<p><strong>ಬೇತಮಂಗಲ:</strong> ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ ವೈ. ಸಂಪಂಗಿ ಒತ್ತಾಯಿಸಿದ್ದಾರೆ. </p>.<p>ಕಾಲ್ತುಳಿತದಲ್ಲಿ ಮೃತಪಟ್ಟ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಮಾಕನಹಳ್ಳಿಯ ನಿವಾಸಿ ಸಹನಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಅವರು, ಬಳಿಕ ಮಾತನಾಡಿದರು. </p>.<p>ರಾಜ್ಯ ಕಾಂಗ್ರೆಸ್ ಸರ್ಕಾರವು ಕ್ರಿಕೆಟ್ ಅಭಿಮಾನಿಗಳಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದರಿಂದ 11 ಮಂದಿ ಮೃತಪಟ್ಟಿದ್ದಾರೆ ಎಂದು ದೂರಿದರು. </p>.<p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದರು. </p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣ ಶರ್ಮ, ಬಾಲಕೃಷ್ಣಪ್ಪ, ಬಡಮಾಕನಹಳ್ಳಿ ವೆಂಕಟೇಶ್, ಕೃಷ್ಣಮೂರ್ತಿ, ಪುರುಷೋತ್ತಮ್, ನಾರಾಯಣಸ್ವಾಮಿ, ವೆಂಕಟೇಶ್, ಮುನಿಯಪ್ಪ, ಚಲಪತಿ ಶ್ರೀರಾಮಪ್ಪ, ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಬಿಜೆಪಿ ಮುಖಂಡ ವೈ. ಸಂಪಂಗಿ ಒತ್ತಾಯಿಸಿದ್ದಾರೆ. </p>.<p>ಕಾಲ್ತುಳಿತದಲ್ಲಿ ಮೃತಪಟ್ಟ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಮಾಕನಹಳ್ಳಿಯ ನಿವಾಸಿ ಸಹನಾ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಅವರು, ಬಳಿಕ ಮಾತನಾಡಿದರು. </p>.<p>ರಾಜ್ಯ ಕಾಂಗ್ರೆಸ್ ಸರ್ಕಾರವು ಕ್ರಿಕೆಟ್ ಅಭಿಮಾನಿಗಳಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದರಿಂದ 11 ಮಂದಿ ಮೃತಪಟ್ಟಿದ್ದಾರೆ ಎಂದು ದೂರಿದರು. </p>.<p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದರು. </p>.<p>ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ, ಗ್ರಾಮಾಂತರ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣ ಶರ್ಮ, ಬಾಲಕೃಷ್ಣಪ್ಪ, ಬಡಮಾಕನಹಳ್ಳಿ ವೆಂಕಟೇಶ್, ಕೃಷ್ಣಮೂರ್ತಿ, ಪುರುಷೋತ್ತಮ್, ನಾರಾಯಣಸ್ವಾಮಿ, ವೆಂಕಟೇಶ್, ಮುನಿಯಪ್ಪ, ಚಲಪತಿ ಶ್ರೀರಾಮಪ್ಪ, ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>