ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಲಾರ | 686 ಮಂದಿಗೆ ಪರೀಕ್ಷೆ; 57 ಡೆಂಗಿ ಪ್ರಕರಣ

ಜಿಲ್ಲೆಯಲ್ಲಿ ತಕ್ಕಮಟ್ಟಿಗೆ ನಿಯಂತ್ರಣ; ಇಬ್ಬರಿಗೆ ಮಲೇರಿಯಾ, 22 ಮಂದಿಗೆ ಚಿಕುನ್‌ ಗುನ್ಯಾ
Published : 4 ಜುಲೈ 2024, 7:05 IST
Last Updated : 4 ಜುಲೈ 2024, 7:05 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಕೋಲಾರ ನಗರದಲ್ಲಿ ಅಧಿಕ ಡೆಂಗಿ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆ ಆವರಣದಲ್ಲಿ ಪ್ರಯೋಗಾಲಯ 15 ದಿನಗಳಿಗೊಮ್ಮೆ ಲಾರ್ವಾ ಸರ್ವೆ
ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣದಲ್ಲಿದೆ. ಅಲ್ಲೊಂದು ಇಲ್ಲೊಂದು ಪತ್ತೆಯಾಗುತ್ತಿದೆ. ಉಳಿದ ಜಿಲ್ಲೆಗಳ ರೀತಿ ಒಂದೇಕಡೆ ಹೆಚ್ಚು ಪ್ರಕರಣ ಇಲ್ಲ. ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ
ಡಾ.ರವಿಕುಮಾರ್ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ
ಜಿಲ್ಲೆಯಲ್ಲಿ ಡೆಂಗಿ ಪತ್ತೆ ಪ್ರಕರಣ
ತಾಲ್ಲೂಕು; ಪ್ರಕರಣ ಶ್ರೀನಿವಾಸಪುರ; 05 ಮುಳಬಾಗಿಲು; 07 ಬಂಗಾರಪೇಟೆ; 11 ಕೆಜಿಎಫ್‌; 07 ಕೋಲಾರ; 19 ಮಾಲೂರು; 08 ಒಟ್ಟು; 57
ಡೆಂಗಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೂಚಿಸಿರುವ ಕ್ರಮಗಳು
* ಮನೆಗಳಲ್ಲಿ ವಾರಗಟ್ಟಲೇ ನೀರು ಶೇಖರಣೆ ಮಾಡಿಡಬಾರದು * ಚರಂಡಿಗಳು ಹಳೆಯ ಟೈರ್‌ಗಳು ತೆಂಗಿನ ಚಿಪ್‌ಗಳಲ್ಲಿ ತೊಟ್ಟಿಗಳಲ್ಲಿ ನೀರು ಬಹಳ ಕಾಲದವರೆಗೆ ಸಂಗ್ರಹಗೊಳ್ಳದಂತೆ ನೋಡಿಕೊಳ್ಳಬೇಕು * ದಿನ ಬಳಕೆಯ ತೊಟ್ಟಿ ಮತ್ತು ಡ್ರಂಗಳನ್ನು ವಾರಕ್ಕೊಮ್ಮೆ ತೊಳೆದು ಒಣಗಿಸಿ ಡ್ರೈ ಡೇ ಆಚರಿಸಬೇಕು * ನೀರಿನ ಟ್ಯಾಂಕ್ ಹಾಗೂ ಓವರ್ ಹೆಡ್ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು * ಮನೆಯ ಸುತ್ತಮುತ್ತ ಘನ ತ್ಯಾಜ್ಯ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು * ವಾತಾವರಣದ ಏರಿಳಿತ ಸೊಳ್ಳೆಗಳ ಉತ್ಪತ್ತಿ ಪ್ರಮಾಣ ಹೆಚ್ಚಿಸಿದ್ದು ಹಗಲು ಹೊತ್ತಿನಲ್ಲಿ ಸೊಳ್ಳೆಗಳು ಕಚ್ಚದ ಹಾಗೆ ನೋಡಿಕೊಳ್ಳಬೇಕು * ನಗರಸಭೆಯಿಂದ ಫಾಗಿಂಗ್‌ ಮಾಡಬೇಕು * ಕುದಿಸಿ ಆರಿಸಿದ ನೀರು ಕುಡಿಯಬೇಕು * 2–3 ದಿನಗಳ ನಂತರವೂ ಜ್ವರ ಬಿಡದಿದ್ದರೆ ತಪ್ಪದೇ ಪರೀಕ್ಷೆ ಮಾಡಿಸಿಕೊಳ್ಳಬೇಕು
ಸೊಳ್ಳೆ ಉತ್ಪತ್ತಿ ತಾಣ ನಾಶಮಾಡುವ ದಿನ
ರಾಜ್ಯದಾದ್ಯಂತ ಡೆಂಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ರಾಜ್ಯ ಸರ್ಕಾರ ಪ್ರತಿ ಶುಕ್ರವಾರ ನಗರ ಗ್ರಾಮೀಣ ಪ್ರದೇಶದಲ್ಲಿ ಈಡೀಸ್ ಸೊಳ್ಳೆ ಉತ್ಪತ್ತಿಯಾಗುವ ತಾಣಗಳನ್ನು ನಾಶಪಡಿಸುವ ದಿನವನ್ನಾಗಿ ಆಚರಿಸಲು ಸೂಚನೆ ನೀಡಿದೆ. ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದು ಶುಕ್ರವಾರ ಮನೆ ಶಾಲೆ ಕಾಲೇಜು ಅಂಗನವಾಡಿ ಅಂಗಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹಗಲಿನಲ್ಲಿ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದೆ.
ಹೆಚ್ಚಿದ ಸೊಳ್ಳೆ ಕಾಟ; ನಗರಸಭೆ ವಿರುದ್ಧ ಆಕ್ರೋಶ
ಕೋಲಾರ ನಗರದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದ್ದು ಸೊಳ್ಳೆಗಳ ಕಾಟ ವಿಪರೀತಗೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ನಗರಸಭೆ ಅಧಿಕಾರಿಗಳು ಸಿಬ್ಬಂದಿ ಗಾಢ ನಿದ್ರೆಯಲ್ಲಿದ್ದಾರೆ ಎಂದು ನಿವಾಸಿಗಳು ಆಕ್ರೋಶಪಡಿಸುತ್ತಿದ್ದಾರೆ. ‘ತ್ಯಾಜ್ಯ ವಿಲೇವಾರಿ ಕೂಡ ಸರಿಯಾಗಿ ನಡೆಯುತ್ತಿಲ್ಲ. ಬಡಾವಣೆ ರಸ್ತೆಗಳಲ್ಲಿ ರಾಶಿ ರಾಸಿ ಕಸ ಬಿದ್ದಿರುತ್ತದೆ. ಖಾಲಿ ನಿವೇಶನ ಸ್ವಚ್ಛಗೊಳಿಸುತ್ತಿಲ್ಲ. ಚರಂಡಿಗಳು ಕಟ್ಟಿಕೊಂಡು ರಸ್ತೆಗೆ ಹರಿಯುತ್ತಿದ್ದರೂ ಕೇಳುವವರಿಲ್ಲ’ ಎಂದೂ ದೂರುತ್ತಿದ್ದಾರೆ. ಸೊಳ್ಳೆ ಕಾಟ ಹೆಚ್ಚುತ್ತಿದ್ದು ಜಿಲ್ಲೆಯಲ್ಲಿ ಹೆಚ್ಚು ಡೆಂಗಿ ಪ್ರಕರಣ ಇರುವುದು ಕೋಲಾರದಲ್ಲೇ. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕೂಡ ಮಾಡುತ್ತಿಲ್ಲ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT