<p><strong>ಕೋಲಾರ</strong>: ‘ಅಂಚೆ ಇಲಾಖೆ ನೌಕರರು ಸರ್ಕಾರದ ಸೌಲಭ್ಯಗಳನ್ನು ಸಕಾಲಕ್ಕೆ ಸಾರ್ವಜನಿಕರಿಗೆ ತಲುಪಿಸಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಸೂಚಿಸಿದರು.</p>.<p>ಇಲ್ಲಿ ಶುಕ್ರವಾರ ನಡೆದ ಅಂಚೆ ನೌಕರರ ಸಭೆಯಲ್ಲಿ ಮಾತನಾಡಿ, ‘ಕೆಳ ವರ್ಗದ ಜನರ ಅನುಕೂಲಕ್ಕಾಗಿ ಸರ್ಕಾರಗಳು ಸಾಕಷ್ಟು ಯೋಜನೆ ಜಾರಿಗೊಳಿಸಿವೆ. ಅಂಚೆ ಇಲಾಖೆ ಸಿಬ್ಬಂದಿಯು ಜನರಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವಿದೆ ಎಂಬ ಕಾರಣಕ್ಕೆ ಕೆಲ ರಾಜಕಾರಣಿಗಳ ಮಾತು ಕೇಳಿ ಬಡವರಿಗೆ ಕಾರ್ಡ್ ತಲುಪಿಸದೇ ಇರುವುದು ಸರಿಯಲ್ಲ. ಪ್ರಾಮಾಣಿಕವಾಗಿ ಶೀಘ್ರವೇ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ತಲುಪಿಸಿ’ ಎಂದು ತಿಳಿಸಿದರು.</p>.<p>‘ಸರ್ಕಾರದ ಸೌಲಭ್ಯಗಳ ವಿತರಣೆಯಲ್ಲಿ ವಿಳಂಬ ಮಾಡಬಾರದು. ಮನಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳದೆ ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ನಂಬಿಕೆ ಉಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p><strong>ತಾರತಮ್ಯ</strong>: ‘ದೇಶದಲ್ಲಿ 2.68 ಲಕ್ಷ ಅಂಚೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂಚೆ ನೌಕರರು ಮತ್ತು ಗ್ರಾಮೀಣ ಅಂಚೆ ನೌಕರರೆಂದು ತಾರತಮ್ಯ ಮಾಡಲಾಗುತ್ತಿದೆ. ದುಡಿಮೆಗೆ ತಕ್ಕ ಸಂಬಳ ಸಿಗುತ್ತಿಲ್ಲ’ ಎಂದು ಅಂಚೆ ಇಲಾಖೆ ನೌಕರ ಕೃಷ್ಣಪ್ಪ ಅಳಲು ತೋಡಿಕೊಂಡರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ‘ಅಂಚೆ ನೌಕರರ ಸಮಸ್ಯೆ ಸಂಬಂಧ ಅಧಿವೇಶನದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ. ಗ್ರಾಮಗಳಲ್ಲಿ ಅಂಚೆ ಕಚೇರಿಯಿಲ್ಲದ ಕಡೆ ಸಾಧ್ಯವಾದಷ್ಟು ಬೇಗ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಸಂಸದರ ಅನುದಾನದಲ್ಲಿ ನೌಕರರಿಗೆ ಸಮವಸ್ತ್ರ ಕೊಡಿಸುತ್ತೇವೆ. ಸರ್ಕಾರ ನೌಕರರ ಜತೆಗಿದೆ’ ಎಂದು ಹೇಳಿದರು.</p>.<p>ಅಂಚೆ ಇಲಾಖೆ ಸೂಪರಿಂಟೆಂಡೆಂಟ್ ಗಂಗಪ್ಪ, ನೌಕರರಾದ ಮಂಜುನಾಥ್, ಭಾಗ್ಯಲಕ್ಷ್ಮೀ, ನಳಿನಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಅಂಚೆ ಇಲಾಖೆ ನೌಕರರು ಸರ್ಕಾರದ ಸೌಲಭ್ಯಗಳನ್ನು ಸಕಾಲಕ್ಕೆ ಸಾರ್ವಜನಿಕರಿಗೆ ತಲುಪಿಸಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಸೂಚಿಸಿದರು.</p>.<p>ಇಲ್ಲಿ ಶುಕ್ರವಾರ ನಡೆದ ಅಂಚೆ ನೌಕರರ ಸಭೆಯಲ್ಲಿ ಮಾತನಾಡಿ, ‘ಕೆಳ ವರ್ಗದ ಜನರ ಅನುಕೂಲಕ್ಕಾಗಿ ಸರ್ಕಾರಗಳು ಸಾಕಷ್ಟು ಯೋಜನೆ ಜಾರಿಗೊಳಿಸಿವೆ. ಅಂಚೆ ಇಲಾಖೆ ಸಿಬ್ಬಂದಿಯು ಜನರಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವಿದೆ ಎಂಬ ಕಾರಣಕ್ಕೆ ಕೆಲ ರಾಜಕಾರಣಿಗಳ ಮಾತು ಕೇಳಿ ಬಡವರಿಗೆ ಕಾರ್ಡ್ ತಲುಪಿಸದೇ ಇರುವುದು ಸರಿಯಲ್ಲ. ಪ್ರಾಮಾಣಿಕವಾಗಿ ಶೀಘ್ರವೇ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ತಲುಪಿಸಿ’ ಎಂದು ತಿಳಿಸಿದರು.</p>.<p>‘ಸರ್ಕಾರದ ಸೌಲಭ್ಯಗಳ ವಿತರಣೆಯಲ್ಲಿ ವಿಳಂಬ ಮಾಡಬಾರದು. ಮನಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳದೆ ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ನಂಬಿಕೆ ಉಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p><strong>ತಾರತಮ್ಯ</strong>: ‘ದೇಶದಲ್ಲಿ 2.68 ಲಕ್ಷ ಅಂಚೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂಚೆ ನೌಕರರು ಮತ್ತು ಗ್ರಾಮೀಣ ಅಂಚೆ ನೌಕರರೆಂದು ತಾರತಮ್ಯ ಮಾಡಲಾಗುತ್ತಿದೆ. ದುಡಿಮೆಗೆ ತಕ್ಕ ಸಂಬಳ ಸಿಗುತ್ತಿಲ್ಲ’ ಎಂದು ಅಂಚೆ ಇಲಾಖೆ ನೌಕರ ಕೃಷ್ಣಪ್ಪ ಅಳಲು ತೋಡಿಕೊಂಡರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ‘ಅಂಚೆ ನೌಕರರ ಸಮಸ್ಯೆ ಸಂಬಂಧ ಅಧಿವೇಶನದಲ್ಲಿ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇವೆ. ಗ್ರಾಮಗಳಲ್ಲಿ ಅಂಚೆ ಕಚೇರಿಯಿಲ್ಲದ ಕಡೆ ಸಾಧ್ಯವಾದಷ್ಟು ಬೇಗ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ. ಸಂಸದರ ಅನುದಾನದಲ್ಲಿ ನೌಕರರಿಗೆ ಸಮವಸ್ತ್ರ ಕೊಡಿಸುತ್ತೇವೆ. ಸರ್ಕಾರ ನೌಕರರ ಜತೆಗಿದೆ’ ಎಂದು ಹೇಳಿದರು.</p>.<p>ಅಂಚೆ ಇಲಾಖೆ ಸೂಪರಿಂಟೆಂಡೆಂಟ್ ಗಂಗಪ್ಪ, ನೌಕರರಾದ ಮಂಜುನಾಥ್, ಭಾಗ್ಯಲಕ್ಷ್ಮೀ, ನಳಿನಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>