<p><strong>ಕೋಲಾರ</strong>: ‘ಶಾಲೆ ಆರಂಭಕ್ಕೂ ಮುನ್ನ ಪ್ರತಿ ವಿದ್ಯಾರ್ಥಿಗೂ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ತಾಲ್ಲೂಕಿನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.</p>.<p>ಇಲ್ಲಿ ಶುಕ್ರವಾರ ನಡೆದ ಇಸಿಒ, ಸಿಆರ್ಪಿ ಹಾಗೂ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ‘ಮಕ್ಕಳಿಗೆ ಶೀಘ್ರವೇ ಪಠ್ಯಪುಸ್ತಕ ತಲುಪಿಸುವ ಮೂಲಕ ಅವರ ಓದಿಗೆ ನೆರವಾಗಿ. ಶಿಕ್ಷಣ ಸಚಿವರ ಆದೇಶದಂತೆ ಪ್ರತಿ ಶಾಲೆಯಲ್ಲೂ ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಿ’ ಎಂದು ತಿಳಿಸಿದರು.</p>.<p>‘ಶಾಲೆಗಳ ಆರಂಭಕ್ಕೂ ಮುನ್ನ ಶಾಲಾ ಆವರಣ ಸ್ವಚ್ಛ ಮಾಡಿಸಿ. ಮಳೆ ಕಾರಣಕ್ಕೆ ಶಾಲಾ ಕಟ್ಟಡಗಳು ಅಥವಾ ಕೊಠಡಿಗಳು ಬೀಳುವಂತಿದ್ದರೆ ದುರಸ್ತಿ ಮಾಡಿಸಿ. ಮಕ್ಕಳ ಸುರಕ್ಷತೆ ಮುಖ್ಯ. ಕಟ್ಟಡಗಳ ಮೇಲ್ಚಾವಣಿಯಲ್ಲಿ ನೀರು ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ಆ ಬಗ್ಗೆ ಪರಿಶೀಲನೆ ಮಾಡಿ. ಮೇಲ್ಚಾವಣಿಯಿಂದ ನೀರು ಸರಾಗವಾಗಿ ಹೊರಗೆ ಹರಿದು ಹೋಗುವಂತೆ ವ್ಯವಸ್ಥೆ ಮಾಡಿ’ ಎಂದು ಹೇಳಿದರು.</p>.<p>‘ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ನಡೆಸುವ ಮೂಲಕ ಮಕ್ಕಳ ಸಂಖ್ಯೆ ಹೆಚ್ಚಿಸಿ. ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕರೊಂದಿಗೆ ಸಮಾಲೋಚನೆ ನಡೆಸಿ. ಅಗತ್ಯವಿದ್ದರೆ ಮನೆ ಮನೆ ಭೇಟಿ ಮಾಡಿ ಆಂದೋಲನದ ಮಾದರಿಯಲ್ಲಿ ದಾಖಲಾತಿ ನಡೆಸಿ’ ಎಂದು ಸಲಹೆ ನೀಡಿದರು.</p>.<p><strong>ಜಾಗೃತಿ ಮೂಡಿಸಿ:</strong> ‘ನರೇಗಾ ಅಡಿ ಕೈಗೊಂಡಿರುವ ಶಾಲೆಗಳ ಕಾಂಪೌಂಡ್ ಕಾಮಗಾರಿ ಬಾಕಿಯಿದ್ದರೆ ಶೀಘ್ರವೇ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿ. ಗ್ರಾಮೀಣ ಭಾಗದ ಮಕ್ಕಳಿಗೆ ಕೋವಿಡ್ ಕುರಿತು ಜಾಗೃತಿ ಮೂಡಿಸಿ’ ಎಂದು ಕಿವಿಮಾತು ಹೇಳಿದರು.</p>.<p>ಬಿಇಒ ಕಚೇರಿ ವ್ಯವಸ್ಥಾಪಕ ಮುನಿಸ್ವಾಮಿಗೌಡ, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ಆರ್.ಶ್ರೀನಿವಾಸನ್, ರಾಘವೇಂದ್ರ ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಶಾಲೆ ಆರಂಭಕ್ಕೂ ಮುನ್ನ ಪ್ರತಿ ವಿದ್ಯಾರ್ಥಿಗೂ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ ಮಾಡಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ತಾಲ್ಲೂಕಿನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದರು.</p>.<p>ಇಲ್ಲಿ ಶುಕ್ರವಾರ ನಡೆದ ಇಸಿಒ, ಸಿಆರ್ಪಿ ಹಾಗೂ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿ, ‘ಮಕ್ಕಳಿಗೆ ಶೀಘ್ರವೇ ಪಠ್ಯಪುಸ್ತಕ ತಲುಪಿಸುವ ಮೂಲಕ ಅವರ ಓದಿಗೆ ನೆರವಾಗಿ. ಶಿಕ್ಷಣ ಸಚಿವರ ಆದೇಶದಂತೆ ಪ್ರತಿ ಶಾಲೆಯಲ್ಲೂ ವಿದ್ಯಾಗಮ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಿ’ ಎಂದು ತಿಳಿಸಿದರು.</p>.<p>‘ಶಾಲೆಗಳ ಆರಂಭಕ್ಕೂ ಮುನ್ನ ಶಾಲಾ ಆವರಣ ಸ್ವಚ್ಛ ಮಾಡಿಸಿ. ಮಳೆ ಕಾರಣಕ್ಕೆ ಶಾಲಾ ಕಟ್ಟಡಗಳು ಅಥವಾ ಕೊಠಡಿಗಳು ಬೀಳುವಂತಿದ್ದರೆ ದುರಸ್ತಿ ಮಾಡಿಸಿ. ಮಕ್ಕಳ ಸುರಕ್ಷತೆ ಮುಖ್ಯ. ಕಟ್ಟಡಗಳ ಮೇಲ್ಚಾವಣಿಯಲ್ಲಿ ನೀರು ಸಮಸ್ಯೆಯಾಗುವ ಸಾಧ್ಯತೆ ಇರುವುದರಿಂದ ಆ ಬಗ್ಗೆ ಪರಿಶೀಲನೆ ಮಾಡಿ. ಮೇಲ್ಚಾವಣಿಯಿಂದ ನೀರು ಸರಾಗವಾಗಿ ಹೊರಗೆ ಹರಿದು ಹೋಗುವಂತೆ ವ್ಯವಸ್ಥೆ ಮಾಡಿ’ ಎಂದು ಹೇಳಿದರು.</p>.<p>‘ಶಾಲೆಯಲ್ಲಿ ದಾಖಲಾತಿ ಪ್ರಕ್ರಿಯೆ ನಡೆಸುವ ಮೂಲಕ ಮಕ್ಕಳ ಸಂಖ್ಯೆ ಹೆಚ್ಚಿಸಿ. ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕರೊಂದಿಗೆ ಸಮಾಲೋಚನೆ ನಡೆಸಿ. ಅಗತ್ಯವಿದ್ದರೆ ಮನೆ ಮನೆ ಭೇಟಿ ಮಾಡಿ ಆಂದೋಲನದ ಮಾದರಿಯಲ್ಲಿ ದಾಖಲಾತಿ ನಡೆಸಿ’ ಎಂದು ಸಲಹೆ ನೀಡಿದರು.</p>.<p><strong>ಜಾಗೃತಿ ಮೂಡಿಸಿ:</strong> ‘ನರೇಗಾ ಅಡಿ ಕೈಗೊಂಡಿರುವ ಶಾಲೆಗಳ ಕಾಂಪೌಂಡ್ ಕಾಮಗಾರಿ ಬಾಕಿಯಿದ್ದರೆ ಶೀಘ್ರವೇ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿ. ಗ್ರಾಮೀಣ ಭಾಗದ ಮಕ್ಕಳಿಗೆ ಕೋವಿಡ್ ಕುರಿತು ಜಾಗೃತಿ ಮೂಡಿಸಿ’ ಎಂದು ಕಿವಿಮಾತು ಹೇಳಿದರು.</p>.<p>ಬಿಇಒ ಕಚೇರಿ ವ್ಯವಸ್ಥಾಪಕ ಮುನಿಸ್ವಾಮಿಗೌಡ, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ಆರ್.ಶ್ರೀನಿವಾಸನ್, ರಾಘವೇಂದ್ರ ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>