<p><strong>ಮಾಲೂರು:</strong> ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮದಲ್ಲಿ ದೀಪೋತ್ಸವ ಕಾರ್ಯಕ್ರಮವು ಗುರುವಾರ ಬಹಳ ವಿಜೃಂಭಣೆಯಿಂದ ನಡೆಯಿತು.</p>.<p>ಗ್ರಾಮದಿಂದ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆ ದೇವರಾದ ಗುರುಮೂರ್ತಿ ಯಲ್ಲಮ್ಮ ದೇವಿಗೆ ದೀಪೋತ್ಸವ ಮಾಡಿದರು. </p>.<p>ಜಯಮಂಗಲ ಗ್ರಾಮದಲ್ಲಿ ನೆಲೆಸಿರುವ ಗುರುಮೂರ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಪ್ರತಿವರ್ಷ ಅಕ್ಟೋಬರ್ ತಿಂಗಳಿನಲ್ಲಿ ಈ ದೀಪೋತ್ಸವ ಕಾರ್ಯಕ್ರಮವನ್ನು ಪ್ರತಿವರ್ಷವೂ ಆಚರಿಸಲಾಗುತ್ತದೆ. ಆದರೆ, ಕಳೆದ ಕೆಲವು ವರ್ಷಗಳ ಕಾಲ ದೀಪೋತ್ಸವ ಮಾಡಿರಲಿಲ್ಲ. ಆರು ವರ್ಷಗಳ ಬಳಿಕ ಇದೀಗ ಮತ್ತೆ ದೀಪೋತ್ಸವ ಆರಂಭಿಸಲಾಗಿದೆ. </p>.<p>ತಮಟೆವಾದ್ಯ ಮುಖಾಂತರ ತಂಬಿಟ್ಟಿನ ದೀಪಗಳನ್ನು ವಂಶಸ್ಥರ ಯುವತಿಯರು, ಮಹಿಳೆಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. </p>.<p>ಈ ಸಂದರ್ಭದಲ್ಲಿ ಉಪನ್ಯಾಸಕ ಡಾ. ರಾಮಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಶೇಖರ್, ಮಾಜಿ ಸದಸ್ಯ ಎಂ ಶ್ರೀನಿವಾಸ್, ಉಪನ್ಯಾಸಕ ಮುರುಳಿ, ಶಿಕ್ಷಕರಾದ ನಾರಾಯಣಪ್ಪ, ಬಾಲಕೃಷ್ಣ, ಸಮುದಾಯದ ರಘು, ಅಮರೇಶ್ ಬಾಬು, ಶ್ರೀಧರ್, ರಾಹುಲ್, ಆಕಾಶ್, ಚೇತನ್, ಖುಷಿರಿಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮದಲ್ಲಿ ದೀಪೋತ್ಸವ ಕಾರ್ಯಕ್ರಮವು ಗುರುವಾರ ಬಹಳ ವಿಜೃಂಭಣೆಯಿಂದ ನಡೆಯಿತು.</p>.<p>ಗ್ರಾಮದಿಂದ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆ ದೇವರಾದ ಗುರುಮೂರ್ತಿ ಯಲ್ಲಮ್ಮ ದೇವಿಗೆ ದೀಪೋತ್ಸವ ಮಾಡಿದರು. </p>.<p>ಜಯಮಂಗಲ ಗ್ರಾಮದಲ್ಲಿ ನೆಲೆಸಿರುವ ಗುರುಮೂರ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಪ್ರತಿವರ್ಷ ಅಕ್ಟೋಬರ್ ತಿಂಗಳಿನಲ್ಲಿ ಈ ದೀಪೋತ್ಸವ ಕಾರ್ಯಕ್ರಮವನ್ನು ಪ್ರತಿವರ್ಷವೂ ಆಚರಿಸಲಾಗುತ್ತದೆ. ಆದರೆ, ಕಳೆದ ಕೆಲವು ವರ್ಷಗಳ ಕಾಲ ದೀಪೋತ್ಸವ ಮಾಡಿರಲಿಲ್ಲ. ಆರು ವರ್ಷಗಳ ಬಳಿಕ ಇದೀಗ ಮತ್ತೆ ದೀಪೋತ್ಸವ ಆರಂಭಿಸಲಾಗಿದೆ. </p>.<p>ತಮಟೆವಾದ್ಯ ಮುಖಾಂತರ ತಂಬಿಟ್ಟಿನ ದೀಪಗಳನ್ನು ವಂಶಸ್ಥರ ಯುವತಿಯರು, ಮಹಿಳೆಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. </p>.<p>ಈ ಸಂದರ್ಭದಲ್ಲಿ ಉಪನ್ಯಾಸಕ ಡಾ. ರಾಮಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ರಾಜಶೇಖರ್, ಮಾಜಿ ಸದಸ್ಯ ಎಂ ಶ್ರೀನಿವಾಸ್, ಉಪನ್ಯಾಸಕ ಮುರುಳಿ, ಶಿಕ್ಷಕರಾದ ನಾರಾಯಣಪ್ಪ, ಬಾಲಕೃಷ್ಣ, ಸಮುದಾಯದ ರಘು, ಅಮರೇಶ್ ಬಾಬು, ಶ್ರೀಧರ್, ರಾಹುಲ್, ಆಕಾಶ್, ಚೇತನ್, ಖುಷಿರಿಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>