<p><strong>ಕೋಲಾರ: </strong>‘ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಹಾಗೂ ಉಪ ನಿರ್ದೇಶಕರಾಗಿ ಪ್ರಾಮಾಣಿಕ ಸೇವೆ ಮೂಲಕ ವಿದ್ಯಾರ್ಥಿಗಳ ಮನ ಗೆದ್ದಿದ್ದ ಎಸ್.ವೆಂಕಟಸ್ವಾಮಿ ಅವರು ಸಮಾಜಕ್ಕೆ ಮಾದರಿ’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ಮಂಜುನಾಥ್ ಬಣ್ಣಿಸಿದರು.</p>.<p>ಸೇವೆಯಿಂದ ನಿವೃತ್ತರಾದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ವೆಂಕಟಸ್ವಾಮಿ ಅವರಿಗೆ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ‘ಉಪನ್ಯಾಸಕರಾಗಿ ವೃತ್ತಿ ಬದುಕು ಆರಂಭಿಸಿದ ವೆಂಕಟಸ್ವಾಮಿ ಅವರು ಕಾರ್ಯ ತತ್ಪರತೆಯಿಂದ ಬಡ್ತಿ ಪಡೆದು ಅನೇಕ ಹುದ್ದೆ ಅಲಂಕರಿಸಿದರು’ ಎಂದರು.</p>.<p>‘ಭೌತಶಾಸ್ತ್ರ ಉಪನ್ಯಾಸಕರಾಗಿ ಶ್ರೀನಿವಾಸಪುರದಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ವೆಂಕಟಸ್ವಾಮಿ ಸರ್ಕಾರಿ ಕಾಲೇಜಿನ ಮಕ್ಕಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಬಲ್ಲರು ಎಂಬುದನ್ನು ಸಾಬೀತುಪಡಿಸಿದರು. ಅವರು ಶ್ರೀನಿವಾಸಪುರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾಗ ಆ ಕಾಲೇಜು ಇಡೀ ರಾಜ್ಯದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಸಾಧನೆ ಮಾಡಿತು’ ಎಂದು ಹೇಳಿದರು.</p>.<p>‘ವೆಂಕಟಸ್ವಾಮಿ ಅವರು ವೇಮಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ನಂತರ ಕೋಲಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದರು. ಅವರ ಪ್ರಾಮಾಣಿಕ ಸೇವೆ ಸ್ಮರಣೀಯ’ ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಚೌಡಪ್ಪ ತಿಳಿಸಿದರು.</p>.<p>‘ವೆಂಕಟಸ್ವಾಮಿಯವರು ಪ್ರಾಂಶುಪಾಲರಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಿದರು. ಜಿಲ್ಲಾಡಳಿತ ಅವರ ಕಾರ್ಯತತ್ಪರತೆ ಗುರುತಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿತ್ತು. ಅವರ ಎಲ್ಲೇ ಕೆಲಸ ಮಾಡಿದರೂ ಆದರ್ಶ, ಮೌಲ್ಯಗಳನ್ನು ಬಿಡಲಿಲ್ಲ’ ಎಂದರು.</p>.<p>ಸ್ಪರ್ಧೆ ಹೆಚ್ಚಿದೆ: ‘ಇಂದು ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್, ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಹೀಗೆ ಹಲವು ಕ್ಷೇತ್ರಗಳಲ್ಲಿ ಸಾಧಕರಾಗಿ ಹೊರಹೊಮ್ಮಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಹೆಚ್ಚಿದೆ’ ಎಂದು ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.</p>.<p>‘ವೃತ್ತಿಯಲ್ಲಿ ಎಂದೂ ದ್ರೋಹ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೈಲಾದಷ್ಟು ಸೇವೆ ಮಾಡಿದ್ದೇನೆ. ವೃತ್ತಿ ಬದುಕಿಗೆ ಧಕ್ಕೆ ಬರುವಂತಹ ಸಂದರ್ಭದಲ್ಲಿ ಕೆಲವರೊಂದಿಗೆ ನಿಷ್ಠೂರವಾಗಿ ನಡೆದುಕೊಂಡಿದ್ದೇನೆ’ ಎಂದು ಹೇಳಿದರು.</p>.<p>ತಾಲ್ಲೂಕು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಗೋಪಿಕೃಷ್ಣನ್, ಉಪನ್ಯಾಸಕ ಮಂಜುನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ರತ್ನಪ್ಪ ಮೇಲಾಂಗಣಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಹಾಗೂ ಉಪ ನಿರ್ದೇಶಕರಾಗಿ ಪ್ರಾಮಾಣಿಕ ಸೇವೆ ಮೂಲಕ ವಿದ್ಯಾರ್ಥಿಗಳ ಮನ ಗೆದ್ದಿದ್ದ ಎಸ್.ವೆಂಕಟಸ್ವಾಮಿ ಅವರು ಸಮಾಜಕ್ಕೆ ಮಾದರಿ’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೆ.ಎನ್.ಮಂಜುನಾಥ್ ಬಣ್ಣಿಸಿದರು.</p>.<p>ಸೇವೆಯಿಂದ ನಿವೃತ್ತರಾದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ವೆಂಕಟಸ್ವಾಮಿ ಅವರಿಗೆ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ‘ಉಪನ್ಯಾಸಕರಾಗಿ ವೃತ್ತಿ ಬದುಕು ಆರಂಭಿಸಿದ ವೆಂಕಟಸ್ವಾಮಿ ಅವರು ಕಾರ್ಯ ತತ್ಪರತೆಯಿಂದ ಬಡ್ತಿ ಪಡೆದು ಅನೇಕ ಹುದ್ದೆ ಅಲಂಕರಿಸಿದರು’ ಎಂದರು.</p>.<p>‘ಭೌತಶಾಸ್ತ್ರ ಉಪನ್ಯಾಸಕರಾಗಿ ಶ್ರೀನಿವಾಸಪುರದಲ್ಲಿ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ವೆಂಕಟಸ್ವಾಮಿ ಸರ್ಕಾರಿ ಕಾಲೇಜಿನ ಮಕ್ಕಳು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಬಲ್ಲರು ಎಂಬುದನ್ನು ಸಾಬೀತುಪಡಿಸಿದರು. ಅವರು ಶ್ರೀನಿವಾಸಪುರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾಗ ಆ ಕಾಲೇಜು ಇಡೀ ರಾಜ್ಯದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಸಾಧನೆ ಮಾಡಿತು’ ಎಂದು ಹೇಳಿದರು.</p>.<p>‘ವೆಂಕಟಸ್ವಾಮಿ ಅವರು ವೇಮಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ನಂತರ ಕೋಲಾರದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದರು. ಅವರ ಪ್ರಾಮಾಣಿಕ ಸೇವೆ ಸ್ಮರಣೀಯ’ ಎಂದು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಚೌಡಪ್ಪ ತಿಳಿಸಿದರು.</p>.<p>‘ವೆಂಕಟಸ್ವಾಮಿಯವರು ಪ್ರಾಂಶುಪಾಲರಾಗಿ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಿದರು. ಜಿಲ್ಲಾಡಳಿತ ಅವರ ಕಾರ್ಯತತ್ಪರತೆ ಗುರುತಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿತ್ತು. ಅವರ ಎಲ್ಲೇ ಕೆಲಸ ಮಾಡಿದರೂ ಆದರ್ಶ, ಮೌಲ್ಯಗಳನ್ನು ಬಿಡಲಿಲ್ಲ’ ಎಂದರು.</p>.<p>ಸ್ಪರ್ಧೆ ಹೆಚ್ಚಿದೆ: ‘ಇಂದು ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್, ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಹೀಗೆ ಹಲವು ಕ್ಷೇತ್ರಗಳಲ್ಲಿ ಸಾಧಕರಾಗಿ ಹೊರಹೊಮ್ಮಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಹೆಚ್ಚಿದೆ’ ಎಂದು ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.</p>.<p>‘ವೃತ್ತಿಯಲ್ಲಿ ಎಂದೂ ದ್ರೋಹ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೈಲಾದಷ್ಟು ಸೇವೆ ಮಾಡಿದ್ದೇನೆ. ವೃತ್ತಿ ಬದುಕಿಗೆ ಧಕ್ಕೆ ಬರುವಂತಹ ಸಂದರ್ಭದಲ್ಲಿ ಕೆಲವರೊಂದಿಗೆ ನಿಷ್ಠೂರವಾಗಿ ನಡೆದುಕೊಂಡಿದ್ದೇನೆ’ ಎಂದು ಹೇಳಿದರು.</p>.<p>ತಾಲ್ಲೂಕು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಗೋಪಿಕೃಷ್ಣನ್, ಉಪನ್ಯಾಸಕ ಮಂಜುನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ರತ್ನಪ್ಪ ಮೇಲಾಂಗಣಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>