ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಗಸ್ತಿಯವರ ಪ್ರಾಮಾಣಿಕತೆ ಮತ್ತು ಪಕ್ಷ ನಿಷ್ಠೆ ಗುರುತಿಸಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಾಗಿತ್ತು. ಇದರಿಂದ ಸಮುದಾಯ ಬಹಳ ಸಂತಸಪಟ್ಟು ಬಿಜೆಪಿಗೆ ಕೃತಜ್ಞತೆ ಸಲ್ಲಿಸಿತ್ತು. ಸಮುದಾಯವು ಗಸ್ತಿಯವರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ, ದುರಾದೃಷ್ಟವಶಾತ್ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟರು’ ಎಂದರು.