<p><strong>ಕೋಲಾರ:</strong> ‘ಯೋಗದಿಂದ ಉತ್ತಮ ಆರೋಗ್ಯದ ಜತೆಗೆ ಮಾನಸಿಕವಾಗಿ ನೆಮ್ಮದಿ, ರಕ್ತದೊತ್ತಡ ಕಡಿಮೆಯಾಗಿ ಉತ್ತಮ ಒಡನಾಟಕ್ಕೆ ಕಾರಣವಾಗುತ್ತದೆ’ ಎಂದು ಉಪನ್ಯಾಸಕ ರಮೇಶ್ಕುಮಾರ್ ತಿಳಿಸಿದರು.</p>.<p>ನಗರದ ಮಹರ್ಷಿ ಯೋಗಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ೪ನೇ ಯೋಗ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ‘ಪ್ರತಿಯೊಬ್ಬರೂ ದಿನದ ಅರ್ಧಗಂಟೆ ಯೋಗ ಮಾಡಲು ಸಮಯ ಮೀಸಲಿಟ್ಟರೆ ಹೆಚ್ಚು ಸಹಕಾರಿಯಾಗಿದ್ದು, ಆರೋಗ್ಯ ವೃದ್ಧಿಗೊಳಿಸಿಕೊಳ್ಳಬಹುದು’ ಎಂದರು.</p>.<p>‘ಬದಲಾದ ಆಹಾರ ಪದ್ದತಿ ಮತ್ತು ಮನುಷ್ಯದ ಜೀವನ ಪದ್ದತಿಯಿಂದ ಇಂದು ಬೊಜ್ಜು ಮತ್ತಿತರ ಮಾರಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಸಕ್ಕರೆ ಕಾಯಿಲೆಯಂತು ಮಿತಿ ಮೀರುತ್ತಿದೆ, ರಕ್ತದೊತ್ತಡದಿಂದ ಕೋಪ ಹೆಚ್ಚಾಗಿ ಸಮಾಜದಲ್ಲಿ ಪರಸ್ಪರ ಸಂವಹನದಲ್ಲಿ ಆಕ್ರೋಶ, ದ್ವೇಷ, ಅಸೂಯೆ ಹೆಚ್ಚಲು ಕಾರಣವಾಗಿದೆ’ ಎಂದು ವಿಷಾದಿಸಿದರು.</p>.<p>ಮುಖ್ಯ ಯೋಗ ಶಿಕ್ಷಕ ಜಯಪ್ರಕಾಶ್ ಮಾತನಾಡಿ, ‘ವಿವೇಕಾನಂದರು ಸೇರಿದಂತೆ ಹಲವಾರು ಸಾಧು ಸಂತರು ಯೋಗ ಸಾಧಕರಾಗಿ ಸಮಾಜಕ್ಕೆ ಮಾರ್ಗದರ್ಶನ ನೀಡಿದ್ದಾರೆ’ ಎಂದು ಅಭಿಪ್ರಾಯಪಟ್ಟರು.</p>.<p>‘ನಿರಂತರ ಯೋಗಾಭ್ಯಾಸದಿಂದ ಆಸ್ಪತ್ರೆಗಳಲ್ಲಿ ಲಕ್ಷಾಂತರ ಖರ್ಚು ಮಾಡಿದರೂ ನಿವಾರಣೆಯಾಗದ ಅನೇಕ ರೋಗಗಳಿಗೆ ಪರಿಹಾರ ಸಿಕ್ಕಿದೆ, ಡಯಾಬಿಟೀಸ್, ರಕ್ತದೊತ್ತಡ ನಿಯಂತ್ರನದಲ್ಲಿರಲು ಯೋಗ ಸದಾ ಸಹಕಾರಿ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಮತ್ತು ಶಂಕರಮೂರ್ತಿ ತಂಡದವರಿಂದ ಸುಗಮ ಸಂಗೀತಾ ನಡೆಯಿತು.</p>.<p>ಟ್ರಸ್ಟಿಗಳಾದ ಸದಾಶಿವ, ರಾಜೇಶ್, ಮುನಿಯಪ್ಪ, ಮಲ್ಲಿಕಾರ್ಜುನ್, ಶಿಕ್ಷಕರಾದ ನಂದೀಶ್, ನಾಗಸುಂದರ, ಶಾಂತಕುಮಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಯೋಗದಿಂದ ಉತ್ತಮ ಆರೋಗ್ಯದ ಜತೆಗೆ ಮಾನಸಿಕವಾಗಿ ನೆಮ್ಮದಿ, ರಕ್ತದೊತ್ತಡ ಕಡಿಮೆಯಾಗಿ ಉತ್ತಮ ಒಡನಾಟಕ್ಕೆ ಕಾರಣವಾಗುತ್ತದೆ’ ಎಂದು ಉಪನ್ಯಾಸಕ ರಮೇಶ್ಕುಮಾರ್ ತಿಳಿಸಿದರು.</p>.<p>ನಗರದ ಮಹರ್ಷಿ ಯೋಗಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ೪ನೇ ಯೋಗ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ‘ಪ್ರತಿಯೊಬ್ಬರೂ ದಿನದ ಅರ್ಧಗಂಟೆ ಯೋಗ ಮಾಡಲು ಸಮಯ ಮೀಸಲಿಟ್ಟರೆ ಹೆಚ್ಚು ಸಹಕಾರಿಯಾಗಿದ್ದು, ಆರೋಗ್ಯ ವೃದ್ಧಿಗೊಳಿಸಿಕೊಳ್ಳಬಹುದು’ ಎಂದರು.</p>.<p>‘ಬದಲಾದ ಆಹಾರ ಪದ್ದತಿ ಮತ್ತು ಮನುಷ್ಯದ ಜೀವನ ಪದ್ದತಿಯಿಂದ ಇಂದು ಬೊಜ್ಜು ಮತ್ತಿತರ ಮಾರಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಸಕ್ಕರೆ ಕಾಯಿಲೆಯಂತು ಮಿತಿ ಮೀರುತ್ತಿದೆ, ರಕ್ತದೊತ್ತಡದಿಂದ ಕೋಪ ಹೆಚ್ಚಾಗಿ ಸಮಾಜದಲ್ಲಿ ಪರಸ್ಪರ ಸಂವಹನದಲ್ಲಿ ಆಕ್ರೋಶ, ದ್ವೇಷ, ಅಸೂಯೆ ಹೆಚ್ಚಲು ಕಾರಣವಾಗಿದೆ’ ಎಂದು ವಿಷಾದಿಸಿದರು.</p>.<p>ಮುಖ್ಯ ಯೋಗ ಶಿಕ್ಷಕ ಜಯಪ್ರಕಾಶ್ ಮಾತನಾಡಿ, ‘ವಿವೇಕಾನಂದರು ಸೇರಿದಂತೆ ಹಲವಾರು ಸಾಧು ಸಂತರು ಯೋಗ ಸಾಧಕರಾಗಿ ಸಮಾಜಕ್ಕೆ ಮಾರ್ಗದರ್ಶನ ನೀಡಿದ್ದಾರೆ’ ಎಂದು ಅಭಿಪ್ರಾಯಪಟ್ಟರು.</p>.<p>‘ನಿರಂತರ ಯೋಗಾಭ್ಯಾಸದಿಂದ ಆಸ್ಪತ್ರೆಗಳಲ್ಲಿ ಲಕ್ಷಾಂತರ ಖರ್ಚು ಮಾಡಿದರೂ ನಿವಾರಣೆಯಾಗದ ಅನೇಕ ರೋಗಗಳಿಗೆ ಪರಿಹಾರ ಸಿಕ್ಕಿದೆ, ಡಯಾಬಿಟೀಸ್, ರಕ್ತದೊತ್ತಡ ನಿಯಂತ್ರನದಲ್ಲಿರಲು ಯೋಗ ಸದಾ ಸಹಕಾರಿ’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಮತ್ತು ಶಂಕರಮೂರ್ತಿ ತಂಡದವರಿಂದ ಸುಗಮ ಸಂಗೀತಾ ನಡೆಯಿತು.</p>.<p>ಟ್ರಸ್ಟಿಗಳಾದ ಸದಾಶಿವ, ರಾಜೇಶ್, ಮುನಿಯಪ್ಪ, ಮಲ್ಲಿಕಾರ್ಜುನ್, ಶಿಕ್ಷಕರಾದ ನಂದೀಶ್, ನಾಗಸುಂದರ, ಶಾಂತಕುಮಾರಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>