<p><strong>ಕೋಲಾರ</strong>: ‘ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 23 ಮಂದಿ ಕೊರೊನಾ ಸೋಂಕಿತರು ಮೃತಪಟ್ಟರೂ ಸರ್ಕಾರ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿಲ್ಲ. ಈ ವ್ಯವಸ್ಥೆ ಯಾವ ಕಡೆ ಸಾಗುತ್ತಿದೆ?’ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಮಾರ್ಮಿಕವಾಗಿ ಪ್ರಶ್ನಿಸಿದರು.</p>.<p>ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೋವಿಡ್ನಿಂದ ರಾಜ್ಯದಲ್ಲಿ ಸಾಕಷ್ಟು ಮಂದಿ ಮೃತಪಟ್ಟರು. ಸರ್ಕಾರಕ್ಕೆ ಇದರ ಗಂಭೀರತೆ ಅರ್ಥವಾಗದೆ ಹೋಯಿತು. ವಿಪಕ್ಷದವರು ಸರ್ಕಾರವನ್ನು ಖಂಡಿಸಿದರೆ ಮಾಧ್ಯಮಗಳು ವಾಸ್ತವ ಬಿಟ್ಟು, ಮೊದಲ ಮತ್ತು ಕೊನೆಯ ಮಾತು ಬಿತ್ತರಿಸುತ್ತವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ವ್ಯವಸ್ಥೆ ಯಾವು ದಿಕ್ಕಿನಲ್ಲಿ ಸಾಗುತ್ತಿದೆ. ವಿಪಕ್ಷಗಳು ತಪ್ಪು ಖಂಡಿಸುತ್ತಿದ್ದರೂ ಬೆಂಬಲ ನೀಡಬೇಕಾದ ಮಾಧ್ಯಮಗಳು ಬೇರೆ ವಿಚಾರ ಪ್ರಕಟಿಸುತ್ತಿವೆ. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿರುವ ಜನರೇ ಮುಂದೆ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತಾರೆ’ ಎಂದು ಹೇಳಿದರು.</p>.<p>‘ರಫೆಲ್ ಯುದ್ಧ ವಿಮಾನ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಫ್ರಾನ್ಸ್ ಸಿದ್ಧವಿದೆ. ಆದರೆ, ನಮ್ಮ ದೆಶದವರು ಅವಕಾಶ ನೀಡುತ್ತಿಲ್ಲ. ಈ ಹಗರಣದಲ್ಲಿ ಭಾಗಿಯಾಗಿರುವ ಕಾರಣಕ್ಕಾಗಿಯೇ ತನಿಖೆ ಬೇಡ ಎನ್ನುತ್ತಿದ್ದಾರೆ. ಆಳುವವರಿಗೆ ಹಗರಣ ಬಯಲಿಗೆ ಬರುತ್ತದೆ ಎಂಬ ಭಯವಿದೆ’ ಎಂದು ಕುಟುಕಿದರು.</p>.<p>‘ರಾಜ್ಯದಲ್ಲಿ ರಾಜಕೀಯದ ದಿಕ್ಕು ಬದಲಾಗುತ್ತಿದೆ. ಬಡ ಜನರ, ರೈತರ ಸಮಸ್ಯೆ ಪರಿಹರಿಸುವ ಕಡೆ ಹೆಚ್ಚು ಗಮನ ಹರಿಸಿದ್ದೇವೆ. ಮತ ನೀಡಿದವರ ಋಣ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಜನರ ಹಿತ ಕಾಯುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 23 ಮಂದಿ ಕೊರೊನಾ ಸೋಂಕಿತರು ಮೃತಪಟ್ಟರೂ ಸರ್ಕಾರ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿಲ್ಲ. ಈ ವ್ಯವಸ್ಥೆ ಯಾವ ಕಡೆ ಸಾಗುತ್ತಿದೆ?’ ಎಂದು ಶಾಸಕ ಕೆ.ಆರ್.ರಮೇಶ್ಕುಮಾರ್ ಮಾರ್ಮಿಕವಾಗಿ ಪ್ರಶ್ನಿಸಿದರು.</p>.<p>ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೋವಿಡ್ನಿಂದ ರಾಜ್ಯದಲ್ಲಿ ಸಾಕಷ್ಟು ಮಂದಿ ಮೃತಪಟ್ಟರು. ಸರ್ಕಾರಕ್ಕೆ ಇದರ ಗಂಭೀರತೆ ಅರ್ಥವಾಗದೆ ಹೋಯಿತು. ವಿಪಕ್ಷದವರು ಸರ್ಕಾರವನ್ನು ಖಂಡಿಸಿದರೆ ಮಾಧ್ಯಮಗಳು ವಾಸ್ತವ ಬಿಟ್ಟು, ಮೊದಲ ಮತ್ತು ಕೊನೆಯ ಮಾತು ಬಿತ್ತರಿಸುತ್ತವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ರಾಜ್ಯದಲ್ಲಿ ವ್ಯವಸ್ಥೆ ಯಾವು ದಿಕ್ಕಿನಲ್ಲಿ ಸಾಗುತ್ತಿದೆ. ವಿಪಕ್ಷಗಳು ತಪ್ಪು ಖಂಡಿಸುತ್ತಿದ್ದರೂ ಬೆಂಬಲ ನೀಡಬೇಕಾದ ಮಾಧ್ಯಮಗಳು ಬೇರೆ ವಿಚಾರ ಪ್ರಕಟಿಸುತ್ತಿವೆ. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿರುವ ಜನರೇ ಮುಂದೆ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತಾರೆ’ ಎಂದು ಹೇಳಿದರು.</p>.<p>‘ರಫೆಲ್ ಯುದ್ಧ ವಿಮಾನ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಫ್ರಾನ್ಸ್ ಸಿದ್ಧವಿದೆ. ಆದರೆ, ನಮ್ಮ ದೆಶದವರು ಅವಕಾಶ ನೀಡುತ್ತಿಲ್ಲ. ಈ ಹಗರಣದಲ್ಲಿ ಭಾಗಿಯಾಗಿರುವ ಕಾರಣಕ್ಕಾಗಿಯೇ ತನಿಖೆ ಬೇಡ ಎನ್ನುತ್ತಿದ್ದಾರೆ. ಆಳುವವರಿಗೆ ಹಗರಣ ಬಯಲಿಗೆ ಬರುತ್ತದೆ ಎಂಬ ಭಯವಿದೆ’ ಎಂದು ಕುಟುಕಿದರು.</p>.<p>‘ರಾಜ್ಯದಲ್ಲಿ ರಾಜಕೀಯದ ದಿಕ್ಕು ಬದಲಾಗುತ್ತಿದೆ. ಬಡ ಜನರ, ರೈತರ ಸಮಸ್ಯೆ ಪರಿಹರಿಸುವ ಕಡೆ ಹೆಚ್ಚು ಗಮನ ಹರಿಸಿದ್ದೇವೆ. ಮತ ನೀಡಿದವರ ಋಣ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಜನರ ಹಿತ ಕಾಯುವ ಕೆಲಸ ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>