<p><strong>ಕೋಲಾರ: </strong>ಠೇವಣಿ ಸಂಗ್ರಹಣೆಯ ಸಾಧಕ- ಬಾಧಕ ಕುರಿತು ಚರ್ಚಿಸಲು ನಗರದ ಜಿಲ್ಲಾ ಸಹಕಾರಿ ಒಕ್ಕೂಟದ ಸಭಾಂಗಣದಲ್ಲಿ ಭಾನುವಾರ (ನ.8) ಬೆಳಿಗ್ಗೆ 10.30ಕ್ಕೆ ಬ್ಯಾಂಕ್ನ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಭೆ ಕರೆಯಲಾಗಿದೆ ಎಂದು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡರ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ. ಬ್ಯಾಂಕ್ನ 2020–21ನೇ ಸಾಲಿನ ಹಣಕಾಸು ವರ್ಷಕ್ಕೆ ರೂಪಿಸಿರುವ ಕ್ರಿಯಾಯೋಜನೆ ಪ್ರಕಾರ ₹ 405 ಕೋಟಿ ಠೇವಣಿ ಸಂಗ್ರಹ ಗುರಿ ಹೊಂದಲಾಗಿದೆ. ಈ ಗುರಿ ತಲುಪಲು ಆರ್ಥಿಕ ವರ್ಷಾತ್ಯಂಕ್ಕೆ 146 ದಿನ ಮಾತ್ರ ಬಾಕಿಯಿವೆ ಎಂದು ಹೇಳಿದ್ದಾರೆ.</p>.<p>ನಿಗದಿತ ಗಡುವಿನೊಳಗೆ ಠೇವಣಿ ಸಂಗ್ರಹ ಗುರಿ ಸಾಧನೆಗಾಗಿ ಇರುವ ಸಾಧಕ -ಬಾಧಕಗಳ ಕುರಿತು ಸಮಗ್ರವಾಗಿ ಚರ್ಚಿಸಲು ಮತ್ತು ಸುಸ್ತಿಯಾಗಿರುವ ಕೃಷಿ ಸಾಲಗಳ ವಸೂಲಾತಿ ವೇಳಾಪಟ್ಟಿ, ವಸೂಲಿಗೆ ಸಿಬ್ಬಂದಿಯ ತಂಡ ರಚಿಸಲು ಈ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಅವಿಭಜಿತ ಕೋಲಾರ ಜಿಲ್ಲೆಯ ಎಲ್ಲಾ ಶಾಖೆಗಳ ಸಿಬ್ಬಂದಿ, ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಿರಬೇಕು. ಜತೆಗೆ ಆಯಾ ಶಾಖೆ ವ್ಯಾಪ್ತಿಯ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಠೇವಣಿ ಸಂಗ್ರಹಣೆಯ ಸಾಧಕ- ಬಾಧಕ ಕುರಿತು ಚರ್ಚಿಸಲು ನಗರದ ಜಿಲ್ಲಾ ಸಹಕಾರಿ ಒಕ್ಕೂಟದ ಸಭಾಂಗಣದಲ್ಲಿ ಭಾನುವಾರ (ನ.8) ಬೆಳಿಗ್ಗೆ 10.30ಕ್ಕೆ ಬ್ಯಾಂಕ್ನ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಭೆ ಕರೆಯಲಾಗಿದೆ ಎಂದು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ರವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡರ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ. ಬ್ಯಾಂಕ್ನ 2020–21ನೇ ಸಾಲಿನ ಹಣಕಾಸು ವರ್ಷಕ್ಕೆ ರೂಪಿಸಿರುವ ಕ್ರಿಯಾಯೋಜನೆ ಪ್ರಕಾರ ₹ 405 ಕೋಟಿ ಠೇವಣಿ ಸಂಗ್ರಹ ಗುರಿ ಹೊಂದಲಾಗಿದೆ. ಈ ಗುರಿ ತಲುಪಲು ಆರ್ಥಿಕ ವರ್ಷಾತ್ಯಂಕ್ಕೆ 146 ದಿನ ಮಾತ್ರ ಬಾಕಿಯಿವೆ ಎಂದು ಹೇಳಿದ್ದಾರೆ.</p>.<p>ನಿಗದಿತ ಗಡುವಿನೊಳಗೆ ಠೇವಣಿ ಸಂಗ್ರಹ ಗುರಿ ಸಾಧನೆಗಾಗಿ ಇರುವ ಸಾಧಕ -ಬಾಧಕಗಳ ಕುರಿತು ಸಮಗ್ರವಾಗಿ ಚರ್ಚಿಸಲು ಮತ್ತು ಸುಸ್ತಿಯಾಗಿರುವ ಕೃಷಿ ಸಾಲಗಳ ವಸೂಲಾತಿ ವೇಳಾಪಟ್ಟಿ, ವಸೂಲಿಗೆ ಸಿಬ್ಬಂದಿಯ ತಂಡ ರಚಿಸಲು ಈ ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಅವಿಭಜಿತ ಕೋಲಾರ ಜಿಲ್ಲೆಯ ಎಲ್ಲಾ ಶಾಖೆಗಳ ಸಿಬ್ಬಂದಿ, ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಿರಬೇಕು. ಜತೆಗೆ ಆಯಾ ಶಾಖೆ ವ್ಯಾಪ್ತಿಯ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>