ಕೋಲಾರ, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಕೆಜಿಎಫ್ ತಾಲ್ಲೂಕಿನ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಈ ಸೋಂಕಿತ ವ್ಯಕ್ತಿಯ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.