<p><strong>ಕೋಲಾರ: </strong>ತಾಲ್ಲೂಕಿನ ಕುಂಬಾರಹಳ್ಳಿ ಕೆರೆಯನ್ನು ಅಭಿವೃದ್ಧಿಪಡಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಇತ್ತೀಚಿಗೆ ಕೆರೆಗೆ ಭೇಟಿ ನೀಡಿ ವೀಕ್ಷಿಸಿದರು.</p>.<p>ಸಣ್ಣ ನೀರಾವರಿ ಇಲಾಖೆ ಎಂಜನಿಯರ್ಗಳಿಂದ ಮಾಹಿತಿ ಪಡೆದು, ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು, ಒಂದು ಕಾಲಮಿತಿಯೊಳಗೆ ಕಲಸ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ‘೨೭ ಎಕರೆ ಪ್ರದೇಶದಲ್ಲಿರುವ ಕೆರೆಯನ್ನು ಸಿಎಸ್ಆರ್ ಯೋಜನೆಯಡಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗಿದ್ದು, ಕ್ರಿಯಾ ಯೋಜನೆ ತಯಾರಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p>‘ಸಿಎಸ್ಆರ್ ಅಡಿಯಲ್ಲಿ ಹೋಂಡಾ ಕಂಪನಿಯವರು ಪ್ರಮುಖವಾಗಿ ಮುಂದೆ ಬಂದಿದ್ದು, ಬೆಮೆಲ್ನವರು ಡೋಜರ್ಗಳನ್ನು ನೀಡುವ ಮೂಲಕ ಸಹಕಾರ ನೀಡಿದ್ದಾರೆ. ಈ ಕೆರೆಗೆ ಕೆಸಿವ್ಯಾಲಿ ಯೋಜನೆಯಡಿ ನೀರು ಬರುವುದಿಲ್ಲ. ಆದರೂ, ನಮ್ಮ ಕಚೇರಿ ಸಮೀಪದಲ್ಲೇ ಇರುವುದರಿಂದ ಇದನ್ನು ಅಭಿವೃದ್ಧಿಪಡಿಸಿ, ಗಿಡಮರಗಳನ್ನು ಬೆಳೆಸಿ ಉತ್ತಮ ವಾತಾವರಣ ನಿರ್ಮಿಸಲು ಚಿಂತಿಸಲಾಗಿದೆ’ ಎಂದು ಹೇಳಿದರು.</p>.<p>‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಕೆರೆಯನ್ನು ಕೆಲವರು ಸ್ವಲ್ಪ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಅದಕ್ಕಾಗಿ ಸರ್ವೇ ಮಾಡಿಸಲಾಗಿದೆ. ತೆರವುಗೊಳಿಸಿ, ಹಳ್ಳಗಳನ್ನು ಸಮತಟ್ಟು ಮಾಡಲಾಗುವುದು. ನೀರು ಹರಿಯಲು ಕಾಲುವೆ ನಿರ್ಮಿಸಲಾಗುವುದು, ಮುಂದಿನ ದಿನಗಳಲ್ಲಿ ಸಾಧ್ಯವಾದರೆ ಕೆಸಿವ್ಯಾಲಿಯಿಂದ ನೀರು ಹರಿಸಲು ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ನಗರಸಭೆ ಆಯುಕ್ತ ಶ್ರೀಕಾಂತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ಕುಂಬಾರಹಳ್ಳಿ ಕೆರೆಯನ್ನು ಅಭಿವೃದ್ಧಿಪಡಿಸುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಇತ್ತೀಚಿಗೆ ಕೆರೆಗೆ ಭೇಟಿ ನೀಡಿ ವೀಕ್ಷಿಸಿದರು.</p>.<p>ಸಣ್ಣ ನೀರಾವರಿ ಇಲಾಖೆ ಎಂಜನಿಯರ್ಗಳಿಂದ ಮಾಹಿತಿ ಪಡೆದು, ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು, ಒಂದು ಕಾಲಮಿತಿಯೊಳಗೆ ಕಲಸ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸುದ್ದಿಗಾರರೊಂದಿಗೆ ಮಾತನಾಡಿ, ‘೨೭ ಎಕರೆ ಪ್ರದೇಶದಲ್ಲಿರುವ ಕೆರೆಯನ್ನು ಸಿಎಸ್ಆರ್ ಯೋಜನೆಯಡಿ ಅಭಿವೃದ್ಧಿಪಡಿಸಲು ಕ್ರಮಕೈಗೊಳ್ಳಲಾಗಿದ್ದು, ಕ್ರಿಯಾ ಯೋಜನೆ ತಯಾರಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p>‘ಸಿಎಸ್ಆರ್ ಅಡಿಯಲ್ಲಿ ಹೋಂಡಾ ಕಂಪನಿಯವರು ಪ್ರಮುಖವಾಗಿ ಮುಂದೆ ಬಂದಿದ್ದು, ಬೆಮೆಲ್ನವರು ಡೋಜರ್ಗಳನ್ನು ನೀಡುವ ಮೂಲಕ ಸಹಕಾರ ನೀಡಿದ್ದಾರೆ. ಈ ಕೆರೆಗೆ ಕೆಸಿವ್ಯಾಲಿ ಯೋಜನೆಯಡಿ ನೀರು ಬರುವುದಿಲ್ಲ. ಆದರೂ, ನಮ್ಮ ಕಚೇರಿ ಸಮೀಪದಲ್ಲೇ ಇರುವುದರಿಂದ ಇದನ್ನು ಅಭಿವೃದ್ಧಿಪಡಿಸಿ, ಗಿಡಮರಗಳನ್ನು ಬೆಳೆಸಿ ಉತ್ತಮ ವಾತಾವರಣ ನಿರ್ಮಿಸಲು ಚಿಂತಿಸಲಾಗಿದೆ’ ಎಂದು ಹೇಳಿದರು.</p>.<p>‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಕೆರೆಯನ್ನು ಕೆಲವರು ಸ್ವಲ್ಪ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಅದಕ್ಕಾಗಿ ಸರ್ವೇ ಮಾಡಿಸಲಾಗಿದೆ. ತೆರವುಗೊಳಿಸಿ, ಹಳ್ಳಗಳನ್ನು ಸಮತಟ್ಟು ಮಾಡಲಾಗುವುದು. ನೀರು ಹರಿಯಲು ಕಾಲುವೆ ನಿರ್ಮಿಸಲಾಗುವುದು, ಮುಂದಿನ ದಿನಗಳಲ್ಲಿ ಸಾಧ್ಯವಾದರೆ ಕೆಸಿವ್ಯಾಲಿಯಿಂದ ನೀರು ಹರಿಸಲು ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ನಗರಸಭೆ ಆಯುಕ್ತ ಶ್ರೀಕಾಂತ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>