<p><strong>ಕೋಲಾರ:</strong> ತಮ್ಮ ಬಹುನಿರೀಕ್ಷೆಯ ಕೆ.ಡಿ (KD) ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದ್ದು, ನಾಯಕ ನಟ ಧ್ರುವ ಸರ್ಜಾ ದೇವರ ಮೊರೆ ಹೋಗಿದ್ದಾರೆ.</p>.<p>ಕೋಲಾರ ತಾಲ್ಲೂಕಿನ ಕೋರಗಂಡನಹಳ್ಳಿಯ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ವಿಶೇಷ ಹೋಮ, ಪೂಜೆ ನೆರವೇರಿಸಿದ್ದಾರೆ. ದೇವಾಲಯದಲ್ಲಿ ಅಮಾವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು. ಕಾಲಬೈರವ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು, ರುದ್ರಾಭಿಷೇಕ ನಡೆಯಿತು.</p>.<p>ಈ ದೇಗುಲ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಧ್ರುವ ಸರ್ಜಾ ಅವರ ಜೊತೆಯಲ್ಲಿ ಬೆಂಗಳೂರು ಪೂರ್ವ ವಲಯದ ಡಿಸಿಪಿ ಡಿ.ದೇವರಾಜ್ ಇದ್ದರು. ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.</p>.<p>ಈ ವೇಳೆ ಧ್ರುವ ಸರ್ಜಾ ಅವರನ್ನು ಅಭಿಮಾನಿಗಳು ಮುತ್ತಿಕೊಂಡರು, ಸೆಲ್ಫಿ ಹಾಗೂ ಆಟೊಗ್ರಾಫ್ಗೆ ಮುಗಿಬಿದ್ದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧ್ರುವ ಸರ್ಜಾ, ‘ಅಮಾವಾಸ್ಯೆ ಕಾರಣ ಹೋಮ ಪೂಜೆ ಸಲ್ಲಿಸಲು ಬಂದಿದ್ದೇನೆ. ಶಿವಕುಮಾರ ಸ್ವಾಮೀಜಿ ನೇತ್ವದಲ್ಲಿ ಪೂಜಾ ಕಾರ್ಯ ಚೆನ್ನಾಗಿ ನಡೆದಿದೆ. ಭಗವಂತನ ಅನುಗ್ರಹ ಇಲ್ಲದೆ ಏನೂ ನಡೆಯಲ್ಲ. ದೇವರಾಜ್ ಅವರಿಂದ ಈ ದೇಗುಲ ಗೊತ್ತಾಯಿತು’ ಎಂದರು.</p>.<p>‘ಕೆ.ಡಿ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ಬಿಡುಗಡೆಯ ದಿನಾಂಕ ಘೋಷಿಸಲಾಗುವುದು. ಇದೊಂದು ಕಮರ್ಷಿಯಲ್ ಸಿನಿಮಾ. ನಾನು ಇಲ್ಲಿಗೆ ಸಿನಿಮಾ ಪ್ರಚಾರ ಮಾಡಲು ಬಂದಿಲ್ಲ’ ಎಂದು ನುಡಿದರು.</p>.<p>‘ದೇಗುಲಕ್ಕೆ ಭೇಟಿ ನೀಡಿದ್ದರಿಂದ ಸಕಾರಾತ್ಮಕ ವೈಬ್ಸ್ ಸಿಕ್ಕಿದೆ. ಎಲ್ಲರಿಗೂ ಕಷ್ಟ ಸುಖ ಇರುತ್ತದೆ. ಸುಖವನ್ನು ಎಲ್ಲರ ಬಳಿ ಹೇಳಿಕೊಳ್ಳಬಹುದು. ಭಗವಂತನ ಬಳಿ ಮಾತ್ರ ಕಷ್ಟ ಹೇಳಿಕೊಳ್ಳಲು ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಮ್ಮ ಬಹುನಿರೀಕ್ಷೆಯ ಕೆ.ಡಿ (KD) ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದ್ದು, ನಾಯಕ ನಟ ಧ್ರುವ ಸರ್ಜಾ ದೇವರ ಮೊರೆ ಹೋಗಿದ್ದಾರೆ.</p>.<p>ಕೋಲಾರ ತಾಲ್ಲೂಕಿನ ಕೋರಗಂಡನಹಳ್ಳಿಯ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ವಿಶೇಷ ಹೋಮ, ಪೂಜೆ ನೆರವೇರಿಸಿದ್ದಾರೆ. ದೇವಾಲಯದಲ್ಲಿ ಅಮಾವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು. ಕಾಲಬೈರವ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು, ರುದ್ರಾಭಿಷೇಕ ನಡೆಯಿತು.</p>.<p>ಈ ದೇಗುಲ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಧ್ರುವ ಸರ್ಜಾ ಅವರ ಜೊತೆಯಲ್ಲಿ ಬೆಂಗಳೂರು ಪೂರ್ವ ವಲಯದ ಡಿಸಿಪಿ ಡಿ.ದೇವರಾಜ್ ಇದ್ದರು. ಅವರು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದರು.</p>.<p>ಈ ವೇಳೆ ಧ್ರುವ ಸರ್ಜಾ ಅವರನ್ನು ಅಭಿಮಾನಿಗಳು ಮುತ್ತಿಕೊಂಡರು, ಸೆಲ್ಫಿ ಹಾಗೂ ಆಟೊಗ್ರಾಫ್ಗೆ ಮುಗಿಬಿದ್ದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧ್ರುವ ಸರ್ಜಾ, ‘ಅಮಾವಾಸ್ಯೆ ಕಾರಣ ಹೋಮ ಪೂಜೆ ಸಲ್ಲಿಸಲು ಬಂದಿದ್ದೇನೆ. ಶಿವಕುಮಾರ ಸ್ವಾಮೀಜಿ ನೇತ್ವದಲ್ಲಿ ಪೂಜಾ ಕಾರ್ಯ ಚೆನ್ನಾಗಿ ನಡೆದಿದೆ. ಭಗವಂತನ ಅನುಗ್ರಹ ಇಲ್ಲದೆ ಏನೂ ನಡೆಯಲ್ಲ. ದೇವರಾಜ್ ಅವರಿಂದ ಈ ದೇಗುಲ ಗೊತ್ತಾಯಿತು’ ಎಂದರು.</p>.<p>‘ಕೆ.ಡಿ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಸದ್ಯದಲ್ಲೇ ಬಿಡುಗಡೆಯ ದಿನಾಂಕ ಘೋಷಿಸಲಾಗುವುದು. ಇದೊಂದು ಕಮರ್ಷಿಯಲ್ ಸಿನಿಮಾ. ನಾನು ಇಲ್ಲಿಗೆ ಸಿನಿಮಾ ಪ್ರಚಾರ ಮಾಡಲು ಬಂದಿಲ್ಲ’ ಎಂದು ನುಡಿದರು.</p>.<p>‘ದೇಗುಲಕ್ಕೆ ಭೇಟಿ ನೀಡಿದ್ದರಿಂದ ಸಕಾರಾತ್ಮಕ ವೈಬ್ಸ್ ಸಿಕ್ಕಿದೆ. ಎಲ್ಲರಿಗೂ ಕಷ್ಟ ಸುಖ ಇರುತ್ತದೆ. ಸುಖವನ್ನು ಎಲ್ಲರ ಬಳಿ ಹೇಳಿಕೊಳ್ಳಬಹುದು. ಭಗವಂತನ ಬಳಿ ಮಾತ್ರ ಕಷ್ಟ ಹೇಳಿಕೊಳ್ಳಲು ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>