<p><strong>ಕೋಲಾರ: </strong>‘ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಲು ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ನಿರ್ಣಾಯಕ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ಗೌಡ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ವಿಟ್ಟಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ವಿಟ್ಟಪ್ಪನಹಳ್ಳಿ ಶಾಲೆ ಆವರಣವು 4 ಎಕರೆ ವಿಸ್ತಾರವಾಗಿದೆ. ಶಾಲೆ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ಬೆಳಸಲಾಗಿದ್ದು, ಉಳಿದ ಜಾಗದಲ್ಲಿ ಮಾವಿನ ಸಸಿಗಳನ್ನು ನೆಡಬೇಕು. ಶಿಕ್ಷಕರು ಮಕ್ಕಳಲ್ಲಿ ಕನ್ನಡ ಭಾಷೆ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.</p>.<p>ಈಗಾಗಲೇ ಶಾಲೆಗೆ ಗ್ರಾ.ಪಂ ವತಿಯಿಂದ ಬಯಲು ರಂಗಮಂದಿರ, ಶೌಚಾಲಯ, ಕಾಂಪೌಂಡ್, ಸಿ.ಸಿ.ರಸ್ತೆ, ಗ್ರಂಥಾಲಯ ಮತ್ತು ಕಂಪ್ಯೂಟರ್ ಕೇಂದ್ರ, ಅಡುಗೆ ಕೊಠಡಿ ಸೌಕರ್ಯ ಕಲ್ಪಿಸಲಾಗಿದೆ. ಶಾಲೆಯಲ್ಲಿ ಮೂಲಸೌಕರ್ಯ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಇಸಿಒ ವೆಂಕಟಾಚಲಪತಿ, ಬಿಆರ್ಪಿ ನಾಗರಾಜ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಮಕೃಷ್ಣಪ್ಪ, ಶಿಕ್ಷಕರಾದ ಅಶ್ವತ್ಥ ನಾರಾಯಣ, ರಾಜೇಶ್, ಸುಜಾತಾ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಲು ಎಸ್ಡಿಎಂಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಪಾತ್ರ ನಿರ್ಣಾಯಕ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ಗೌಡ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ವಿಟ್ಟಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.</p>.<p>‘ವಿಟ್ಟಪ್ಪನಹಳ್ಳಿ ಶಾಲೆ ಆವರಣವು 4 ಎಕರೆ ವಿಸ್ತಾರವಾಗಿದೆ. ಶಾಲೆ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ಬೆಳಸಲಾಗಿದ್ದು, ಉಳಿದ ಜಾಗದಲ್ಲಿ ಮಾವಿನ ಸಸಿಗಳನ್ನು ನೆಡಬೇಕು. ಶಿಕ್ಷಕರು ಮಕ್ಕಳಲ್ಲಿ ಕನ್ನಡ ಭಾಷೆ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.</p>.<p>ಈಗಾಗಲೇ ಶಾಲೆಗೆ ಗ್ರಾ.ಪಂ ವತಿಯಿಂದ ಬಯಲು ರಂಗಮಂದಿರ, ಶೌಚಾಲಯ, ಕಾಂಪೌಂಡ್, ಸಿ.ಸಿ.ರಸ್ತೆ, ಗ್ರಂಥಾಲಯ ಮತ್ತು ಕಂಪ್ಯೂಟರ್ ಕೇಂದ್ರ, ಅಡುಗೆ ಕೊಠಡಿ ಸೌಕರ್ಯ ಕಲ್ಪಿಸಲಾಗಿದೆ. ಶಾಲೆಯಲ್ಲಿ ಮೂಲಸೌಕರ್ಯ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸ್, ಇಸಿಒ ವೆಂಕಟಾಚಲಪತಿ, ಬಿಆರ್ಪಿ ನಾಗರಾಜ್, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಮಕೃಷ್ಣಪ್ಪ, ಶಿಕ್ಷಕರಾದ ಅಶ್ವತ್ಥ ನಾರಾಯಣ, ರಾಜೇಶ್, ಸುಜಾತಾ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>