<p><strong>ಬಂಗಾರಪೇಟೆ</strong>: ಹಿಂದುಳಿದ ಗ್ರಾಮ ಪಂಚಾಯಿತಿ ಎಂಬ ಹಣೆಪಟ್ಟಿಗೆ ದೋಣಿಮಡಗು ಸೇರಿದೆ. ಇಲ್ಲಿನ ಸಂಪರ್ಕ ರಸ್ತೆಗಳು ಹದಗೆಟ್ಟಿವೆ. ಮೂಲ ಸೌಕರ್ಯಗಳಿಂದ ವಂಚಿತ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.</p>.<p><strong>ಹದಗೆಟ್ಟ ಗ್ರಾಮೀಣ ರಸ್ತೆಗಳು</strong>: ತಾಲ್ಲೂಕಿನ ಗಡಿ ಭಾಗದ ಮಲ್ಲೇಶ್ ಪಾಳ್ಯ, ಸಾಕರಸನಹಳ್ಳಿ, ಕದರಿನತ್ತ, ಕುಂದರಸನಹಳ್ಳಿ, ಪೋಲೇನಹಳ್ಳಿ, ತಳೂರು, ಬತ್ತಲಹಳ್ಳಿ ಆನೆಗಳ ಕಾಟ ಒಂದು ಕಡೆಯಾದರೆ ತೋಟಗಳಿಗೆ ಸಂಚರಿಸಲು ಸೂಕ್ತ ರಸ್ತೆಗಳು ಇಲ್ಲದೆ ಪರದಾಡುವ ಸ್ಥಿತಿ ಇದೆ. </p>.<p>ಗ್ರಾಮೀಣ ಪ್ರದೇಶದಿಂದ ಜಿಲ್ಲಾ ಮುಖ್ಯ ರಸ್ತೆ, ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಗೂ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ. ರಸ್ತೆಯುದ್ದಕ್ಕೂ ಜಲ್ಲಿಕಲ್ಲು ರಸ್ತೆಯಲ್ಲಿ ಗುಂಡಿ ಬಿದ್ದಿವೆ.</p>.<p>ಈ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸಲು ಹಿಂದೇಟು ಹಾಕುವಂತಾಗಿದೆ. ಈ ರಸ್ತೆಯಲ್ಲಿ ಹೊಲ–ಗದ್ದೆಗಳಿಗೆ ತೆರಳುವ ಸಮಯದಲ್ಲಿ ಆನೆ ದಾಳಿ ಮಾಡಿದರೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ಹಿಂದೆ ನರೇಗಾ ಯೋಜನೆಯಡಿ ರೈತರ ರಸ್ತೆ ಅಭಿವೃದ್ಧಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳು ಅಧಿಕಾರಿಗಳು ಸ್ಪಂದಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಅತಿ ಜರೂರಾಗಿ ರಸ್ತೆಯನ್ನು ಶೀಘ್ರದಲ್ಲಿ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><blockquote>ಚುನಾವಣೆ ಸಂದರ್ಭದಲ್ಲಿ ಮಾತ್ರ ಊರಿಗೆ ಬರುವ ಜನಪ್ರತಿನಿಧಿಗಳು ನಂತರ ಈ ಕಡೆ ತಲೆ ಹಾಕುವುದೇ ಇಲ್ಲ. ರಸ್ತೆ ಪೂರ್ಣ ಹಾಳಾಗಿದ್ದರೂ ದುರಸ್ತಿ ಮಾಡಿಸುವವರಿಲ್ಲ.</blockquote><span class="attribution">– ಬಸಪ್ಪ, ರೈತ ಸಾಕರಸನಹಳ್ಳಿ</span></div>.<div><blockquote>ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಡಾಂಬರೀಕರಣ ಮಾಡಿ ಬಸ್ ಸಂಚರಿಸಿದರೆ ಅನುಕೂಲವಾಗುತ್ತದೆ.</blockquote><span class="attribution">– ಎಸ್.ಕೆ ವೆಂಕಟಸ್ವಾಮಿ, ರೈತ ಸಾಕರಸನಹಳ್ಳಿ</span></div>.<div><blockquote>ಗಡಿ ಭಾಗದಲ್ಲಿರುವ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡುವುದರಿಂದ ರೈತರಿಗೆ ಕೃಷಿ ಮಾಡಲುತರಕಾರಿ ಮಾರುಕಟ್ಟೆಗೆ ಸಾಗಿಸಲು ಸಹಕಾರಿ.</blockquote><span class="attribution">– ಶಿವಕುಮಾರ್ .ಎಸ್, ಹೈನುಗಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಹಿಂದುಳಿದ ಗ್ರಾಮ ಪಂಚಾಯಿತಿ ಎಂಬ ಹಣೆಪಟ್ಟಿಗೆ ದೋಣಿಮಡಗು ಸೇರಿದೆ. ಇಲ್ಲಿನ ಸಂಪರ್ಕ ರಸ್ತೆಗಳು ಹದಗೆಟ್ಟಿವೆ. ಮೂಲ ಸೌಕರ್ಯಗಳಿಂದ ವಂಚಿತ ಜನರು ಸುಗಮ ಸಂಚಾರವಿಲ್ಲದೆ ಜೀವ ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಸುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.</p>.<p><strong>ಹದಗೆಟ್ಟ ಗ್ರಾಮೀಣ ರಸ್ತೆಗಳು</strong>: ತಾಲ್ಲೂಕಿನ ಗಡಿ ಭಾಗದ ಮಲ್ಲೇಶ್ ಪಾಳ್ಯ, ಸಾಕರಸನಹಳ್ಳಿ, ಕದರಿನತ್ತ, ಕುಂದರಸನಹಳ್ಳಿ, ಪೋಲೇನಹಳ್ಳಿ, ತಳೂರು, ಬತ್ತಲಹಳ್ಳಿ ಆನೆಗಳ ಕಾಟ ಒಂದು ಕಡೆಯಾದರೆ ತೋಟಗಳಿಗೆ ಸಂಚರಿಸಲು ಸೂಕ್ತ ರಸ್ತೆಗಳು ಇಲ್ಲದೆ ಪರದಾಡುವ ಸ್ಥಿತಿ ಇದೆ. </p>.<p>ಗ್ರಾಮೀಣ ಪ್ರದೇಶದಿಂದ ಜಿಲ್ಲಾ ಮುಖ್ಯ ರಸ್ತೆ, ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಗೂ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ. ರಸ್ತೆಯುದ್ದಕ್ಕೂ ಜಲ್ಲಿಕಲ್ಲು ರಸ್ತೆಯಲ್ಲಿ ಗುಂಡಿ ಬಿದ್ದಿವೆ.</p>.<p>ಈ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸಲು ಹಿಂದೇಟು ಹಾಕುವಂತಾಗಿದೆ. ಈ ರಸ್ತೆಯಲ್ಲಿ ಹೊಲ–ಗದ್ದೆಗಳಿಗೆ ತೆರಳುವ ಸಮಯದಲ್ಲಿ ಆನೆ ದಾಳಿ ಮಾಡಿದರೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ಹಿಂದೆ ನರೇಗಾ ಯೋಜನೆಯಡಿ ರೈತರ ರಸ್ತೆ ಅಭಿವೃದ್ಧಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಜನಪ್ರತಿನಿಧಿಗಳು ಅಧಿಕಾರಿಗಳು ಸ್ಪಂದಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಅತಿ ಜರೂರಾಗಿ ರಸ್ತೆಯನ್ನು ಶೀಘ್ರದಲ್ಲಿ ದುರಸ್ತಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><blockquote>ಚುನಾವಣೆ ಸಂದರ್ಭದಲ್ಲಿ ಮಾತ್ರ ಊರಿಗೆ ಬರುವ ಜನಪ್ರತಿನಿಧಿಗಳು ನಂತರ ಈ ಕಡೆ ತಲೆ ಹಾಕುವುದೇ ಇಲ್ಲ. ರಸ್ತೆ ಪೂರ್ಣ ಹಾಳಾಗಿದ್ದರೂ ದುರಸ್ತಿ ಮಾಡಿಸುವವರಿಲ್ಲ.</blockquote><span class="attribution">– ಬಸಪ್ಪ, ರೈತ ಸಾಕರಸನಹಳ್ಳಿ</span></div>.<div><blockquote>ಸಾಕರಸನಹಳ್ಳಿ ಗ್ರಾಮದಿಂದ ಕದಿರಿನತ್ತ ಗ್ರಾಮದ ಮುಖ್ಯ ರಸ್ತೆಗೆ ಡಾಂಬರೀಕರಣ ಮಾಡಿ ಬಸ್ ಸಂಚರಿಸಿದರೆ ಅನುಕೂಲವಾಗುತ್ತದೆ.</blockquote><span class="attribution">– ಎಸ್.ಕೆ ವೆಂಕಟಸ್ವಾಮಿ, ರೈತ ಸಾಕರಸನಹಳ್ಳಿ</span></div>.<div><blockquote>ಗಡಿ ಭಾಗದಲ್ಲಿರುವ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಮಾಡುವುದರಿಂದ ರೈತರಿಗೆ ಕೃಷಿ ಮಾಡಲುತರಕಾರಿ ಮಾರುಕಟ್ಟೆಗೆ ಸಾಗಿಸಲು ಸಹಕಾರಿ.</blockquote><span class="attribution">– ಶಿವಕುಮಾರ್ .ಎಸ್, ಹೈನುಗಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>