<p><strong>ಬಂಗಾರಪೇಟೆ</strong>: ಸಮೃದ್ಧವಾಗಿ ಮರಗಿಡಗಳನ್ನು ಬೆಳೆಸಿದಾಗ ಮಾತ್ರ ಸಮೃದ್ಧವಾಗಿ ಮಳೆಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಹೆಚ್ಚು ಸಸಿ ನೆಟ್ಟು ಪೋಷಿಸಬೇಕು. ಮರಗಳನ್ನು ಉಳಿಸಿಕೊಳ್ಳಬೇಕು ಎಂದು ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷ್ಮಿ ಹೇಳಿದರು.</p>.<p>ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ತಾಲ್ಲೂಕಿನ ಭುವನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಹಸಿರೇ ಉಸಿರು ಅಂತ ಹೇಳಬಹುದು. ಆದರೆ ಇಂದು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯನ್ನೇ ನಾಶ ಮಾಡುತ್ತಿದ್ದಾನೆ. ಇದರಿಂದ ಮುಂದಿನ ದಿನದಲ್ಲಿ ದುಷ್ಪಾರಿಮ ಎದುರಿಸಬೇಕಾಗುತ್ತದೆ. ಪರಿಸರವನ್ನು ರಕ್ಷಣೆ ಎಲ್ಲರ ಜವಾಬ್ದಾರಿ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸಬೇಕು’ ಎಂದರು.</p>.<p>ಉತ್ತಮ ಪರಿಸರದಿಂದ ಮಾತ್ರ ಜೀವ ಸಂಕುಲ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಪ್ರಕೃತಿ ಸಂಪತ್ತನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಜತೆಗೆ ಅದರ ರಕ್ಷಣೆಯೂ ನಮ್ಮದಾಗಿದೆ. ಈ ಬಗ್ಗೆ ಜನರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.</p>.<p>ನ್ಯಾಯಾಧೀಶ ಚಂದ್ರಶೇಖರ್ ಅಲಬೂರ್, ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು. ಹಾಗೆಯೇ ಮನಸೋ ಇಚ್ಚೆ ಮರಗಿಡಗಳನ್ನು ಕಡಿದು ಹಾಕಿ, ಕೇವಲ ಪರಿಸರ ದಿನದಂದು ಮಾತ್ರ ಗಿಡ ನೆಟ್ಟು ಮರೆಯವುದು ಸರಿಯಲ್ಲ ಎಂದರು.</p>.<p>ಪರಿಸರದ ನಾಶದಿಂದ ಅಸಮರ್ಪಕ ಮಳೆ, ಜಾಗತಿಕ ತಾಪಮಾನ ಏರಿಕೆ, ಆರೋಗ್ಯದಲ್ಲಿ ಏರುಪೇರು ಮುಂತಾದ ಸಮಸ್ಯೆಗಳು ಕಾಡುತ್ತಿವೆ. ಈ ನಿಟ್ಟಿನಲ್ಲಿ ಸಮುದಾಯ ಎಚ್ಚೆತ್ತುಕೊಳ್ಳಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ತಿಳಿಸಿದರು.</p>.<p>ನ್ಯಾಯಾಧೀಶ ಸುಕೀತಾ ಎಸ್. ಹದ್ದಿ, ವಕೀಲರ ಸಂಘ ಅಧ್ಯಕ್ಷ ಎಸ್. ನಾರಾಯಣಪ್ಪ, ಉಪವಲಯ ಅರಣ್ಯಾಧಿಕಾರಿ ನಾಗೇಶ್, ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಜಯಣ್ಣ, ವಕೀಲ ಅಮರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಸಮೃದ್ಧವಾಗಿ ಮರಗಿಡಗಳನ್ನು ಬೆಳೆಸಿದಾಗ ಮಾತ್ರ ಸಮೃದ್ಧವಾಗಿ ಮಳೆಯಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಹೆಚ್ಚು ಸಸಿ ನೆಟ್ಟು ಪೋಷಿಸಬೇಕು. ಮರಗಳನ್ನು ಉಳಿಸಿಕೊಳ್ಳಬೇಕು ಎಂದು ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷ್ಮಿ ಹೇಳಿದರು.</p>.<p>ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ತಾಲ್ಲೂಕಿನ ಭುವನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಹಸಿರೇ ಉಸಿರು ಅಂತ ಹೇಳಬಹುದು. ಆದರೆ ಇಂದು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯನ್ನೇ ನಾಶ ಮಾಡುತ್ತಿದ್ದಾನೆ. ಇದರಿಂದ ಮುಂದಿನ ದಿನದಲ್ಲಿ ದುಷ್ಪಾರಿಮ ಎದುರಿಸಬೇಕಾಗುತ್ತದೆ. ಪರಿಸರವನ್ನು ರಕ್ಷಣೆ ಎಲ್ಲರ ಜವಾಬ್ದಾರಿ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸಬೇಕು’ ಎಂದರು.</p>.<p>ಉತ್ತಮ ಪರಿಸರದಿಂದ ಮಾತ್ರ ಜೀವ ಸಂಕುಲ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಪ್ರಕೃತಿ ಸಂಪತ್ತನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಜತೆಗೆ ಅದರ ರಕ್ಷಣೆಯೂ ನಮ್ಮದಾಗಿದೆ. ಈ ಬಗ್ಗೆ ಜನರಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.</p>.<p>ನ್ಯಾಯಾಧೀಶ ಚಂದ್ರಶೇಖರ್ ಅಲಬೂರ್, ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು. ಹಾಗೆಯೇ ಮನಸೋ ಇಚ್ಚೆ ಮರಗಿಡಗಳನ್ನು ಕಡಿದು ಹಾಕಿ, ಕೇವಲ ಪರಿಸರ ದಿನದಂದು ಮಾತ್ರ ಗಿಡ ನೆಟ್ಟು ಮರೆಯವುದು ಸರಿಯಲ್ಲ ಎಂದರು.</p>.<p>ಪರಿಸರದ ನಾಶದಿಂದ ಅಸಮರ್ಪಕ ಮಳೆ, ಜಾಗತಿಕ ತಾಪಮಾನ ಏರಿಕೆ, ಆರೋಗ್ಯದಲ್ಲಿ ಏರುಪೇರು ಮುಂತಾದ ಸಮಸ್ಯೆಗಳು ಕಾಡುತ್ತಿವೆ. ಈ ನಿಟ್ಟಿನಲ್ಲಿ ಸಮುದಾಯ ಎಚ್ಚೆತ್ತುಕೊಳ್ಳಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ ಎಂದು ತಿಳಿಸಿದರು.</p>.<p>ನ್ಯಾಯಾಧೀಶ ಸುಕೀತಾ ಎಸ್. ಹದ್ದಿ, ವಕೀಲರ ಸಂಘ ಅಧ್ಯಕ್ಷ ಎಸ್. ನಾರಾಯಣಪ್ಪ, ಉಪವಲಯ ಅರಣ್ಯಾಧಿಕಾರಿ ನಾಗೇಶ್, ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಜಯಣ್ಣ, ವಕೀಲ ಅಮರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>