದಂತೆ ಅರ್ಹರಿಗೆ ಸಾಲ ಸಿಗದಂತಾಗಿದೆ. ರಾಜಕೀಯ ಹಸ್ತಕ್ಷೇಪ ನಿಲ್ಲಿಸಿ ಸಹಕಾರ ವ್ಯವಸ್ಥೆ ಬಲಪಡಿಸಬೇಕು’ ಎಂದರು.</p>.<p>ಈ ಬಾರಿಯ ಸಹಕಾರ ಸಪ್ತಾಹದ ಧ್ಯೇಯ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು’ ಎಂಬುದಾಗಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಸಹಕಾರ ಒಕ್ಕೂಟದ ಕಚೇರಿ ಆವರಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಧ್ವಜಾರೋಹಣ ನೆರವೇರಿಸುವರು. ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಹಾಗೂ ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡ, ರಾಜ್ಯ ಸಹಕಾರ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕಿನ ನಿರ್ದೇಶಕ ಯಲವಾರ ಸೊಣ್ಣೇಗೌಡ ಪಾಲ್ಗೊಳ್ಳುವರು. ವಾರಪೂರ್ತಿ ವಿವಿಧ ತಾಲ್ಲೂಕುಗಳಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಆಯಾಯ ತಾಲ್ಲೂಕಿನ ನಿರ್ದೇಶಕರು ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.</p>.<p>ನ.15 ರಂದು ಬಂಗಾರಪೇಟೆ ಹಾಲು ಒಕ್ಕೂಟದ ಶಿಬಿರ ಕಚೇರಿಯ 11 ಗಂಟೆಗೆ ‘ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ’ ವಿಷಯದಡಿ 2ನೇ ದಿನದ ಕಾರ್ಯಕ್ರಮ ನಡೆಯಲಿದೆ. ಸಂಸದ ಎಂ.ಮಲ್ಲೇಶ್ ಬಾಬು ಉದ್ಘಾಟಿಸುವರು ಮತ್ತು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸುವರು. ನ.16 ರಂದು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ’ ವಿಷಯದಡಿ ಕೋಮುಲ್ ನಿರ್ದೇಶಕ ಹನುಮೇಶ್ ಉದ್ಘಾಟಿಸಲಿದ್ದು, ಒಕ್ಕೂಟದ ನಿರ್ದೇಶಕ ಸಿ.ಮುನಿವೆಂಕಟಪ್ಪ ಅಧ್ಯಕ್ಷತೆ ವಹಿಸುವರು ಎಂದರು.</p>.<p>ನ.17 ರಂದು ಕೆಜಿಎಫ್ ತಾಲ್ಲೂಕಿನ ಕಳ್ಳಿಕುಪ್ಪ ಎಂಪಿಸಿಎಸ್ ಆವರಣದಲ್ಲಿ ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ’ ವಿಷಯದ ಕುರಿತಂತೆ ಕಾರ್ಯಕ್ರಮವನ್ನು ಶಾಸಕ ರೂಪಕಲಾ ಶಶಿಧರ್ ಉದ್ಘಾಟಿಸಲಿದ್ದು, ಕೋಚಿಮುಲ್ ನಿರ್ದೇಶಕ ಜಯಸಿಂಹಕೃಷ್ಣಪ್ಪ ಪಾಲ್ಗೊಳ್ಳುವರು. ನ.18ರ ಕಾರ್ಯಕ್ರಮ ಮುಳಬಾಗಿಲಿನ ಕೋಚಿಮುಲ್ ಸಂಘಗಳ ಒಕ್ಕೂಟದ ಉಪಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ‘ಸಹಕಾರ ಉದ್ಯಮಶೀಲತೆಯಿಂದ ಯುವಜನ ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ವಿಷಯದಡಿ ನಡೆಯಲಿದ್ದು, ಶಾಸಕ ಸಮೃದ್ದಿ ಮಂಜುನಾಥ್ ಉದ್ಘಾಟಿಸುವರು ಎಂದು ವಿವರಿಸಿದರು.</p>.<p>ನ.19 ರಂದು ಮಾಲೂರು ತಾಲ್ಲೂಕಿನ ಹಾಲು ಒಕ್ಕೂಟದ ಉಪ ಕಚೇರಿಯಲ್ಲಿ ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್ ಫಾರಂ ಸಹಕಾರ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ’ ವಿಷಯದಡಿ ಕಾರ್ಯಕ್ರಮವನ್ನು ಶಾಸಕ ಕೆ.ವೈ.ನಂಜೇಗೌಡ ಉದ್ಘಾಟಿಸುವರು ಎಂದರು.</p>.<p>ನ.20 ರಂದು ಸಮಾರೋಪ ಸಮಾರಂಭ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಸಹಯೋಗದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ವಿಷಯದಡಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ನೂತನ ನಿರ್ದೇಶಕರಾದ ಮುರಳಿಗೌಡ, ಅಣ್ಣಿಹಳ್ಳಿ ನಾಗರಾಜ್, ಕೆ.ಎಂ.ಮುನಿರಾಜು, ಕೆ.ಎಂ.ಮಂಜುನಾಥ್, ಸಿ.ಮುನಿವೆಂಕಟಪ್ಪ, ಎಸ್.ಮಂಜುನಾಥ್, ಜಿ.ಸಿ.ಮಂಜುನಾಥರೆಡ್ಡಿ, ಎನ್.ಎಸ್.ಶಂಕರ್, ಲಕ್ಷ್ಮಿನಾರಾಯಣ, ಬೆಟ್ಟಹೊಸಪುರ ಮುರಳೀಧರ್, ಹನಯಮಂತಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಭಾರತಿ, ವ್ಯವಸ್ಥಾಪಕಿ ಲಕ್ಷ್ಮಿದೇವಿ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲಾ ಸಹಕಾರ ಒಕ್ಕೂಟದಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ –2025 ಕಾರ್ಯಕ್ರಮವನ್ನು ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಕಡೆ ಆಚರಿಸುತ್ತಿರುವುದಾಗಿ ಒಕ್ಕೂಟದ ನೂತನ ನಿರ್ದೇಶಕರಾದ ಕಲ್ವಮಂಜಲಿ ಟಿ.ಕೆ.ಬೈರೇಗೌಡ ಹಾಗೂ ರಘುಪತಿರೆಡ್ಡಿ ತಿಳಿಸಿದರು.</p>.<p>ಗುರುವಾರ ನಗರದ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ರಾಜಕೀಯ ಹಸ್ತಕ್ಷೇಪದಿಂದಾಗಿ ಡಿಸಿಸಿ ಬ್ಯಾಂಕ್ ಆರ್ಥಿಕವಾಗಿ ಕುಂಠಿತವಾಗಿದ್ದು, ರೈತರು, ಮಹಿಳೆಯರು ಸೇರಿದಂತೆ ಅರ್ಹರಿಗೆ ಸಾಲ ಸಿಗದಂತಾಗಿದೆ. ರಾಜಕೀಯ ಹಸ್ತಕ್ಷೇಪ ನಿಲ್ಲಿಸಿ ಸಹಕಾರ ವ್ಯವಸ್ಥೆ ಬಲಪಡಿಸಬೇಕು’ ಎಂದರು.</p>.<p>ಈ ಬಾರಿಯ ಸಹಕಾರ ಸಪ್ತಾಹದ ಧ್ಯೇಯ ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು’ ಎಂಬುದಾಗಿದೆ. ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಸಹಕಾರ ಒಕ್ಕೂಟದ ಕಚೇರಿ ಆವರಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಧ್ವಜಾರೋಹಣ ನೆರವೇರಿಸುವರು. ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಹಾಗೂ ಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡ, ರಾಜ್ಯ ಸಹಕಾರ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕಿನ ನಿರ್ದೇಶಕ ಯಲವಾರ ಸೊಣ್ಣೇಗೌಡ ಪಾಲ್ಗೊಳ್ಳುವರು. ವಾರಪೂರ್ತಿ ವಿವಿಧ ತಾಲ್ಲೂಕುಗಳಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಆಯಾಯ ತಾಲ್ಲೂಕಿನ ನಿರ್ದೇಶಕರು ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.</p>.<p>ನ.15 ರಂದು ಬಂಗಾರಪೇಟೆ ಹಾಲು ಒಕ್ಕೂಟದ ಶಿಬಿರ ಕಚೇರಿಯ 11 ಗಂಟೆಗೆ ‘ತ್ರಿಭುವನ್ ಸಹಕಾರ ವಿಶ್ವವಿದ್ಯಾಲಯ ಸಂಶೋಧನೆ ಮತ್ತು ತರಬೇತಿಯಿಂದ ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ’ ವಿಷಯದಡಿ 2ನೇ ದಿನದ ಕಾರ್ಯಕ್ರಮ ನಡೆಯಲಿದೆ. ಸಂಸದ ಎಂ.ಮಲ್ಲೇಶ್ ಬಾಬು ಉದ್ಘಾಟಿಸುವರು ಮತ್ತು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಧ್ಯಕ್ಷತೆ ವಹಿಸುವರು. ನ.16 ರಂದು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ’ ವಿಷಯದಡಿ ಕೋಮುಲ್ ನಿರ್ದೇಶಕ ಹನುಮೇಶ್ ಉದ್ಘಾಟಿಸಲಿದ್ದು, ಒಕ್ಕೂಟದ ನಿರ್ದೇಶಕ ಸಿ.ಮುನಿವೆಂಕಟಪ್ಪ ಅಧ್ಯಕ್ಷತೆ ವಹಿಸುವರು ಎಂದರು.</p>.<p>ನ.17 ರಂದು ಕೆಜಿಎಫ್ ತಾಲ್ಲೂಕಿನ ಕಳ್ಳಿಕುಪ್ಪ ಎಂಪಿಸಿಎಸ್ ಆವರಣದಲ್ಲಿ ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ’ ವಿಷಯದ ಕುರಿತಂತೆ ಕಾರ್ಯಕ್ರಮವನ್ನು ಶಾಸಕ ರೂಪಕಲಾ ಶಶಿಧರ್ ಉದ್ಘಾಟಿಸಲಿದ್ದು, ಕೋಚಿಮುಲ್ ನಿರ್ದೇಶಕ ಜಯಸಿಂಹಕೃಷ್ಣಪ್ಪ ಪಾಲ್ಗೊಳ್ಳುವರು. ನ.18ರ ಕಾರ್ಯಕ್ರಮ ಮುಳಬಾಗಿಲಿನ ಕೋಚಿಮುಲ್ ಸಂಘಗಳ ಒಕ್ಕೂಟದ ಉಪಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ‘ಸಹಕಾರ ಉದ್ಯಮಶೀಲತೆಯಿಂದ ಯುವಜನ ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ವಿಷಯದಡಿ ನಡೆಯಲಿದ್ದು, ಶಾಸಕ ಸಮೃದ್ದಿ ಮಂಜುನಾಥ್ ಉದ್ಘಾಟಿಸುವರು ಎಂದು ವಿವರಿಸಿದರು.</p>.<p>ನ.19 ರಂದು ಮಾಲೂರು ತಾಲ್ಲೂಕಿನ ಹಾಲು ಒಕ್ಕೂಟದ ಉಪ ಕಚೇರಿಯಲ್ಲಿ ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಪ್ಲಾಟ್ ಫಾರಂ ಸಹಕಾರ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ’ ವಿಷಯದಡಿ ಕಾರ್ಯಕ್ರಮವನ್ನು ಶಾಸಕ ಕೆ.ವೈ.ನಂಜೇಗೌಡ ಉದ್ಘಾಟಿಸುವರು ಎಂದರು.</p>.<p>ನ.20 ರಂದು ಸಮಾರೋಪ ಸಮಾರಂಭ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ ಸಹಯೋಗದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ವಿಷಯದಡಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ನೂತನ ನಿರ್ದೇಶಕರಾದ ಮುರಳಿಗೌಡ, ಅಣ್ಣಿಹಳ್ಳಿ ನಾಗರಾಜ್, ಕೆ.ಎಂ.ಮುನಿರಾಜು, ಕೆ.ಎಂ.ಮಂಜುನಾಥ್, ಸಿ.ಮುನಿವೆಂಕಟಪ್ಪ, ಎಸ್.ಮಂಜುನಾಥ್, ಜಿ.ಸಿ.ಮಂಜುನಾಥರೆಡ್ಡಿ, ಎನ್.ಎಸ್.ಶಂಕರ್, ಲಕ್ಷ್ಮಿನಾರಾಯಣ, ಬೆಟ್ಟಹೊಸಪುರ ಮುರಳೀಧರ್, ಹನಯಮಂತಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಭಾರತಿ, ವ್ಯವಸ್ಥಾಪಕಿ ಲಕ್ಷ್ಮಿದೇವಿ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>