ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಯಲ್ಲಿ ಯುವಕರ ಸಾವು

Last Updated 3 ಅಕ್ಟೋಬರ್ 2020, 14:28 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಎಸ್‌.ಅಗ್ರಹಾರ ಕೆರೆಯಲ್ಲಿ ಶುಕ್ರವಾರ ಈಜಾಡಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೋಲಾರದ ರಹಮತ್‌ನಗರ ಬಡಾವಣೆಯ ಇಮ್ರಾನ್‌ (22) ಮತ್ತು ಮಹಮ್ಮದ್‌ ನಾಜಿಬ್‌ (19) ಮೃತಪಟ್ಟವರು. ಸ್ನೇಹಿತರಾದ ಈ ಇಬ್ಬರು ಎಪಿಎಂಸಿಯ ಟೊಮೆಟೊ ಮಂಡಿಗಳಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದರು.

ಶುಕ್ರವಾರ ಸಂಜೆ 4 ಗಂಟೆಗೆ ಮನೆಯಿಂದ ಹೊರಟ ಇಮ್ರಾನ್‌ ಮತ್ತು ಮಹಮ್ಮದ್‌ ನಾಜಿಬ್‌ ಅವರು ಎಸ್‌.ಅಗ್ರಹಾರ ಕೆರೆಯಲ್ಲಿ ಈಜಲು ಹೋಗಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯಿಂದ ರಾತ್ರಿ ಮೃತರ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಲಾಯಿತು ಎಂದು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT