ಅಧ್ಯಕ್ಷೆ ಶ್ವೇತಾ ಅವರು ಸೇರಿದಂತೆ ಸ್ವಪಕ್ಷೀಯ ಸದಸ್ಯರು ಸಹ ಉಪಾಧ್ಯಕ್ಷರ ವಿರುದ್ಧ ತಿರುಗಿಬಿದ್ದಿದ್ದಾರೆ. ಕಾಂಗ್ರೆಸ್, ಬಿಜೆಪಿ ಸದಸ್ಯರು ಸಹ ಪಕ್ಷಾತೀತವಾಗಿ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಬೆಂಬಲ ಸೂಚಿಸಿದ್ದು, ಮತ್ತಷ್ಟು ಸದಸ್ಯರನ್ನು ಒಗ್ಗೂಡಿಸುವ ಪ್ರಯತ್ನ ಆರಂಭವಾಗಿದೆ. ಅವಿಶ್ವಾಸ ನಿರ್ಣಯ ಮಂಡನೆಗೆ ಸಂಬಂಧಪಟ್ಟಂತೆ ಸದಸ್ಯರು ಸಹಿ ಮಾಡಿರುವ ಪತ್ರವನ್ನು ಈಗಾಗಲೇ ನಗರಸಭೆ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಸಲ್ಲಿಸಲಾಗಿದೆ.