ಬೆಳಿಗ್ಗೆಯಿಂದ ಅಭಿಷೇಕ, ಹೋಮ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ದೇವಾಲಯದಲ್ಲಿ ಒಂದು ಲಕ್ಷ ಮಣ್ಣಿನ ಹಣತೆ ಹಾಗೂ ವಿದ್ಯುತ್ ದೀಪಗಳಿಂದ ಕೂಡಿತ್ತು. ಸುತ್ತಮುತ್ತಲಿನ ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಾಲಯದಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸಿ ತಮ್ಮ ಹರಕೆ ಹಾಗೂ ಕೋರಿಕೆ ಸಲ್ಲಿಸಿದರು.