<p>ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 626ಕ್ಕೆ ಏರಿಕೆಯಾಗಿದೆ.</p>.<p>ಇದರ ಬೆನ್ನಲ್ಲೇ ಹೊಸದಾಗಿ 17 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 235ಕ್ಕೆ ಏರಿಕೆಯಾಗಿದೆ. ಕೋಲಾರ ತಾಲ್ಲೂಕಿನ ಇಬ್ಬರಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್ ತಾಲ್ಲೂಕಿನ 8 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ.</p>.<p>ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 10 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<p>ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಬಂಗಾರಪೇಟೆ, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 626ಕ್ಕೆ ಏರಿಕೆಯಾಗಿದೆ.</p>.<p>ಇದರ ಬೆನ್ನಲ್ಲೇ ಹೊಸದಾಗಿ 17 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 235ಕ್ಕೆ ಏರಿಕೆಯಾಗಿದೆ. ಕೋಲಾರ ತಾಲ್ಲೂಕಿನ ಇಬ್ಬರಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್ ತಾಲ್ಲೂಕಿನ 8 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ.</p>.<p>ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 10 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<p>ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಬಂಗಾರಪೇಟೆ, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>