<p><strong>ಕೋಲಾರ</strong>: ‘ಅಂಗವಿಕಲ ಮಕ್ಕಳು ದೇವರಂತೆ. ಅವರನ್ನು ಗೌರವದಿಂದ ಕಾಣುವ ಮೂಲಕ ಸ್ವಾವಲಂಬಿ ಬದುಕಿಗೆ ದಾರಿ ತೋರಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.</p>.<p>ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಮಕ್ಕಳಿಗೆ ಭಾನುವಾರ ಸಿಹಿ ವಿತರಿಸಿ ಮಾತನಾಡಿ, ‘ದೇಶದಲ್ಲಿ ಸಾಕಷ್ಟು ಅಂಗವಿಕಲರು ಸಾಧಕರಾಗಿ ಹೊರಹೊಮ್ಮಿದ್ದಾರೆ. ಅಂಗವಿಕಲರು ಕೀಳರಿಮೆ ಬಿಟ್ಟರೆ ಸಾಧನೆಯ ಹಾದಿ ಸುಲಭವಾಗುತ್ತದೆ’ ಎಂದರು.</p>.<p>‘ಅಂಗವಿಕಲ ಮಕ್ಕಳಿಗೆ ಶಿಕ್ಷಣದ ಜತೆಗೆ ಬದುಕು ರೂಪಿಸಿಕೊಳ್ಳಲು ಕೌಶಲ ನೀಡಬೇಕು. ಸರ್ಕಾರ ಅಂಗವಿಕಲರಿಗೆ ಶೇ 3ರಷ್ಟು ಮೀಸಲಾತಿ ನೀಡಿದೆ. ಇದರ ಪ್ರಯೋಜನ ಪಡೆಯಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗಾಗಿ ಮೀಸಲಿಟ್ಟ ಅನುದಾನವನ್ನು ಅವರಿಗೆ ಖರ್ಚು ಮಾಡುವ ಹೃದಯವಂತಿಕೆ ಬೇಕು’ ಎಂದು ತಿಳಸಿದರು.</p>.<p>‘ಅಂಗವಿಕಲರಲ್ಲಿ ಅನೇಕ ಕಲಾವಿದರಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿದ್ದಾರೆ. ಅಂತಹ ಸಾಧಕರ ಆದರ್ಶ ಪಾಲಿಸಬೇಕು. ತಾವು ಎಲ್ಲರಂತೆ ಬದುಕು ನಡೆಸಬಹುದು ಎಂಬ ವಿಶ್ವಾಸ ಮೂಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ದೀಪಾವಳಿ ಹೆಸರಿನಲ್ಲಿ ಪರಿಸರ ಮತ್ತು ಆರೋಗ್ಯಕ್ಕೆ ಮಾರಕವಾದ ಪಟಾಕಿ ಸಿಡಿಸಿ ಹಣ ವ್ಯಯ ಮಾಡುವ ಬದಲಿಗೆ ಇಂತಹ ಅಂಗವಿಕಲ ಮಕ್ಕಳಿಗೆ ನೆರವಾಗುವ ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಶಾಲೆ ಕಾರ್ಯದರ್ಶಿ ಕೆ.ಎಸ್.ಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಅಂಗವಿಕಲ ಮಕ್ಕಳು ದೇವರಂತೆ. ಅವರನ್ನು ಗೌರವದಿಂದ ಕಾಣುವ ಮೂಲಕ ಸ್ವಾವಲಂಬಿ ಬದುಕಿಗೆ ದಾರಿ ತೋರಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಹೇಳಿದರು.</p>.<p>ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ಅಂತರಗಂಗೆ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಮಕ್ಕಳಿಗೆ ಭಾನುವಾರ ಸಿಹಿ ವಿತರಿಸಿ ಮಾತನಾಡಿ, ‘ದೇಶದಲ್ಲಿ ಸಾಕಷ್ಟು ಅಂಗವಿಕಲರು ಸಾಧಕರಾಗಿ ಹೊರಹೊಮ್ಮಿದ್ದಾರೆ. ಅಂಗವಿಕಲರು ಕೀಳರಿಮೆ ಬಿಟ್ಟರೆ ಸಾಧನೆಯ ಹಾದಿ ಸುಲಭವಾಗುತ್ತದೆ’ ಎಂದರು.</p>.<p>‘ಅಂಗವಿಕಲ ಮಕ್ಕಳಿಗೆ ಶಿಕ್ಷಣದ ಜತೆಗೆ ಬದುಕು ರೂಪಿಸಿಕೊಳ್ಳಲು ಕೌಶಲ ನೀಡಬೇಕು. ಸರ್ಕಾರ ಅಂಗವಿಕಲರಿಗೆ ಶೇ 3ರಷ್ಟು ಮೀಸಲಾತಿ ನೀಡಿದೆ. ಇದರ ಪ್ರಯೋಜನ ಪಡೆಯಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗಾಗಿ ಮೀಸಲಿಟ್ಟ ಅನುದಾನವನ್ನು ಅವರಿಗೆ ಖರ್ಚು ಮಾಡುವ ಹೃದಯವಂತಿಕೆ ಬೇಕು’ ಎಂದು ತಿಳಸಿದರು.</p>.<p>‘ಅಂಗವಿಕಲರಲ್ಲಿ ಅನೇಕ ಕಲಾವಿದರಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿದ್ದಾರೆ. ಅಂತಹ ಸಾಧಕರ ಆದರ್ಶ ಪಾಲಿಸಬೇಕು. ತಾವು ಎಲ್ಲರಂತೆ ಬದುಕು ನಡೆಸಬಹುದು ಎಂಬ ವಿಶ್ವಾಸ ಮೂಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ದೀಪಾವಳಿ ಹೆಸರಿನಲ್ಲಿ ಪರಿಸರ ಮತ್ತು ಆರೋಗ್ಯಕ್ಕೆ ಮಾರಕವಾದ ಪಟಾಕಿ ಸಿಡಿಸಿ ಹಣ ವ್ಯಯ ಮಾಡುವ ಬದಲಿಗೆ ಇಂತಹ ಅಂಗವಿಕಲ ಮಕ್ಕಳಿಗೆ ನೆರವಾಗುವ ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಶಾಲೆ ಕಾರ್ಯದರ್ಶಿ ಕೆ.ಎಸ್.ಶಂಕರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>