ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ (ಡಿಡಿಪಿಐ) ಕೃಷ್ಣಮೂರ್ತಿ ಅವರು ಇಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಡಿಡಿಪಿಐ ಆಗಿದ್ದ ಕೆ.ಎಂ.ಜಯರಾಮರೆಡ್ಡಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಡಿಪಿಐ ಆಗಿದ್ದ ಕೃಷ್ಣಮೂರ್ತಿ ಅವರನ್ನು ಸರ್ಕಾರ ಇತ್ತೀಚೆಗೆ ಜಿಲ್ಲೆಗೆ ವರ್ಗಾವಣೆ ಮಾಡಿತ್ತು.
ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಿಕ್ಷಕ ಸಂಘಟನೆಗಳ ಮುಖಂಡರು ನೂತನ ಡಿಡಿಪಿಐಗೆ ಶುಭ ಕೋರಿದರು.