<p><strong>ಕೋಲಾರ:</strong> ರಾಜ್ಯ ಸರ್ಕಾರವು ಲಾಕ್ಡೌನ್ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರು ಮತ್ತು ರೈತರಿಗೆ ಘೋಷಿಸಿರುವ ವಿಶೇಷ ಪ್ಯಾಕೇಜ್ ಅನುದಾನವನ್ನು ಶೀಘ್ರವೇ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<p>ಅಸಂಘಟಿತ ಕಾರ್ಮಿಕರು ಹಾಗೂ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ಬೆಳೆಗಾರರನ್ನು ಸರ್ಕಾರ ಮರೆತಿದೆ. ಲಾಕ್ಡೌನ್ನಿಂದ ರೇಷ್ಮೆಗೂಡಿನ ಬೆಲೆ ಕುಸಿದಿದ್ದು, ಪ್ರತಿ ಕೆ.ಜಿ ಗೂಡಿಗೆ ₹ 40 ನೆರವು ಘೋಷಣೆ ಮಾಡಬೇಕು ಎಂದು ಕೋರಿದ್ದಾರೆ.</p>.<p>ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ರೈತರು ಬೆಳೆಗಳನ್ನು ರಸ್ತೆಗೆ ಸುರಿಯುತ್ತಿರುವುದನ್ನು ಗಮನಿಸಿ ಸರ್ಕಾರ ನೆರವಿಗೆ ಬಂದಿರುವುದರಿಂದ ರೈತರಿಗೆ ಕೊಂಚ ನೆಮ್ಮದಿ ತಂದಿದೆ. ಆದರೆ, ಪ್ರತಿ ಹೆಕ್ಟೇರ್ ಬೆಳೆಗೆ ₹ 10 ಸಾವಿರ ಘೋಷಿಸಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಹಿಂದಿನ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಘೋಷಿಸಿದ ಹಣಕಾಸು ನೆರವು ಇನ್ನೂ ರೈತರ ಖಾತೆಗೆ ಸೇರಿಲ್ಲ ಎಂದು ಹೇಳಿದ್ದಾರೆ.</p>.<p>ಕೊರೊನಾ ಸೋಂಕಿನ ನಿಯಂತ್ರಣದ ಜತೆಗೆ ರೈತರ ರಕ್ಷಣೆಗೆ ಪ್ಯಾಕೇಜ್ ಘೋಷಿಸಿರುವುದಕ್ಕೆ ಅಭ್ಯಂತರವಿಲ್ಲ. ಆದರೆ, ರೇಷ್ಮೆ ಬೆಳೆಗಾರರ ಹಿತ ಕಡೆಗಣಿಸಿರುವುದು ಖಂಡನೀಯ. ರಾಜ್ಯದಲ್ಲಿ ರೇಷ್ಮೆ ಕೃಷಿ ನಂಬಿ ಲಕ್ಷಾಂತರ ರೈತ ಕುಟುಂಬಗಳು ಬದುಕು ಸಾಗಿಸುತ್ತಿವೆ. ಗೂಡಿನ ಧಾರಣೆ ಕುಸಿದಿರುವುದರಿಂದ ಈ ಕುಟುಂಬಗಳಿಗೆ ದಿಕ್ಕು ತೋಚದಂತಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರಾಜ್ಯ ಸರ್ಕಾರವು ಲಾಕ್ಡೌನ್ ಹಿನ್ನೆಲೆಯಲ್ಲಿ ಅಸಂಘಟಿತ ಕಾರ್ಮಿಕರು ಮತ್ತು ರೈತರಿಗೆ ಘೋಷಿಸಿರುವ ವಿಶೇಷ ಪ್ಯಾಕೇಜ್ ಅನುದಾನವನ್ನು ಶೀಘ್ರವೇ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.</p>.<p>ಅಸಂಘಟಿತ ಕಾರ್ಮಿಕರು ಹಾಗೂ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿರುವ ರೇಷ್ಮೆ ಬೆಳೆಗಾರರನ್ನು ಸರ್ಕಾರ ಮರೆತಿದೆ. ಲಾಕ್ಡೌನ್ನಿಂದ ರೇಷ್ಮೆಗೂಡಿನ ಬೆಲೆ ಕುಸಿದಿದ್ದು, ಪ್ರತಿ ಕೆ.ಜಿ ಗೂಡಿಗೆ ₹ 40 ನೆರವು ಘೋಷಣೆ ಮಾಡಬೇಕು ಎಂದು ಕೋರಿದ್ದಾರೆ.</p>.<p>ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ರೈತರು ಬೆಳೆಗಳನ್ನು ರಸ್ತೆಗೆ ಸುರಿಯುತ್ತಿರುವುದನ್ನು ಗಮನಿಸಿ ಸರ್ಕಾರ ನೆರವಿಗೆ ಬಂದಿರುವುದರಿಂದ ರೈತರಿಗೆ ಕೊಂಚ ನೆಮ್ಮದಿ ತಂದಿದೆ. ಆದರೆ, ಪ್ರತಿ ಹೆಕ್ಟೇರ್ ಬೆಳೆಗೆ ₹ 10 ಸಾವಿರ ಘೋಷಿಸಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಹಿಂದಿನ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಘೋಷಿಸಿದ ಹಣಕಾಸು ನೆರವು ಇನ್ನೂ ರೈತರ ಖಾತೆಗೆ ಸೇರಿಲ್ಲ ಎಂದು ಹೇಳಿದ್ದಾರೆ.</p>.<p>ಕೊರೊನಾ ಸೋಂಕಿನ ನಿಯಂತ್ರಣದ ಜತೆಗೆ ರೈತರ ರಕ್ಷಣೆಗೆ ಪ್ಯಾಕೇಜ್ ಘೋಷಿಸಿರುವುದಕ್ಕೆ ಅಭ್ಯಂತರವಿಲ್ಲ. ಆದರೆ, ರೇಷ್ಮೆ ಬೆಳೆಗಾರರ ಹಿತ ಕಡೆಗಣಿಸಿರುವುದು ಖಂಡನೀಯ. ರಾಜ್ಯದಲ್ಲಿ ರೇಷ್ಮೆ ಕೃಷಿ ನಂಬಿ ಲಕ್ಷಾಂತರ ರೈತ ಕುಟುಂಬಗಳು ಬದುಕು ಸಾಗಿಸುತ್ತಿವೆ. ಗೂಡಿನ ಧಾರಣೆ ಕುಸಿದಿರುವುದರಿಂದ ಈ ಕುಟುಂಬಗಳಿಗೆ ದಿಕ್ಕು ತೋಚದಂತಾಗಿದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>