<p><strong>ಕೋಲಾರ:</strong> ನಗರದ ಇಟಿಸಿಎಂ ಆಸ್ಪತ್ರೆಯ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ಆರೋಗ್ಯ ವಿಭಾಗದ ಅಧಿಕಾರಿಗಳು ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.</p>.<p>ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ತ್ಯಾಜ್ಯವನ್ನು ಆಡಳಿತ ಮಂಡಳಿಯು ಸಮರ್ಪಕವಾಗಿ ವಿಲೇವಾರಿ ಮಾಡದೆ ಆಸ್ಪತ್ರೆ ಆವರಣದಲ್ಲಿ ರಾಶಿ ಹಾಕಿ ಬೆಂಕಿ ಹಚ್ಚಿ ಸುಡುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆಗೆ ದೂರು ಕೊಟ್ಟಿದ್ದರು.</p>.<p>ಈ ದೂರು ಆಧರಿಸಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಆಸ್ಪತ್ರೆ ಕೆಲಸಗಾರರು ಆವರಣದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದು ಬೆಂಕಿ ಹಚ್ಚಿ ಸುಡುತ್ತಿರುವುದನ್ನು ಪತ್ತೆ ಮಾಡಿದರು. ಅಲ್ಲದೇ, ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನ ಕರೆಸಿ ವೈದ್ಯಕೀಯ ತ್ಯಾಜ್ಯಕ್ಕೆ ಹಚ್ಚಲಾಗಿದ್ದ ಬೆಂಕಿ ನಂದಿಸಿದರು.</p>.<p>ಜಿಲ್ಲಾ ಪರಿಸರ ಅಧಿಕಾರಿ ಸಿ.ಆರ್.ಮಂಜುನಾಥ್, ‘ವೈದ್ಯಕೀಯ ತ್ಯಾಜ್ಯವನ್ನು ಏಕೆ ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರನ್ನು ಪ್ರಶ್ನಿಸಿದರು. ಇದಕ್ಕೆ ಸದಸ್ಯರು ಸಮರ್ಪಕ ಉತ್ತರ ನೀಡಲಿಲ್ಲ.</p>.<p>ಇದರಿಂದ ಅಸಮಾಧಾನಗೊಂಡ ಮಂಜುನಾಥ್, ‘ವೈದ್ಯಕೀಯ ತ್ಯಾಜ್ಯವನ್ನು ಕಂಡಕಂಡಲ್ಲಿ ವಿಲೇವಾರಿ ಮಾಡಬಾರದು. ಬದಲಿಗೆ ಮೀರಾ ಎನ್ವಿರೊಟೆಕ್ ಪ್ರೈವೇಟ್ ಲಿಮಿಟೆಡ್ ಏಜೆನ್ಸಿ ಸಿಬ್ಬಂದಿಗೆ ಕೊಡಬೇಕು. ತ್ಯಾಜ್ಯ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಎಚ್ಚರ ವಹಿಸುತ್ತೇವೆ: ‘ವೈದ್ಯಕೀಯ ತ್ಯಾಜ್ಯವನ್ನು ಖಾಸಗಿ ಏಜೆನ್ಸಿಯವರು ಹಲವು ತಿಂಗಳಿಂದ ತೆಗೆದುಕೊಂಡು ಹೋಗಿಲ್ಲ. ತ್ಯಾಜ್ಯ ಹೆಚ್ಚಿದ್ದರಿಂದ ಆಸ್ಪತ್ರೆಯ ಡಿ ಗ್ರೂಪ್ ನೌಕರರು ಆವರಣದಲ್ಲಿ ರಾಶಿ ಹಾಕಿ ಬೆಂಕಿ ಹಚ್ಚಿದ್ದಾರೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್, ‘ಇಟಿಸಿಎಂ ಸೇರಿದಂತೆ ನಗರದ ಬಹುಪಾಲು ಆಸ್ಪತ್ರೆಗಳು ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿವೆ. ಈ ಆಸ್ಪತ್ರೆಗಳು ವೈದ್ಯಕೀಯ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಹೇಳಿದರು.</p>.<p>ನಗರಸಭೆ ಆಯುಕ್ತ ಶ್ರೀಕಾಂತ್, ಆರೋಗ್ಯ ನಿರೀಕ್ಷಕಿ ದೀಪಾ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ನಗರದ ಇಟಿಸಿಎಂ ಆಸ್ಪತ್ರೆಯ ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆ ಆರೋಗ್ಯ ವಿಭಾಗದ ಅಧಿಕಾರಿಗಳು ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿ ಆಡಳಿತ ಮಂಡಳಿ ಸದಸ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.</p>.<p>ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ವೈದ್ಯಕೀಯ ತ್ಯಾಜ್ಯವನ್ನು ಆಡಳಿತ ಮಂಡಳಿಯು ಸಮರ್ಪಕವಾಗಿ ವಿಲೇವಾರಿ ಮಾಡದೆ ಆಸ್ಪತ್ರೆ ಆವರಣದಲ್ಲಿ ರಾಶಿ ಹಾಕಿ ಬೆಂಕಿ ಹಚ್ಚಿ ಸುಡುತ್ತಿತ್ತು. ಈ ಬಗ್ಗೆ ಸಾರ್ವಜನಿಕರು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ನಗರಸಭೆಗೆ ದೂರು ಕೊಟ್ಟಿದ್ದರು.</p>.<p>ಈ ದೂರು ಆಧರಿಸಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಆಸ್ಪತ್ರೆ ಕೆಲಸಗಾರರು ಆವರಣದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದು ಬೆಂಕಿ ಹಚ್ಚಿ ಸುಡುತ್ತಿರುವುದನ್ನು ಪತ್ತೆ ಮಾಡಿದರು. ಅಲ್ಲದೇ, ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನ ಕರೆಸಿ ವೈದ್ಯಕೀಯ ತ್ಯಾಜ್ಯಕ್ಕೆ ಹಚ್ಚಲಾಗಿದ್ದ ಬೆಂಕಿ ನಂದಿಸಿದರು.</p>.<p>ಜಿಲ್ಲಾ ಪರಿಸರ ಅಧಿಕಾರಿ ಸಿ.ಆರ್.ಮಂಜುನಾಥ್, ‘ವೈದ್ಯಕೀಯ ತ್ಯಾಜ್ಯವನ್ನು ಏಕೆ ಸಮರ್ಪಕವಾಗಿ ವಿಲೇವಾರಿ ಮಾಡುತ್ತಿಲ್ಲ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರನ್ನು ಪ್ರಶ್ನಿಸಿದರು. ಇದಕ್ಕೆ ಸದಸ್ಯರು ಸಮರ್ಪಕ ಉತ್ತರ ನೀಡಲಿಲ್ಲ.</p>.<p>ಇದರಿಂದ ಅಸಮಾಧಾನಗೊಂಡ ಮಂಜುನಾಥ್, ‘ವೈದ್ಯಕೀಯ ತ್ಯಾಜ್ಯವನ್ನು ಕಂಡಕಂಡಲ್ಲಿ ವಿಲೇವಾರಿ ಮಾಡಬಾರದು. ಬದಲಿಗೆ ಮೀರಾ ಎನ್ವಿರೊಟೆಕ್ ಪ್ರೈವೇಟ್ ಲಿಮಿಟೆಡ್ ಏಜೆನ್ಸಿ ಸಿಬ್ಬಂದಿಗೆ ಕೊಡಬೇಕು. ತ್ಯಾಜ್ಯ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಎಚ್ಚರ ವಹಿಸುತ್ತೇವೆ: ‘ವೈದ್ಯಕೀಯ ತ್ಯಾಜ್ಯವನ್ನು ಖಾಸಗಿ ಏಜೆನ್ಸಿಯವರು ಹಲವು ತಿಂಗಳಿಂದ ತೆಗೆದುಕೊಂಡು ಹೋಗಿಲ್ಲ. ತ್ಯಾಜ್ಯ ಹೆಚ್ಚಿದ್ದರಿಂದ ಆಸ್ಪತ್ರೆಯ ಡಿ ಗ್ರೂಪ್ ನೌಕರರು ಆವರಣದಲ್ಲಿ ರಾಶಿ ಹಾಕಿ ಬೆಂಕಿ ಹಚ್ಚಿದ್ದಾರೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆ’ ಎಂದು ಆಡಳಿತ ಮಂಡಳಿ ಸದಸ್ಯರು ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಮಂಜುನಾಥ್, ‘ಇಟಿಸಿಎಂ ಸೇರಿದಂತೆ ನಗರದ ಬಹುಪಾಲು ಆಸ್ಪತ್ರೆಗಳು ವೈದ್ಯಕೀಯ ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿವೆ. ಈ ಆಸ್ಪತ್ರೆಗಳು ವೈದ್ಯಕೀಯ ತ್ಯಾಜ್ಯ ವಿಲೇವಾರಿ ವಿಚಾರದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು. ಇಲ್ಲದಿದ್ದರೆ ಯಾವುದೇ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಹೇಳಿದರು.</p>.<p>ನಗರಸಭೆ ಆಯುಕ್ತ ಶ್ರೀಕಾಂತ್, ಆರೋಗ್ಯ ನಿರೀಕ್ಷಕಿ ದೀಪಾ ಹಾಗೂ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>