<p><strong>ಕೋಲಾರ: </strong>‘ನಿರಂತರ ಅಭ್ಯಾಸ, ತರಬೇತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತೀರ್ಣಗೊಳ್ಳಲು ಸಾಧ್ಯ’ ಎಂದು ಸ್ಪರ್ಧಾ ವಿಜೇತ ಪ್ರಧಾನ ಸಂಪಾದಕ ಕೆ.ಎಂ.ಸುರೇಶ್ ತಿಳಿಸಿದರು.</p>.<p>ನಗರದಲ್ಲಿ ಸ್ಪರ್ಧಾ ವಿಜೇತ ವತಿಯಿಂದ ಈಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಯಲ್ಲಿ ಮಾತನಾಡಿ, ‘ಬರ ಪೀಡಿತ ಜಿಲ್ಲೆಯ ವಿದ್ಯಾವಂತರು ಬದುಕು ರೂಪಿಸಿಕೊಳ್ಳಲು ಉದ್ಯೋಗಕ್ಕೆ ಸೇರಬೇಕು. ನಿಮ್ಮ ಗುರಿ ಸಾಧನೆಗೆ ತರಬೇತಿ ಅಗತ್ಯ’ ಎಂದರು.</p>.<p>‘ಇಂದು ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ಕಲಿಕೆಯ ಜತೆಗೆ ಜಾಗತಿಕ ವಿದ್ಯಮಾನಗಳ ಅರಿವು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಸಮಾಜದಲ್ಲಿ ಜ್ಞಾನ ಗಳಿಸಿಕೊಂಡವರಿಗೆ ಮಾತ್ರ ಬೆಲೆಯಿದ್ದು, ಜ್ಞಾನ ಸಂಪಾದನೆಯ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂದಿನ ಯುಗದಲ್ಲಿ ಬೆರಳ ತುದಿಯಲ್ಲಿಯೇ ಎಲ್ಲ ಮಾಹಿತಿ ಲಭ್ಯವಾಗಲಿದ್ದು ತಂತ್ರಜ್ಞಾನ ಬಳಕೆಯ ಜತೆಗೆ ಉತ್ತಮ ಮಾರ್ಗದರ್ಶಕರ ಸಹಕಾರದಿಂದ ಗುರಿ ಸಾಧಿಸಹುದು’ ಎಂದು ಹೇಳಿದರು.</p>.<p>‘ರಾಜಕಾರಣ ನನ್ನ ಬದುಕಲ್ಲ, ಆದರೆ ಅಧಿಕಾರ ಇದ್ದರೆ ಯುವಕರಿಗೆ ಸೇವೆ ಕಲ್ಪಿಸಬಹುದು ಎಂಬ ಉದ್ದೇಶದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದೆನೆ. ಪದವಿದರರು ಸಹಕಾರ ನೀಡಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ನಿರಂತರ ಅಭ್ಯಾಸ, ತರಬೇತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತೀರ್ಣಗೊಳ್ಳಲು ಸಾಧ್ಯ’ ಎಂದು ಸ್ಪರ್ಧಾ ವಿಜೇತ ಪ್ರಧಾನ ಸಂಪಾದಕ ಕೆ.ಎಂ.ಸುರೇಶ್ ತಿಳಿಸಿದರು.</p>.<p>ನಗರದಲ್ಲಿ ಸ್ಪರ್ಧಾ ವಿಜೇತ ವತಿಯಿಂದ ಈಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ತರಬೇತಿಯಲ್ಲಿ ಮಾತನಾಡಿ, ‘ಬರ ಪೀಡಿತ ಜಿಲ್ಲೆಯ ವಿದ್ಯಾವಂತರು ಬದುಕು ರೂಪಿಸಿಕೊಳ್ಳಲು ಉದ್ಯೋಗಕ್ಕೆ ಸೇರಬೇಕು. ನಿಮ್ಮ ಗುರಿ ಸಾಧನೆಗೆ ತರಬೇತಿ ಅಗತ್ಯ’ ಎಂದರು.</p>.<p>‘ಇಂದು ಸ್ಪರ್ಧಾತ್ಮಕ ಯುಗವಾಗಿದ್ದು, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ಕಲಿಕೆಯ ಜತೆಗೆ ಜಾಗತಿಕ ವಿದ್ಯಮಾನಗಳ ಅರಿವು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಸಮಾಜದಲ್ಲಿ ಜ್ಞಾನ ಗಳಿಸಿಕೊಂಡವರಿಗೆ ಮಾತ್ರ ಬೆಲೆಯಿದ್ದು, ಜ್ಞಾನ ಸಂಪಾದನೆಯ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಇಂದಿನ ಯುಗದಲ್ಲಿ ಬೆರಳ ತುದಿಯಲ್ಲಿಯೇ ಎಲ್ಲ ಮಾಹಿತಿ ಲಭ್ಯವಾಗಲಿದ್ದು ತಂತ್ರಜ್ಞಾನ ಬಳಕೆಯ ಜತೆಗೆ ಉತ್ತಮ ಮಾರ್ಗದರ್ಶಕರ ಸಹಕಾರದಿಂದ ಗುರಿ ಸಾಧಿಸಹುದು’ ಎಂದು ಹೇಳಿದರು.</p>.<p>‘ರಾಜಕಾರಣ ನನ್ನ ಬದುಕಲ್ಲ, ಆದರೆ ಅಧಿಕಾರ ಇದ್ದರೆ ಯುವಕರಿಗೆ ಸೇವೆ ಕಲ್ಪಿಸಬಹುದು ಎಂಬ ಉದ್ದೇಶದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದೆನೆ. ಪದವಿದರರು ಸಹಕಾರ ನೀಡಬೇಕು’ ಎಂದು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>