ಮುಳಬಾಗಿಲು: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ದಂಪತಿ ನಡುವೆ ಕಲಹ ಉಂಟಾಗಿ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪತಿ ಪರಾರಿಯಾಗಿರುವ ಘಟನೆ ನಗರದ ಸುಂಕು ಲೇಔಟ್ನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ತಾಲ್ಲೂಕಿನ ಸಂಗಂಡ್ಲಹಳ್ಳಿಯ ಪುಷ್ಪಾ (21) ಮೃತಪಟ್ಟವರು. ಪತಿ ನಂದೀಶ್ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಮೃತಳ ತಂದೆ ವೆಂಕಟರಾಮಪ್ಪ ದೂರು ನೀಡಿದ್ದಾರೆ.
ತಹಶೀಲ್ದಾರ್ ಕೆ.ಎನ್. ರಾಜಶೇಖರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.